AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Holiday: ಬಿಎಸ್​ಇ, ಎನ್​ಎಸ್​ಇ ಸೇರಿದಂತೆ ಇತರ ಮಾರುಕಟ್ಟೆಗಳಿಗೆ ಇನ್ನು 4 ದಿನ ರಜಾ

ಏಪ್ರಿಲ್ 14ರಿಂದ ಆರಂಭಗೊಂಡಂತೆ 4 ದಿನಗಳ ಕಾಲ ಷೇರು ಮಾರುಕಟ್ಟೆಯ ವಿನಿಮಯ ಕೇಂದ್ರಗಳಾದ ಬಿಎಸ್​ಇ ಮತ್ತು ಎನ್​ಎಸ್​ಇ ಮತ್ತಿತರವು ಕಾರ್ಯ ನಿರ್ವಹಿಸುವುದಿಲ್ಲ. ಇಲ್ಲಿದೆ ಆ ಬಗ್ಗೆ ವಿವರ.

Stock Market Holiday: ಬಿಎಸ್​ಇ, ಎನ್​ಎಸ್​ಇ ಸೇರಿದಂತೆ ಇತರ ಮಾರುಕಟ್ಟೆಗಳಿಗೆ ಇನ್ನು 4 ದಿನ ರಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 14, 2022 | 11:37 AM

Share

ರಾಷ್ಟ್ರೀಯ ವಿನಿಮಯ ಕೇಂದ್ರ (NSE) ಮತ್ತು ಬಿಎಸ್​ಇ ಅಂಬೇಡ್ಕರ್​ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ಹಾಗೂ ಗುಡ್​ಫ್ರೈಡೇ ಆದ ಏಪ್ರಿಲ್ 15ರಂದು ಕಾರ್ಯ ನಿರ್ವಹಿಸುವುದಿಲ್ಲ. ಇದರ ಜತೆಗೆ ಏಪ್ರಿಲ್ 16ಕ್ಕೆ ಶನಿವಾರ ಮತ್ತು 17ಕ್ಕೆ ಭಾನುವಾರ ಸಹ ರಜಾ ಇರುತ್ತದೆ. ಸಗಟು ಕಮಾಡಿಟಿ ಮಾರುಕಟ್ಟೆಗಳು, ಅದರಲ್ಲಿ ಲೋಹ ಮತ್ತು ಚಿನಿವಾರ ಮಾರುಕಟ್ಟೆ ಸಹ ಮುಚ್ಚಿರುತ್ತದೆ. ಅಷ್ಟೇ ಅಲ್ಲ, ವಿದೇಶೀ ವಿನಿಮಯ ಹಾಗೂ ಕಮಾಡಿಟಿ ಫ್ಯೂಚರ್ಸ್ ಮಾರುಕಟ್ಟೆಯಲ್ಲೂ ಯಾವುದೇ ವಹಿವಾಟು ನಡೆಯುವುದಿಲ್ಲ. ಏಪ್ರಿಲ್ 13ನೇ ತಾರೀಕಿನ ಬುಧವಾರದಂದು ಸೆನ್ಸೆಕ್ಸ್ 237.44 ಪಾಯಿಂಟ್ಸ್ ಅಥವಾ ಶೇ 0.41ರಷ್ಟು ಇಳಿಕೆ ಕಂಡು, 58,338.93 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತ್ತು. ಇನ್ನು ನಿಫ್ಟಿ 54.60 ಪಾಯಿಂಟ್ಸ್ ಅಥವಾ ಶೇ 0.31ರಷ್ಟು ಕುಸಿದು, 17,475.70 ಪಾಯಿಂಟ್ಸ್​​ನಲ್ಲಿ ದಿನಾಂತ್ಯ ಕಂಡಿತ್ತು. ಕೇವಲ ಮೂರು ದಿನದ ವಾರದಲ್ಲಿ ಸೆನ್ಸೆಕ್ಸ್ 1108.25 ಪಾಯಿಂಟ್ಸ್ ಅಥವಾ ಶೇ 1.8ರಷ್ಟು ಮತ್ತು ನಿಫ್ಟಿ 308.65 ಪಾಯಿಂಟ್ಸ್ ಅಥವಾ ಶೇ 1.7ರಷ್ಟು ಕುಸಿತ ಕಂಡಿದೆ.

ಮಾರುತಿ ಸುಜುಕಿ, ಎಚ್​ಡಿಎಫ್​ಸಿ, ಎಚ್​ಡಿಎಫ್​ಸಿ ಬ್ಯಾಂಕ್, ಟಾಟಾ ಮೋಟಾರ್ಸ್ ಮತ್ತು ಡಾ ರೆಡ್ಡೀಸ್​ ಲ್ಯಾಬ್ಸ್ ಷೇರುಗಳು ನಿಫ್ಟಿಯಲ್ಲಿ ಭಾರೀ ನಷ್ಟವನ್ನು ಅನುಭವಿಸಿದರೆ, ಒಎನ್​ಜಿಸಿ, ಅಪೋಲೋ ಹಾಸ್ಪಿಟಲ್ಸ್, ಐಟಿಸಿ, ಸನ್​ ಫಾರ್ಮಾ ಮತ್ತು ಯುಪಿಎಲ್ ಗಳಿಕೆ ಕಂಡವು. ವಲಯವಾರು ಗಮನಿಸುವುದಾದರೆ, ನಿಫ್ಟಿ ವಾಹನ ಮತ್ತು ಬ್ಯಾಂಕ್ ತಲಾ ಶೇ 0.5ರಷ್ಟು ನಷ್ಟ ಅನುಭವಿಸಿವೆ. ಎಫ್​ಎಂಸಿಜಿ, ಲೋಹ, ಎನರ್ಜಿ ಹಾಗೂ ಫಾರ್ಮಾದಲ್ಲಿ ಖರೀದಿ ಬಂತು. ಬಿಎಸ್​ಇ ಮಿಡ್​ಕ್ಯಾಪ್ ಶೇ 0.21ರಷ್ಟು ಇಳಿಕೆಯಾದರೆ, ಸ್ಮಾಲ್​ಕ್ಯಾಪ್ ಸೂಚ್ಯಂಕ ಶೇ 0.27ರಷ್ಟು ಇಳಿದಿದೆ.

“ಸ್ಥಳೀಯವಾಗಿ ಹೆಚ್ಚಿನ ಹಣದುಬ್ಬರ ಮತ್ತು ಆರ್ಥಿಕತೆ ಮೇಲೆ ಅದರ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆದಾರರು ಜಾಗರೂಕರಾಗಿರುವುದರಿಂದ ಕಡಿಮೆ ದಿನಗಳಳ ವಹಿವಾಟಿನ ವಾರದಲ್ಲಿ ದೇಶೀಯ ಮಾರುಕಟ್ಟೆಗಳು ಕೆಲವು ಮಾರಾಟದ ಒತ್ತಡಕ್ಕೆ ಸಾಕ್ಷಿಯಾಗಿದೆ,” ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್‌ನ ರೀಟೇಲ್ ಸಂಶೋಧನೆಯ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ.

“ಇನ್ನು ಮುಂದಕ್ಕೆ ಹಣದುಬ್ಬರದ ಒತ್ತಡವು ಮುಂದುವರಿಯುವವರೆಗೆ ಮಾರುಕಟ್ಟೆಯು ಅಸ್ಥಿರವಾಗಿ ಉಳಿಯುವ ಸಾಧ್ಯತೆಯಿದ್ದು, ಜಾಗತಿಕವಾಗಿ ಕೇಂದ್ರೀಯ ಬ್ಯಾಂಕ್‌ಗಳಿಂದ ಆಕ್ರಮಣಕಾರಿ ದರ ಏರಿಕೆಗೆ ಅವಕಾಶವನ್ನು ಹೆಚ್ಚಿಸುತ್ತದೆ,” ಎಂದಿದ್ದಾರೆ.

ಇದನ್ನೂ ಓದಿ: How To Invest In US Stocks: ಅಮೆರಿಕದ ಸ್ಟಾಕ್​ಗಳಲ್ಲಿ ಎನ್​ಎಸ್​ಇ ಐಎಫ್​ಎಸ್​ಸಿ ಮೂಲಕ ಹೂಡಿಕೆ ಮಾಡುವುದು ಹೇಗೆ?

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ