AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Holiday: ಮೇ 3ನೇ ತಾರೀಕಿಗೆ ಷೇರು ಮಾರುಕಟ್ಟೆ ರಜಾ, ಬ್ಯಾಂಕ್​ಗಳು ಕಾರ್ಯ ನಿರ್ವಹಿಸಲ್ಲ

ರಂಜಾನ್ ಪ್ರಯುಕ್ತ ಮೇ 3ನೇ ತಾರೀಕಿನ ಮಂಗಳವಾರದಂದು ಷೇರುಪೇಟೆ ವಿನಿಮಯ ಕೇಂದ್ರಗಳಾದ ಬಿಎಸ್​ಇ, ಎನ್​ಎಸ್​ಇಗೆ ರಜಾ ಇರುತ್ತದೆ.

Stock Market Holiday: ಮೇ 3ನೇ ತಾರೀಕಿಗೆ ಷೇರು ಮಾರುಕಟ್ಟೆ ರಜಾ, ಬ್ಯಾಂಕ್​ಗಳು ಕಾರ್ಯ ನಿರ್ವಹಿಸಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 02, 2022 | 12:31 PM

Share

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ (BSE) ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (NSE) ನಾಳೆ (ಮೇ 3, 2022) ಈದ್-ಉಲ್-ಫಿತ್ರ್​ (Id-Ul-Fitr) ಪ್ರಯುಕ್ತ ರಜಾ ಇದ್ದು, ಕಾರ್ಯ ನಿರ್ವಹಣೆ ಇರುವುದಿಲ್ಲ. ಭಗವಾನ್ ಶ್ರೀ ಪರಶುರಾಮ ಜಯಂತಿ, ರಂಜಾನ್-ಈದ್ (ಈದ್-ಉಲ್-ಫಿತ್ರ್), ಬಸವ ಜಯಂತಿ ಮತ್ತು ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಮೇ 3ನೇ, 2022ರಂದು ಭಾರತದಾದ್ಯಂತ ಬ್ಯಾಂಕ್‌ಗಳು ಸಹ ಮುಚ್ಚಿರುತ್ತವೆ. ತಿರುವನಂತಪುರಂ ಮತ್ತು ಕೊಚ್ಚಿಯಲ್ಲಿ ಮಾತ್ರ ಬ್ಯಾಂಕ್‌ಗಳು ಮೇ 3ರಂದು ತೆರೆದಿರುತ್ತವೆ. ಆರ್‌ಬಿಐ ರಜೆಯ ಕ್ಯಾಲೆಂಡರ್ ಪ್ರಕಾರ, ಈದ್-ಉಲ್-ಫಿತ್ರ್​ ಆಚರಿಸಲು ತಿರುವನಂತಪುರಂ ಮತ್ತು ಕೊಚ್ಚಿಯಲ್ಲಿ ಮೇ 2, 2022ರಂದು ಬ್ಯಾಂಕ್​ಗಳು ಮುಚ್ಚಿರುತ್ತವೆ.

ಈದ್ 2022 ಮೇ 3 ರಂದು ಭಾರತದಲ್ಲಿ ಈದ್-ಉಲ್-ಫಿತ್ರ್ ಆಚರಿಸಲಾಗುವುದು ಎಂದು ದೇಶಾದ್ಯಂತದ ಧರ್ಮಗುರುಗಳು ಘೋಷಿಸಿದರು. ಲಖನೌದ ಮರ್ಕಝಿ ಚಂದ್ ಸಮಿತಿಯು ಭಾನುವಾರ ಸಂಜೆ ಶವ್ವಾಲ್ ಅರ್ಧಚಂದ್ರಾಕೃತಿಯನ್ನು ನೋಡಲಿಲ್ಲ. ಆದ್ದರಿಂದ ಮೇ 2 ಅನ್ನು ಕೊನೆಯ ದಿನವಾಗಿ ಆಚರಿಸಲಾಗುತ್ತದೆ ಎಂದು ಹೇಳಿದೆ. ಮೇ 3ರಂದು ರಂಜಾನ್ ಮತ್ತು ಈದ್- ಉಲ್-ಫಿತ್ರ್ ಆಚರಿಸಲಾಗುತ್ತದೆ. ಇಸ್ಲಾಮಿಕ್ ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಗುರುತಿಸಲು ಜಗತ್ತಿನಾದ್ಯಂತ ಮುಸ್ಲಿಮರು ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್ ರಂಜಾನ್ ಉಪವಾಸದ ತಿಂಗಳ ಅಂತ್ಯವನ್ನು ಸೂಚಿಸುತ್ತದೆ. ಇಸ್ಲಾಮಿಕ್ ಚಂದ್ರನ ಕ್ಯಾಲೆಂಡರ್‌ನ 10ನೇ ತಿಂಗಳಾದ ಶವ್ವಾಲ್‌ನ ಮೊದಲ ದಿನದಂದು ಹಬ್ಬವನ್ನು ಆಚರಿಸಲಾಗುತ್ತದೆ. ಹತ್ ಕಾ ಸೇವಿಯಾನ್, ನಮ್ಮಕ್ ಕಾ ಸೇವಿಯಾನ್, ಚಕ್ಲೆ ಕಾ ಸೇವಿಯಾನ್ ಮತ್ತು ಲಡ್ಡು ಸೇವಿಯನ್​ನಂತಹ ವಿವಿಧ ಪ್ರಭೇದಗಳ ಅಡಿಯಲ್ಲಿ ಬರುವ ಶಾವಿಗೆ ಅನ್ನು ಹಂಚುವ ಮೂಲಕ ಹಬ್ಬವನ್ನು ಆಚರಿಸಲಾಗುತ್ತದೆ. ಈ ಎಲ್ಲ ಬಗೆಯ ಶೀರ್‌ಕುರ್ಮಾ ಎಂಬ ಭಕ್ಷ್ಯದಲ್ಲಿ ಬಳಸಬಹುದು, ಇದನ್ನು ಈದ್‌ನಲ್ಲಿ ತಯಾರಿಸಲಾಗುತ್ತದೆ ಮತ್ತು ಸ್ನೇಹಿತರು ಮತ್ತು ಸಂಬಂಧಿಕರ ಮಧ್ಯೆ ವಿತರಿಸಲಾಗುತ್ತದೆ.

ಹೆಚ್ಚಿನ ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: Ramadan Eid Moon Sight: ರಂಜಾನ್ ಹಬ್ಬದಲ್ಲಿ ಚಂದ್ರನ ದರ್ಶನಕ್ಕಿದೆ ವಿಶೇಷ ಮಹತ್ವ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್