AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಕರಡಿ ಹಿಡಿತ”ದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದಿನ ಷೇರುಪೇಟೆಯಲ್ಲಿ ಏರಿಕೆ, ಇಳಿಕೆ ಕಂಡ ಪ್ರಮುಖ ಕಂಪೆನಿಗಳ ವಿವರ ಇಲ್ಲಿದೆ.

ಕರಡಿ ಹಿಡಿತದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 5:14 PM

Share

ಈ ಹಿಂದಿನ ಸೆಷನ್​ನಲ್ಲಿ ಸ್ವಲ್ಪ ಮಟ್ಟಿಗೆ ತುಸು ನಿರಾಳವಾದಂತೆ ಕಂಡುಬಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 17ನೇ ತಾರೀಕಿನ ಶುಕ್ರವಾರದಂದು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತು. ಮಾರುಕಟ್ಟೆ ಸೂಚ್ಯಂಕಗಳು “ಕರಡಿ ಹಿಡಿತ”ಕ್ಕೆ ಸಿಲುಕಿದ್ದರಿಂದ ನಿಫ್ಟಿಯು 17 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಬಂದಿದೆ. ಮಾಹಿತಿ ತಂತ್ರಜ್ಞಾನ ವಲಯವೊಂದನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಮಾರಾಟದ ಒತ್ತಡ ಕಂಡುಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 889.40 ಪಾಯಿಂಟ್ಸ್ ಅಥವಾ ಶೇ 1.54ರಷ್ಟು ಕುಸಿದು, 57,011.74 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 263.20 ಪಾಯಿಂಟ್ಸ್​ ಅಥವಾ ಶೇ 1.53ರಷ್ಟು ನೆಲ ಕಚ್ಚಿ, 16,985.30 ಪಾಯಿಂಟ್ಸ್​​ನೊಂದಿಗೆ ವಹಿವಾಟು ಚುಕ್ತಾಗೊಳಿಸಿತು. ಇಂದಿನ ವಹಿವಾಟಿನಲ್ಲಿ 913 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 2221 ಕಂಪೆನಿ ಷೇರುಗಳು ಇಳಿಕೆ ಕಂಡವು. 76 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಲಯವಾರು ನೋಡುವುದಾದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಹೊರತುಪಡಿಸಿ, ಉಳಿದೆಲ್ಲವೂ ಇಳಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಇಳಿಕೆ ದಾಖಲಿಸಿದವು. ಇಂದಿನ ವಹಿವಾಟಿನಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹೀಗಿದೆ:

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ವಿಪ್ರೋ ಶೇ 4.11 ಇನ್ಫೋಸಿಸ್ ಶೇ 2.78 ಎಚ್​ಸಿಎಲ್​ ಟೆಕ್ ಶೇ 1.00 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 0.84 ಸನ್​ ಫಾರ್ಮಾ ಶೇ 0.59

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ಇಂಡಸ್​ಇಂಡ್ ಬ್ಯಾಂಕ್ ಶೇ -4.88 ಟಾಟಾ ಮೋಟಾರ್ಸ್ ಶೇ -4.42 ಒಎನ್​ಜಿಸಿ ಶೇ -4.09 ಕೊಟಕ್ ಮಹೀಂದ್ರಾ ಶೇ -3.60 ಹಿಂದೂಸ್ತಾನ್ ಯುನಿಲಿವರ್​ ಲಿಮಿಟೆಡ್ ಶೇ -3.43

ಇದನ್ನೂ ಓದಿ: Rakesh Jhunjhunwala: ಕೇವಲ 10 ನಿಮಿಷದಲ್ಲಿ ಈ ಷೇರಿನಿಂದ 318 ಕೋಟಿ ರೂ. ಕಳೆದುಕೊಂಡ ರಾಕೇಶ್ ಜುಂಜುನ್​ವಾಲಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ