AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಕರಡಿ ಹಿಡಿತ”ದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದಿನ ಷೇರುಪೇಟೆಯಲ್ಲಿ ಏರಿಕೆ, ಇಳಿಕೆ ಕಂಡ ಪ್ರಮುಖ ಕಂಪೆನಿಗಳ ವಿವರ ಇಲ್ಲಿದೆ.

ಕರಡಿ ಹಿಡಿತದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 17, 2021 | 5:14 PM

ಈ ಹಿಂದಿನ ಸೆಷನ್​ನಲ್ಲಿ ಸ್ವಲ್ಪ ಮಟ್ಟಿಗೆ ತುಸು ನಿರಾಳವಾದಂತೆ ಕಂಡುಬಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 17ನೇ ತಾರೀಕಿನ ಶುಕ್ರವಾರದಂದು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತು. ಮಾರುಕಟ್ಟೆ ಸೂಚ್ಯಂಕಗಳು “ಕರಡಿ ಹಿಡಿತ”ಕ್ಕೆ ಸಿಲುಕಿದ್ದರಿಂದ ನಿಫ್ಟಿಯು 17 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಬಂದಿದೆ. ಮಾಹಿತಿ ತಂತ್ರಜ್ಞಾನ ವಲಯವೊಂದನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಮಾರಾಟದ ಒತ್ತಡ ಕಂಡುಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 889.40 ಪಾಯಿಂಟ್ಸ್ ಅಥವಾ ಶೇ 1.54ರಷ್ಟು ಕುಸಿದು, 57,011.74 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 263.20 ಪಾಯಿಂಟ್ಸ್​ ಅಥವಾ ಶೇ 1.53ರಷ್ಟು ನೆಲ ಕಚ್ಚಿ, 16,985.30 ಪಾಯಿಂಟ್ಸ್​​ನೊಂದಿಗೆ ವಹಿವಾಟು ಚುಕ್ತಾಗೊಳಿಸಿತು. ಇಂದಿನ ವಹಿವಾಟಿನಲ್ಲಿ 913 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 2221 ಕಂಪೆನಿ ಷೇರುಗಳು ಇಳಿಕೆ ಕಂಡವು. 76 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಲಯವಾರು ನೋಡುವುದಾದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಹೊರತುಪಡಿಸಿ, ಉಳಿದೆಲ್ಲವೂ ಇಳಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಇಳಿಕೆ ದಾಖಲಿಸಿದವು. ಇಂದಿನ ವಹಿವಾಟಿನಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹೀಗಿದೆ:

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ವಿಪ್ರೋ ಶೇ 4.11 ಇನ್ಫೋಸಿಸ್ ಶೇ 2.78 ಎಚ್​ಸಿಎಲ್​ ಟೆಕ್ ಶೇ 1.00 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 0.84 ಸನ್​ ಫಾರ್ಮಾ ಶೇ 0.59

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ಇಂಡಸ್​ಇಂಡ್ ಬ್ಯಾಂಕ್ ಶೇ -4.88 ಟಾಟಾ ಮೋಟಾರ್ಸ್ ಶೇ -4.42 ಒಎನ್​ಜಿಸಿ ಶೇ -4.09 ಕೊಟಕ್ ಮಹೀಂದ್ರಾ ಶೇ -3.60 ಹಿಂದೂಸ್ತಾನ್ ಯುನಿಲಿವರ್​ ಲಿಮಿಟೆಡ್ ಶೇ -3.43

ಇದನ್ನೂ ಓದಿ: Rakesh Jhunjhunwala: ಕೇವಲ 10 ನಿಮಿಷದಲ್ಲಿ ಈ ಷೇರಿನಿಂದ 318 ಕೋಟಿ ರೂ. ಕಳೆದುಕೊಂಡ ರಾಕೇಶ್ ಜುಂಜುನ್​ವಾಲಾ

ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್