AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಕರಡಿ ಹಿಡಿತ”ದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದಿನ ಷೇರುಪೇಟೆಯಲ್ಲಿ ಏರಿಕೆ, ಇಳಿಕೆ ಕಂಡ ಪ್ರಮುಖ ಕಂಪೆನಿಗಳ ವಿವರ ಇಲ್ಲಿದೆ.

ಕರಡಿ ಹಿಡಿತದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2021 | 5:14 PM

Share

ಈ ಹಿಂದಿನ ಸೆಷನ್​ನಲ್ಲಿ ಸ್ವಲ್ಪ ಮಟ್ಟಿಗೆ ತುಸು ನಿರಾಳವಾದಂತೆ ಕಂಡುಬಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 17ನೇ ತಾರೀಕಿನ ಶುಕ್ರವಾರದಂದು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತು. ಮಾರುಕಟ್ಟೆ ಸೂಚ್ಯಂಕಗಳು “ಕರಡಿ ಹಿಡಿತ”ಕ್ಕೆ ಸಿಲುಕಿದ್ದರಿಂದ ನಿಫ್ಟಿಯು 17 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಬಂದಿದೆ. ಮಾಹಿತಿ ತಂತ್ರಜ್ಞಾನ ವಲಯವೊಂದನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಮಾರಾಟದ ಒತ್ತಡ ಕಂಡುಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 889.40 ಪಾಯಿಂಟ್ಸ್ ಅಥವಾ ಶೇ 1.54ರಷ್ಟು ಕುಸಿದು, 57,011.74 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 263.20 ಪಾಯಿಂಟ್ಸ್​ ಅಥವಾ ಶೇ 1.53ರಷ್ಟು ನೆಲ ಕಚ್ಚಿ, 16,985.30 ಪಾಯಿಂಟ್ಸ್​​ನೊಂದಿಗೆ ವಹಿವಾಟು ಚುಕ್ತಾಗೊಳಿಸಿತು. ಇಂದಿನ ವಹಿವಾಟಿನಲ್ಲಿ 913 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 2221 ಕಂಪೆನಿ ಷೇರುಗಳು ಇಳಿಕೆ ಕಂಡವು. 76 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಲಯವಾರು ನೋಡುವುದಾದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಹೊರತುಪಡಿಸಿ, ಉಳಿದೆಲ್ಲವೂ ಇಳಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಇಳಿಕೆ ದಾಖಲಿಸಿದವು. ಇಂದಿನ ವಹಿವಾಟಿನಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹೀಗಿದೆ:

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ವಿಪ್ರೋ ಶೇ 4.11 ಇನ್ಫೋಸಿಸ್ ಶೇ 2.78 ಎಚ್​ಸಿಎಲ್​ ಟೆಕ್ ಶೇ 1.00 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 0.84 ಸನ್​ ಫಾರ್ಮಾ ಶೇ 0.59

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ಇಂಡಸ್​ಇಂಡ್ ಬ್ಯಾಂಕ್ ಶೇ -4.88 ಟಾಟಾ ಮೋಟಾರ್ಸ್ ಶೇ -4.42 ಒಎನ್​ಜಿಸಿ ಶೇ -4.09 ಕೊಟಕ್ ಮಹೀಂದ್ರಾ ಶೇ -3.60 ಹಿಂದೂಸ್ತಾನ್ ಯುನಿಲಿವರ್​ ಲಿಮಿಟೆಡ್ ಶೇ -3.43

ಇದನ್ನೂ ಓದಿ: Rakesh Jhunjhunwala: ಕೇವಲ 10 ನಿಮಿಷದಲ್ಲಿ ಈ ಷೇರಿನಿಂದ 318 ಕೋಟಿ ರೂ. ಕಳೆದುಕೊಂಡ ರಾಕೇಶ್ ಜುಂಜುನ್​ವಾಲಾ

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!