AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸತತ ಮೂರನೇ ದಿನ ಷೇರುಪೇಟೆ ಕುಸಿತ; ಸೆನ್ಸೆಕ್ಸ್ 336 ಪಾಯಿಂಟ್ಸ್, ನಿಫ್ಟಿ 88 ಪಾಯಿಂಟ್ಸ್ ಇಳಿಕೆ

ಷೇರು ಮಾರುಕಟ್ಟೆ ಸೂಚ್ಯಂಕಗಳು ಸತತ ಮೂರನೇ ಸೆಷನ್ ಆದ ಅಕ್ಟೋಬರ್ 21ನೇ ತಾರೀಕಿನ ಗುರುವಾರ ಕೂಡ ಇಳಿಕೆ ಆಗಿದೆ. ನಿಫ್ಟಿಯಲ್ಲಿನ ಏರಿಕೆ ಹಾಗೂ ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: ಸತತ ಮೂರನೇ ದಿನ ಷೇರುಪೇಟೆ ಕುಸಿತ; ಸೆನ್ಸೆಕ್ಸ್ 336 ಪಾಯಿಂಟ್ಸ್, ನಿಫ್ಟಿ 88 ಪಾಯಿಂಟ್ಸ್ ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Oct 21, 2021 | 4:44 PM

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಅಕ್ಟೋಬರ್ 21ನೇ ತಾರೀಕಿನ ಗುರುವಾರದಂದು ಸತತ ಮೂರನೇ ಸೆಷನ್ ಕುಸಿತ ಕಂಡಿದೆ. ಮಾಹಿತಿ ತಂತ್ರಜ್ಞಾನ ಮತ್ತು ಲೋಹದ ಷೇರುಗಳು ಮಾರುಕಟ್ಟೆ ಇಳಿಕೆಗೆ ಕಾರಣವಾಗಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ 336.46 ಪಾಯಿಂಟ್ಸ್ ಅಥವಾ ಶೇ 0.55ರಷ್ಟು ಕುಸಿತ ಕಂಡು, 60,923.50 ಪಾಯಿಂಟ್ಸ್​ನೊಂದಿಗೆ ವ್ಯವಹಾರವನ್ನು ಮುಗಿಸಿದೆ. ಇನ್ನು ನಿಫ್ಟಿ 88.50 ಪಾಯಿಂಟ್ಸ್ ಅಥವಾ ಶೇ 0.48ರಷ್ಟು ಇಳಿಕೆಯಾಗಿ 18,178.10 ಪಾಯಿಂಟ್ಸ್​ನೊಂದಿಗೆ ವಹಿವಾಟು ಚುಕ್ತಾಗೊಳಿಸಿದೆ. ವಲಯಗಳಲ್ಲಿ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳು, ವಾಹನ, ತೈಲ ಮತ್ತು ಅನಿಲ ಹಾಗೂ ವಿದ್ಯುತ್ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯಗೊಂಡಿದೆ. ಇನ್ನು ಲೋಹ, ಮಾಹಿತಿ ತಂತ್ರಜ್ಞಾನ, ಎನರ್ಜಿ ಹಾಗೂ ಎಫ್​ಎಂಸಿಜಿ ಸೂಚ್ಯಂಕಗಳು ಇಳಿಕೆ ಕಂಡಿವೆ.

ಬಿಎಸ್​ಇ ಮಿಡ್​ಕ್ಯಾಪ್​ ಮತ್ತು ಸ್ಮಾಲ್​ಕ್ಯಾಪ್​ ಸೂಚ್ಯಂಕಗಳು ನೆಗೆಟಿವ್ ಆಗಿಯೇ ದಿನ ಮುಗಿಸಿವೆ. ಇಂದಿ ವಹಿವಾಟಿನಲ್ಲಿ 1580 ಕಂಪೆನಿಯ ಷೇರುಗಳು ಏರಿಕೆ ದಾಖಲಿಸಿದರೆ, 1627 ಕಂಪೆನಿಯ ಷೇರುಗಳು ಇಳಿಕೆ ಕಂಡವು. ಇನ್ನು 130 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನಿಫ್ಟಿಯಲ್ಲಿ ಏರಿಕೆ ಹಾಗೂ ಇಳಿಕೆ ಕಂಡ ಪ್ರಮುಖ ಕಂಪೆನಿಗಳ ವಿವರ ಇಲ್ಲಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಕೊಟಕ್ ಮಹೀಂದ್ರಾ ಶೇ 6.37 ಟಾಟಾ ಮೋಟಾರ್ಸ್ ಶೇ 4.33 ಗ್ರಾಸಿಮ್ ಶೇ 3.15 ಬಿಪಿಸಿಎಲ್ ಶೇ 2.26 ಎಚ್​ಡಿಎಫ್​ಸಿ ಶೇ 1.75

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಏಷ್ಯನ್ ಪೇಂಟ್ಸ್ ಶೇ -5.29 ಹಿಂಡಾಲ್ಕೋ ಶೇ -3.74 ರಿಲಯನ್ಸ್ ಶೇ -2.88 ಇನ್ಫೋಸಿಸ್ ಶೇ -2.70 ಡಾ.ರೆಡ್ಡೀಸ್ ಲ್ಯಾಬ್ಸ್ ಶೇ -2.15

ಇದನ್ನೂ ಓದಿ: Do’s And Don’ts In Share Market: ಷೇರು ಮಾರ್ಕೆಟ್​ನಲ್ಲಿ ಮಾಡುವ ಹಾಗೂ ಮಾಡಬಾರದು ಕೆಲಸಗಳಿವು

ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?