AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಏರಿಕೆ ಹಾದಿಗೆ ಮರಳಿದ ಸೆನ್ಸೆಕ್ಸ್, ನಿಫ್ಟಿ; ಶ್ರೀ ಸಿಮೆಂಟ್ಸ್ ಒಂದು ಷೇರಿಗೆ 853 ರೂ. ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 20ನೇ ತಾರೀಕಿನ ಬುಧವಾರದಂದು ಮರಳಿ ಗಳಿಕೆ ಹಾದಿಗೆ ಬಂದಿದೆ. ಇಂದಿನ ವಹಿವಾಟಿನಲ್ಲಿ ಪ್ರಮುಖವಾಗಿ ಏರಿಕೆ, ಇಳಿಕೆ ಷೇರುಗಳ ವಿವರ ಇಲ್ಲಿದೆ.

Closing Bell: ಏರಿಕೆ ಹಾದಿಗೆ ಮರಳಿದ ಸೆನ್ಸೆಕ್ಸ್, ನಿಫ್ಟಿ; ಶ್ರೀ ಸಿಮೆಂಟ್ಸ್ ಒಂದು ಷೇರಿಗೆ 853 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 20, 2022 | 5:57 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕವಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏಪ್ರಿಲ್ 20ನೇ ತಾರೀಕಿನ ಬುಧವಾರದಂದು ಏರಿಕೆ ದಾಖಲಿಸಿವೆ. ಸೆನ್ಸೆಕ್ಸ್ 574.35 ಪಾಯಿಂಟ್ಸ್ ಅಥವಾ ಶೇ 1.02ರಷ್ಟು ಏರಿಕೆಯಾದರೆ, ನಿಫ್ಟಿ 50 ಸೂಚ್ಯಂಕವು 177.80 ಪಾಯಿಂಟ್ಸ್ ಅಥವಾ ಶೇ 1.05ರಷ್ಟು ಮೇಲೇರಿ 17,136.50 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ಇಂದಿನ ವಹಿವಾಟಿನಲ್ಲಿ 1716 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 1593 ಕಂಪೆನಿ ಷೇರುಗಳು ಇಳಿಕೆ ಕಂಡವು. 111 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ. ವಾಹನ, ಫಾರ್ಮಾಸ್ಯುಟಿಕಲ್ಸ್, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಸೂಚ್ಯಂಕಗಳು ತಲಾ ಶೇ 1ರಿಂದ 2ರಷ್ಟು ಹೆಚ್ಚಳ ಕಂಡವು.

ಇನ್ನು ಲೋಹ ಮತ್ತು ಬ್ಯಾಂಕಿಂಗ್ ಸ್ಟಾಕ್​ಗಳಲ್ಲಿ ಮಾರಾಟ ಕಂಡುವಂತು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯವಾದವು ಈ ದಿನದ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣದ ವಿವರ ಇಲ್ಲಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಿಪಿಸಿಎಲ್ ಶೇ 3.75 ಟಾಟಾ ಮೋಟಾರ್ಸ್ ಶೇ 3.67 ಶ್ರೀ ಸಿಮೆಂಟ್ಸ್ ಶೇ 3.43 ಅಲ್ಟ್ರಾ ಟೆಕ್ ಸಿಮೆಂಟ್ ಶೇ 3.36 ಐಷರ್ ಮೋಟಾರ್ಸ್ ಶೇ 3.34

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಜಾಜ್ ಫೈನಾನ್ಸ್ ಶೇ -3.13 ಐಸಿಐಸಿಐ ಬ್ಯಾಂಕ್ ಶೇ -1.40 ಬಜಾಜ್ ಫಿನ್​ಸರ್ವ್ ಶೇ -1.34 ಜೆಎಸ್​ಡಬ್ಲ್ಯು ಸ್ಟೀಲ್ ಶೇ -1.01 ಒಎನ್​ಜಿಸಿ ಶೇ -0.93

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು