AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸತತ ಮೂರು ದಿನಗಳ ಏರಿಕೆ ಸರಪಳಿ ಕಡಿದುಕೊಂಡ ಷೇರುಪೇಟೆ; ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕದಲ್ಲಿ ಇಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜುಲೈ 11ನೇ ತಾರೀಕಿನ ಸೋಮವಾರದಂದು ಇಳಿಕೆ ದಾಖಲಿಸಿವೆ. ಪ್ರಮುಖವಾಗಿ ಇಳಿಕೆ, ಏರಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸತತ ಮೂರು ದಿನಗಳ ಏರಿಕೆ ಸರಪಳಿ ಕಡಿದುಕೊಂಡ ಷೇರುಪೇಟೆ; ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕದಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jul 11, 2022 | 4:44 PM

Share

ವಾರದ ಮೊದಲ ದಿನವಾದ ಸೋಮವಾರ (ಜುಲೈ 11, 2022) ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಇಳಿಕೆ ಕಂಡಿದೆ. ಸತತ ಮೂರು ಟ್ರೇಡಿಂಗ್ ಸೆಷನ್​ಗಳಿಂದ ಏರಿಕೆ ಕಾಣುತ್ತಾ ಬಂದಿದ್ದ ಷೇರು ಮಾರುಕಟ್ಟೆ ಸೋಮವಾರದ ವಹಿಟಾಗಿದೆ. ಇಂದಿನ ವಹಿವಾಟಿನಲ್ಲಿ ಷೇರು ಮಾರುಕಟ್ಟೆ ಸೂಚ್ಯಂಕವಾದ ಸೆನ್ಸೆಕ್ಸ್ ದಿನದ ಕನಿಷ್ಠ ಮಟ್ಟದ ವಹಿವಾಟು 54,090.5 ಪಾಯಿಂಟ್ಸ್ ಮುಟ್ಟಿತು. ಇನ್ನು ದಿನಾಂತ್ಯಕ್ಕೆ 87 ಪಾಯಿಂಟ್ಸ್ ಅಥವಾ ಶೇ 0.16ರಷ್ಟು ನೆಲಕಚ್ಚಿತು. ಇನ್ನು ನಿಫ್ಟಿ ಸೂಚ್ಯಂಕವು 5 ಪಾಯಿಂಟ್ಸ್ ಅಥವಾ ಶೇ 0.03 ಇಳಿದು, 16,216 ಪಾಯಿಂಟ್ಸ್ ತಲುಪಿಕೊಂಡಿತು. ಸೂಚ್ಯಂಕವು ದಿನದ ಕನಿಷ್ಠ ಮಟ್ಟವಾದ 16,115.5 ಪಾಯಿಂಟ್ಸ್​ ತಲುಪಿತು.

ಈ ಮಧ್ಯೆ ಬಿಎಸ್​ಇ ಸ್ಮಾಲ್​ಕ್ಯಾಪ್ ಸೂಚ್ಯಂಕ ಶೇ 1ರಷ್ಟು ಏರಿಕೆ ಕಂಡರೆ, ಮಿಡ್​ಕ್ಯಾಪ್ ಶೇ 0.6ರಷ್ಟು ಹೆಚ್ಚಳವಾಯಿತು. ವಲಯವಾರು ಗಮನಿಸಿದಾಗ ನಿಫ್ಟಿ ಮಾಹಿತಿ ತಂತ್ರಜ್ಞಾನ ವಲಯವೊಂದನ್ನು ಹೊರತುಪಡಿಸಿ, ಇತರವು ಗಳಿಕೆ ಕಂಡಿದೆ. ಐಟಿ ಸೂಚ್ಯಂಕ ಶೇ 3ರಷ್ಟು ಇಳಿಕೆ ಆಗಿದೆ. ಪಿಎಸ್​ಯು ಬ್ಯಾಂಕ್ ಸೂಚ್ಯಂಕವು ಶೇ 2ರಷ್ಟು ಏರಿಕೆ ಆಗಿದೆ. ಅಂದಹಾಗೆ ಸೋಮವಾರದ ಇಂಟ್ರಾಡೇ ವಹಿವಾಟಿನಲ್ಲಿ ಬಿಎಸ್​ಇಯಲ್ಲಿ ಅದಾನಿ ಸಮೂಹದ ಷೇರು ಶೇ 12ರಷ್ಟು ಏರಿಕೆ ದಾಖಲಿಸಿದೆ. ಅದಾನಿ ಸಮೂಹವು ಟೆಲಿಕಾಂ ಉದ್ಯಮಕ್ಕೆ ಪ್ರವೇಶಿಸುತ್ತದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಐಷರ್ ಮೋಟಾರ್ಸ್ ಶೇ 3.93

ಒಎನ್​ಜಿಸಿ ಶೇ 3.29

ಟಾಟಾ ಸ್ಟೀಲ್ ಶೇ 3.03

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 2.77

ಡಾ ರೆಡ್ಡೀಸ್ ಲ್ಯಾಬ್ಸ್ ಶೇ 2.15

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಭಾರ್ತಿ ಏರ್​ಟೆಲ್ ಶೇ -4.98

ಟಿಸಿಎಸ್ ಶೇ -4.64

ಎಚ್​ಸಿಎಲ್ ಟೆಕ್ ಶೇ -4.07

ಬಿಪಿಸಿಎಲ್​ ಶೇ -2.89

ಇನ್ಫೋಸಿಸ್ ಶೇ -2.73

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್