AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex Stocks: ಷೇರುಪೇಟೆಯಲ್ಲಿ ಒಂದೇ ದಿನ ಹೂಡಿಕೆದಾರರ 4.29 ಲಕ್ಷ ಕೋಟಿ ರೂ. ಉಡೀಸ್; ಸೆನ್ಸೆಕ್ಸ್ 950 ಪಾಯಿಂಟ್ಸ್ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 950 ಪಾಯಿಂಟ್ಸ್, ನಿಫ್ಟಿ 284 ಪಾಯಿಂಟ್ಸ್ ಕುಸಿತವಾಗಿದೆ. ಇಂದಿನ ವಹಿವಾಟಿನಲ್ಲಿ ಕುಸಿತ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Sensex Stocks: ಷೇರುಪೇಟೆಯಲ್ಲಿ ಒಂದೇ ದಿನ ಹೂಡಿಕೆದಾರರ 4.29 ಲಕ್ಷ ಕೋಟಿ ರೂ. ಉಡೀಸ್; ಸೆನ್ಸೆಕ್ಸ್ 950 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 06, 2021 | 5:03 PM

Share

ಕೊರೊನಾದ ಒಮಿಕ್ರಾನ್ ವೇರಿಯಂಟ್​ ವ್ಯಾಪಿಸುತ್ತಿರುವ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆ ಡಿಸೆಂಬರ್ 6ನೇ ತಾರೀಕಿನ ಸೋಮವಾರದಂದು ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳ ಪೈಕಿ ಎನ್​ಎಸ್​ಇ ನಿಫ್ಟಿ 17,000 ಪಾಯಿಂಟ್ಸ್​ಗಳಿಗಿಂತ ಕೆಳಗೆ ದಿನಾಂತ್ಯದ ವ್ಯವಹಾರವನ್ನು ಮುಗಿಸಿದೆ. ಆ ಮೂಲಕ ಷೇರು ಮಾರುಕಟ್ಟೆಯು ಸತತ ಎರಡನೇ ದಿನವೂ ಇಳಿಕೆ ದಾಖಲಿಸಿದೆ. ದಿನಾಂತ್ಯಕ್ಕೆ ಬಿಎಸ್​ಇ ಸೆನ್ಸೆಕ್ಸ್ 949.32 ಪಾಯಿಂಟ್ ಅಥವಾ ಶೇ 1.65ರಷ್ಟು ಇಳಿಕೆಯಾಗಿ 56,747.14 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿದೆ. ಇನ್ನು ಎನ್​ಎಸ್​ಇ ನಿಫ್ಟಿ 284.40 ಪಾಯಿಂಟ್ ಅಥವಾ ಶೇ 1.65ರಷ್ಟು ಕುಸಿದು, 16,912.30 ಪಾಯಿಂಟ್ಸ್​ಗೆ ತಲುಪಿದೆ. ಇಂದಿನ ವಹಿವಾಟಿನಲ್ಲಿ ಸುಮಾರು 1340 ಕಂಪೆನಿಗಳ ಷೇರು ಮೇಲಕ್ಕೆ ಏರಿದರೆ, 1948 ಕಂಪೆನಿಗಳ ಷೇರು ಇಳಿಕೆ ಕಂಡಿವೆ. 165 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಯುಪಿಎಲ್ ಹೊರತುಪಡಿಸಿ ನಿಫ್ಟಿ- 50 ಅಡಿಯಲ್ಲಿನ ಇತರ ಎಲ್ಲ ಷೇರುಗಳು ಇಳಿಕೆ ದಾಖಲಿಸಿದವು. ವಲಯವಾರು ಗಮನಿಸುವುದಾದರೆ, ಮಾಹಿತಿ ತಂತ್ರಜ್ಞಾನ ಸೂಚ್ಯಂಕವು ಶೇಕಡಾ 2 ಕ್ಕಿಂತ ಹೆಚ್ಚು ಕುಸಿದಿದೆ, ಆದರೆ ಇತರ ವಲಯಗಳು ತಲಾ ಶೇಕಡಾ 1ರಷ್ಟು ಕಳೆದುಕೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಕುಸಿದವು. ಷೇರು ಮಾರುಕಟ್ಟೆಯ ಹೂಡಿಕೆದಾರರ ಸಂಪತ್ತು 4.29 ಲಕ್ಷ ಕೋಟಿ ರೂಪಾಯಿ ಕೊಚ್ಚಿಕೊಂಡು ಹೋಯಿತು.

ಎನ್​ಎಸ್​ಇಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಯುಪಿಎಲ್​ ಶೇ 0.53

ಎನ್​ಎಸ್​ಇಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಕೋಲ್ ಇಂಡಿಯಾ ಶೇ -7.01 ಇಂಡಸ್​ಇಂಡ್​ ಬ್ಯಾಂಕ್ ಶೇ -3.73 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -3.45 ಬಜಾಜ್​ ಫಿನ್​ಸರ್ವ್ ಶೇ -3.40 ಎಚ್​ಸಿಎಲ್​ ಟೆಕ್ ಶೇ -2.98

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

Published On - 4:58 pm, Mon, 6 December 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್