AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 571 ಪಾಯಿಂಟ್ಸ್, ನಿಫ್ಟಿ 169 ಪಾಯಿಂಟ್ಸ್ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 571 ಪಾಯಿಂಟ್ಸ್ ಕುಸಿತ ಕಂಡರೆ, ನಿಫ್ಟಿ 169 ಪಾಯಿಂಟ್ಸ್ ಇಳಿಕೆ ಆಗಿದೆ. ನಿಫ್ಟಿಯಲ್ಲಿ ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 571 ಪಾಯಿಂಟ್ಸ್, ನಿಫ್ಟಿ 169 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 21, 2022 | 5:17 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 21ನೇ ತಾರೀಕಿನ ಸೋಮವಾರದಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಬಿಎಸ್​ಇ ಸೆನ್ಸೆಕ್ಸ್ ಸೂಚ್ಯಂಕ 571.44 ಪಾಯಿಂಟ್ಸ್ ಅಥವಾ ಶೇ 0.99ರಷ್ಟು ಇಳಿಕೆಯಾಗಿ, 57,292.49 ಪಾಯಿಂಟ್ಸ್​ನಲ್ಲಿ ದಿನಾಂತ್ಯ ಕಂಡಿದೆ. ಇನ್ನು ನಿಫ್ಟಿ 50 ಸೂಚ್ಯಂಕವು 169.40 ಪಾಯಿಂಟ್ಸ್ ಅಥವಾ ಶೇ 0.98ರಷ್ಟು ಇಳಿಕೆ ಕಂಡಿದೆ. ನಿಫ್ಟಿ ಬ್ಯಾಂಕ್ ಸೂಚ್ಯಂಕವು 410.05 ಪಾಯಿಂಟ್ಸ್​ ಅಥವಾ ಶೇ 1.13ರಷ್ಟು ಕುಸಿದು, 36,018.50ರಲ್ಲಿ ಮುಕ್ತಾಯ ಕಂಡಿದೆ. ಇಂದಿನ ಇಳಿಕೆಗೆ ಟಿಸಿಎಸ್​ ಮತ್ತು ಬ್ಯಾಂಕ್ ಸ್ಟಾಕ್​ಗಳು ಪ್ರಮುಖ ಕಾರಣ ಆದವು. ನಿಫ್ಟಿ 50 ಸೂಚ್ಯಂಕ ಕುಸಿತದಲ್ಲಿ ಪೇಟಿಎಂ ಶೇ 5ರಷ್ಟು ಕೆಳಕ್ಕೆ ಇಳಿದರೆ, ಆಯಿಲ್ ಇಂಡಿಯಾ ಶೇ 7ರಷ್ಟು ಮೇಲೇರಿತು. ಇಂದಿನ ವಹಿವಾಟಿನಲ್ಲಿ 1561 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1965 ಕಂಪೆನಿಯ ಷೇರುಗಳು ಕುಸಿತ ಕಂಡವು. 144 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಇನ್ನು ನಿಫ್ಟಿ ಲೋಹ ಸೂಚ್ಯಂಕವು ಶೇ 1.50ರಷ್ಟು ಮೇಲೇರಿತು. ನಿಫ್ಟಿ ಎಫ್​ಎಂಸಿಜಿ ಸೂಚ್ಯಂಕವು ಶೇ 1.72ರಷ್ಟು ಕುಸಿತ ಕಂಡಿತು. ಡಾಲರ್ ವಿರುದ್ಧ ರೂಪಾಯಿ ಮೌಲ್ಯವು 31 ಪೈಸೆಯಷ್ಟು ನೆಲ ಕಚ್ಚಿ, 76.15ರಲ್ಲಿ (ಪ್ರಾವಿಷನಲ್) ಕೊನೆಗೊಂಡಿತು. ಸೋಮವಾರದ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಕೋಲ್ ಇಂಡಿಯಾ ಶೇ 3.26

ಹಿಂಡಾಲ್ಕೊ ಶೇ 2.28

ಯುಪಿಎಲ್​ ಶೇ 1.88

ಒಎನ್​ಜಿಸಿ ಶೇ 1.32

ಎಚ್​ಡಿಎಫ್​ಸಿ ಬ್ಯಾಂಕ್​ ಶೇ 0.44

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬ್ರಿಟಾನಿಯಾ ಶೇ -3.53

ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -3.17

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -3.14

ಗ್ರಾಸಿಮ್ ಶೇ -3.11

ಶ್ರೀ ಸಿಮೆಂಟ್ಸ್ ಶೇ -2.91

ಇದನ್ನೂ ಓದಿ: Multibagger penny stocks: ಈ ಮಲ್ಟಿಬ್ಯಾಗರ್ ಪೆನ್ನಿ ಸ್ಟಾಕ್​ನಲ್ಲಿ ಹೂಡಿದ 1 ಲಕ್ಷ ರೂಪಾಯಿ 10 ವರ್ಷಗಳಲ್ಲಿ ರೂ. 4 ಕೋಟಿಗೆ

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!