AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Updates: ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ತಲ್ಲಣ; ಟಾಟಾ ಸ್ಟೀಲ್ ಷೇರು ತಲಾ 50 ರೂ. ಕುಸಿತ

ಏಪ್ರಿಲ್ 25ನೇ ತಾರೀಕಿನ ಸೋಮವಾರದಂದು ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿವೆ. ಆ ಬಗ್ಗೆ ವಿವರಗಳು ಇಲ್ಲಿವೆ.

Stock Market Updates: ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ತಲ್ಲಣ; ಟಾಟಾ ಸ್ಟೀಲ್ ಷೇರು ತಲಾ 50 ರೂ. ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 25, 2022 | 10:22 AM

Share

ಏಪ್ರಿಲ್ ತಿಂಗಳ ಕೊನೆ ವಾರದಲ್ಲಿ ನಾವಿದ್ದೇವೆ. ಇದರ ಮೊದಲ ದಿನವಾದ 25ನೇ ತಾರೀಕಿನ ಸೋಮವಾರದಂದು ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಪ್ರಮಾಣದಲ್ಲಿ ಕುಸಿತವನ್ನು ಕಂಡಿವೆ. ಸೆನ್ಸೆಕ್ಸ್ 600 ಪಾಯಿಂಟ್ಸ್​ನಷ್ಟು ನೆಲ ಕಚ್ಚಿದರೆ, ನಿಫ್ಟಿ 17 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಇಳಿಯಿತು. ಕ್ಯಾಪಿಟಲ್ ಗೂಡ್ಸ್, ಎಫ್​ಎಂಸಿಜಿ, ಹೆಲ್ತ್​ಕೇರ್, ತೈಲ ಮತ್ತು ಅನಿಲ. ರಿಯಾಲ್ಟಿ, ಲೋಹ, ಮಾಹಿತಿ ತಂತ್ರಜ್ಞಾನ ವಲಯಗಳು ಶೇ 1ರಿಂದ 3ರಷ್ಟು ನೆಲ ಕಚ್ಚಿದವು. ಸೆನ್ಸೆಕ್ಸ್ ಸೂಚ್ಯಂಕವು ಶುಕ್ರವಾರದ ದಿನಾಂತ್ಯದ ವಹಿವಾಟನ್ನು 57,197.15 ಪಾಯಿಂಟ್ಸ್​ನೊಂದಿಗೆ ಮುಗಿಸಿತ್ತು. ಸೋಮವಾರ ದಿನದ ಆರಂಭ 56,757.64 ಪಾಯಿಂಟ್ಸ್​​ನೊಂದಿಗೆ ಆಗಿದ್ದು, ಕನಿಷ್ಠ ಮಟ್ಟ 56,412.14 ಪಾಯಿಂಟ್ಸ್ ಹಾಗೂ ಗರಿಷ್ಠ ಮಟ್ಟ 56,760.66 ಪಾಯಿಂಟ್ಸ್ ದಾಖಲಿಸಿದೆ.

ಇನ್ನು ನಿಫ್ಟಿಯ ಈ ಹಿಂದಿನ ವ್ಯವಹಾರ 17,171.95 ಪಾಯಿಂಟ್ಸ್​​ನಲ್ಲಿ ಆಗಿತ್ತು. ಸೋಮವಾರದಂದು 17,009.05 ಪಾಯಿಂಟ್ಸ್​​ನೊಂದಿಗೆ ಶುರುವಾಗಿ, ಗರಿಷ್ಠ ಮಟ್ಟ 17,022.65 ಪಾಯಿಂಟ್ಸ್ ಹಾಗೂ ಕನಿಷ್ಠ ಮಟ್ಟ 16,928.60 ಪಾಯಿಂಟ್ಸ್ ಮುಟ್ಟಿ ದಾಖಲೆ ಬರೆದಿದೆ.

ಈ ವರದಿ ಸಿದ್ಧವಾಗುವ ಹೊತ್ತಿಗೆ ಬಿಎಸ್​ಇ ಸೆನ್ಸೆಕ್ಸ್ 570.40 ಪಾಯಿಂಟ್ಸ್ ಅಥವಾ ಶೇ 1.00ರಷ್ಟು ಕೆಳಗೆ ಇಳಿದು, 56,626.75 ಪಾಯಿಂಟ್ಸ್​ನಲ್ಲಿ ವಹಿವಾಟು ನಡೆಸುತ್ತಿದ್ದರೆ, ನಿಫ್ಟಿ ಸೂಚ್ಯಂಕವು 191 ಪಾಯಿಂಟ್ಸ್ ಅಥವಾ ಶೇ 1.11ರಷ್ಟು ಕುಸಿದು 16,981 ಪಾಯಿಂಟ್ಸ್​ನಲ್ಲಿ ವ್ಯವಹರಿಸುತ್ತಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಜಾಜ್ ಆಟೊ ಶೇ 1.74 ಐಸಿಐಸಿಐ ಬ್ಯಾಂಕ್ ಶೇ 1.08 ಹೀರೋ ಮೋಟೋಕಾರ್ಪ್ ಶೇ 1.10 ಮಾರುತಿ ಸುಜುಕಿ ಶೇ 0.66 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 0.52

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಿಪಿಸಿಎಲ್ ಶೇ -4.42 ಟಾಟಾ ಸ್ಟೀಲ್ ಶೇ -3.97 ಜೆಎಸ್​ಡಬ್ಲ್ಯು ಸ್ಟೀಲ್ ಶೇ -3.54 ಬ್ರಿಟಾನಿಯಾ ಶೇ -2.96 ಕೋಲ್ ಇಂಡಿಯಾ ಶೇ -2.87

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್