AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಏರಿಳಿತದ ವಹಿವಾಟಿನಲ್ಲಿ ಸೆನ್ಸೆಕ್ಸ್ 703 ಪಾಯಿಂಟ್ಸ್, ನಿಫ್ಟಿ 215 ಪಾಯಿಂಟ್ಸ್ ಕುಸಿತ

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 19ನೇ ತಾರೀಕಿನ ಮಂಗಳವಾರದಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

Closing Bell: ಷೇರುಪೇಟೆ ಏರಿಳಿತದ ವಹಿವಾಟಿನಲ್ಲಿ ಸೆನ್ಸೆಕ್ಸ್ 703 ಪಾಯಿಂಟ್ಸ್, ನಿಫ್ಟಿ 215 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 19, 2022 | 5:03 PM

Share

ಭಾರೀ ಏರಿಳಿತದಿಂದ ಕೂಡಿದ್ದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಏಪ್ರಿಲ್ 19ನೇ ತಾರೀಕಿನ ಮಂಗಳವಾರದಂದು ಇಳಿಕೆಯಲ್ಲೇ ಮುಕ್ತಾಯ ಕಂಡವು. ನಿಫ್ಟಿ 50 ಸೂಚ್ಯಂಕವು 17000 ಪಾಯಿಂಟ್ಸ್​ಗಿಂತ ಕೆಳಗೆ ಇಳಿಯಿತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 703.59 ಪಾಯಿಂಟ್ಸ್ ಅಥವಾ ಶೇ 1.23 ಪಾಯಿಂಟ್ಸ್ ಕುಸಿತ ಕಂಡು, 56,463.15 ಪಾಯಿಂಟ್ಸ್​ನಲ್ಲಿ ವ್ಯವಹಾರ ಚುಕ್ತಾ ಮಾಡಿತು. ಇನ್ನು ನಿಫ್ಟಿ 215 ಪಾಯಿಂಟ್ಸ್ ಅಥವಾ ಶೇ 1.25ರಷ್ಟು ನೆಲ ಕಚ್ಚಿ, 16,958.70 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿತು. ಇಂದಿನ ವಹಿವಾಟಿನಲ್ಲಿ 1111 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 2216 ಕಂಪೆನಿಯ ಷೇರುಗಳು ಇಳಿಕೆ ಕಂಡವು. ಇನ್ನು 118 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ವಲಯವಾರು ಗಮನಿಸುವುದಾದರೆ, ತೈಲ ಮತ್ತು ಅನಿಲ ಹೊರತುಪಡಿಸಿದಂತೆ ಉಳಿದೆಲ್ಲ ವಲಯಗಳೂ ಇಳಿಕೆಯಲ್ಲೇ ಮುಗಿದವು. ಮಾಹಿತಿ ತಂತ್ರಜ್ಞಾನ, ವಿದ್ಯುತ್, ರಿಯಾಲ್ಟಿ ಮತ್ತು ಎಫ್​ಎಂಸಿಜಿ ವಲಯಗಳು ತಲಾ ಶೇ 2ರಷ್ಟು ಕುಸಿತ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಇಳಿಕೆ ಕಂಡವು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಅಪೋಲೋ ಹಾಸ್ಪಿಟಲ್ ಶೇ 5.75 ಕೋಲ್ ಇಂಡಿಯಾ ಶೇ 4.38 ರಿಲಯನ್ಸ್ ಶೇ 3.81 ಐಸಿಐಸಿಐ ಬ್ಯಾಂಕ್ ಶೇ 1.12 ಬಿಪಿಸಿಎಲ್ ಶೇ 1.10

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎಚ್​ಡಿಎಫ್​ಸಿ ಶೇ -5.45 ಎಚ್​ಡಿಎಫ್​ಸಿ ಲೈಫ್ ಶೇ -4.81 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -4.15 ಎಚ್​ಡಿಎಫ್​ಸಿ ಬ್ಯಾಂಕ್ ಶೇ -3.82 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -3.76

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!