AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಏರಿಳಿತದ ವಹಿವಾಟಿನಲ್ಲಿ ಸೆನ್ಸೆಕ್ಸ್ 703 ಪಾಯಿಂಟ್ಸ್, ನಿಫ್ಟಿ 215 ಪಾಯಿಂಟ್ಸ್ ಕುಸಿತ

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 19ನೇ ತಾರೀಕಿನ ಮಂಗಳವಾರದಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

Closing Bell: ಷೇರುಪೇಟೆ ಏರಿಳಿತದ ವಹಿವಾಟಿನಲ್ಲಿ ಸೆನ್ಸೆಕ್ಸ್ 703 ಪಾಯಿಂಟ್ಸ್, ನಿಫ್ಟಿ 215 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 19, 2022 | 5:03 PM

Share

ಭಾರೀ ಏರಿಳಿತದಿಂದ ಕೂಡಿದ್ದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಏಪ್ರಿಲ್ 19ನೇ ತಾರೀಕಿನ ಮಂಗಳವಾರದಂದು ಇಳಿಕೆಯಲ್ಲೇ ಮುಕ್ತಾಯ ಕಂಡವು. ನಿಫ್ಟಿ 50 ಸೂಚ್ಯಂಕವು 17000 ಪಾಯಿಂಟ್ಸ್​ಗಿಂತ ಕೆಳಗೆ ಇಳಿಯಿತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 703.59 ಪಾಯಿಂಟ್ಸ್ ಅಥವಾ ಶೇ 1.23 ಪಾಯಿಂಟ್ಸ್ ಕುಸಿತ ಕಂಡು, 56,463.15 ಪಾಯಿಂಟ್ಸ್​ನಲ್ಲಿ ವ್ಯವಹಾರ ಚುಕ್ತಾ ಮಾಡಿತು. ಇನ್ನು ನಿಫ್ಟಿ 215 ಪಾಯಿಂಟ್ಸ್ ಅಥವಾ ಶೇ 1.25ರಷ್ಟು ನೆಲ ಕಚ್ಚಿ, 16,958.70 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿತು. ಇಂದಿನ ವಹಿವಾಟಿನಲ್ಲಿ 1111 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 2216 ಕಂಪೆನಿಯ ಷೇರುಗಳು ಇಳಿಕೆ ಕಂಡವು. ಇನ್ನು 118 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ವಲಯವಾರು ಗಮನಿಸುವುದಾದರೆ, ತೈಲ ಮತ್ತು ಅನಿಲ ಹೊರತುಪಡಿಸಿದಂತೆ ಉಳಿದೆಲ್ಲ ವಲಯಗಳೂ ಇಳಿಕೆಯಲ್ಲೇ ಮುಗಿದವು. ಮಾಹಿತಿ ತಂತ್ರಜ್ಞಾನ, ವಿದ್ಯುತ್, ರಿಯಾಲ್ಟಿ ಮತ್ತು ಎಫ್​ಎಂಸಿಜಿ ವಲಯಗಳು ತಲಾ ಶೇ 2ರಷ್ಟು ಕುಸಿತ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಇಳಿಕೆ ಕಂಡವು.

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಅಪೋಲೋ ಹಾಸ್ಪಿಟಲ್ ಶೇ 5.75 ಕೋಲ್ ಇಂಡಿಯಾ ಶೇ 4.38 ರಿಲಯನ್ಸ್ ಶೇ 3.81 ಐಸಿಐಸಿಐ ಬ್ಯಾಂಕ್ ಶೇ 1.12 ಬಿಪಿಸಿಎಲ್ ಶೇ 1.10

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎಚ್​ಡಿಎಫ್​ಸಿ ಶೇ -5.45 ಎಚ್​ಡಿಎಫ್​ಸಿ ಲೈಫ್ ಶೇ -4.81 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -4.15 ಎಚ್​ಡಿಎಫ್​ಸಿ ಬ್ಯಾಂಕ್ ಶೇ -3.82 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -3.76

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್