AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿದೆ. ಆ ಬಗ್ಗೆ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 22, 2022 | 5:42 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿದೆ. ಇಂದಿನ ವಹಿವಾಟು ಏರಿಳಿತಗಳಿಂದ ಕೂಡಿತ್ತು. ಆದರೂ ವಾಹನ, ಬ್ಯಾಂಕ್, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಸ್ಟಾಕ್​ಗಳು ಈ ಏರಿಕೆಯಲ್ಲಿ ಪ್ರಮುಖವಾಗಿ ಪಾಲ್ಗೊಂಡವು. ಮಂಗಳವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 696.81 ಪಾಯಿಂಟ್ಸ್ ಅಥವಾ ಶೇ 1.22ರಷ್ಟು ಏರಿಕೆಯನ್ನು ದಾಖಲಿಸಿ, 57,989.30 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿತು. ಇನ್ನು ನಿಫ್ಟಿ ಸೂಚ್ಯಂಕವು 197.90 ಪಾಯಿಂಟ್ಸ್​ ಅಥವಾ ಶೇ 1.16ರಷ್ಟು ಮೇಲೇರಿ, 17,315.50 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿತು.

ಇಂದಿನ ವಹಿವಾಟಿನಲ್ಲಿ 1573 ಕಂಪೆನಿ ಷೇರುಗಳು ಏರಿಕೆಯನ್ನು ಕಂಡರೆ, 1745 ಕಂಪೆನಿ ಷೇರುಗಳು ಇಳಿಕೆ ದಾಖಲಿಸಿದವು. 99 ಕಂಪೆನಿ ಸ್ಟಾಕ್​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವಲಯವಾರು ಗಮನಿಸುವುದಾದರೆ, ಮಾಹಿತಿ ತಂತ್ರಜ್ಞಾನ, ವಾಹನ, ಬ್ಯಾಂಕ್, ತೈಲ ಹಾಗೂ ಅನಿಲ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳವಾದವು. ಇನ್ನು ರಿಯಾಲ್ಟಿ ಸೂಚ್ಯಂಕ ಶೇ 1ರಷ್ಟು ಕುಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟೆಕ್​ ಮಹೀಂದ್ರಾ ಶೇ 3.95 ಬಿಪಿಸಿಎಲ್​ ಶೇ 3.14 ಟಾಟಾ ಮೋಟಾರ್ಸ್ ಶೇ 2.90 ರಿಲಯನ್ಸ್ ಶೇ 2.58 ಐಒಸಿ ಶೇ 2.25

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹಿಂದೂಸ್ತಾನ್ ಯುನಿಲಿವರ್ ಶೇ -2.81 ನೆಸ್ಟ್ಲೆ ಶೇ -2.50 ಬ್ರಿಟಾನಿಯಾ ಶೇ -2.44 ಸಿಪ್ಲಾ ಶೇ -1.69 ಡಿವೀಸ್​ ಲ್ಯಾಬ್ಸ್ ಶೇ -0.17

ಇದನ್ನೂ ಓದಿ: Paytm: ಪೇಟಿಎಂನ ಶೇ 75ರಷ್ಟು ಮಾರುಕಟ್ಟೆ ಬಂಡವಾಳ ಮೌಲ್ಯ ನಾಲ್ಕು ತಿಂಗಳಲ್ಲಿ ಉಡೀಸ್

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!