AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿದೆ. ಆ ಬಗ್ಗೆ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 22, 2022 | 5:42 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿದೆ. ಇಂದಿನ ವಹಿವಾಟು ಏರಿಳಿತಗಳಿಂದ ಕೂಡಿತ್ತು. ಆದರೂ ವಾಹನ, ಬ್ಯಾಂಕ್, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಸ್ಟಾಕ್​ಗಳು ಈ ಏರಿಕೆಯಲ್ಲಿ ಪ್ರಮುಖವಾಗಿ ಪಾಲ್ಗೊಂಡವು. ಮಂಗಳವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 696.81 ಪಾಯಿಂಟ್ಸ್ ಅಥವಾ ಶೇ 1.22ರಷ್ಟು ಏರಿಕೆಯನ್ನು ದಾಖಲಿಸಿ, 57,989.30 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿತು. ಇನ್ನು ನಿಫ್ಟಿ ಸೂಚ್ಯಂಕವು 197.90 ಪಾಯಿಂಟ್ಸ್​ ಅಥವಾ ಶೇ 1.16ರಷ್ಟು ಮೇಲೇರಿ, 17,315.50 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿತು.

ಇಂದಿನ ವಹಿವಾಟಿನಲ್ಲಿ 1573 ಕಂಪೆನಿ ಷೇರುಗಳು ಏರಿಕೆಯನ್ನು ಕಂಡರೆ, 1745 ಕಂಪೆನಿ ಷೇರುಗಳು ಇಳಿಕೆ ದಾಖಲಿಸಿದವು. 99 ಕಂಪೆನಿ ಸ್ಟಾಕ್​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವಲಯವಾರು ಗಮನಿಸುವುದಾದರೆ, ಮಾಹಿತಿ ತಂತ್ರಜ್ಞಾನ, ವಾಹನ, ಬ್ಯಾಂಕ್, ತೈಲ ಹಾಗೂ ಅನಿಲ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳವಾದವು. ಇನ್ನು ರಿಯಾಲ್ಟಿ ಸೂಚ್ಯಂಕ ಶೇ 1ರಷ್ಟು ಕುಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟೆಕ್​ ಮಹೀಂದ್ರಾ ಶೇ 3.95 ಬಿಪಿಸಿಎಲ್​ ಶೇ 3.14 ಟಾಟಾ ಮೋಟಾರ್ಸ್ ಶೇ 2.90 ರಿಲಯನ್ಸ್ ಶೇ 2.58 ಐಒಸಿ ಶೇ 2.25

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹಿಂದೂಸ್ತಾನ್ ಯುನಿಲಿವರ್ ಶೇ -2.81 ನೆಸ್ಟ್ಲೆ ಶೇ -2.50 ಬ್ರಿಟಾನಿಯಾ ಶೇ -2.44 ಸಿಪ್ಲಾ ಶೇ -1.69 ಡಿವೀಸ್​ ಲ್ಯಾಬ್ಸ್ ಶೇ -0.17

ಇದನ್ನೂ ಓದಿ: Paytm: ಪೇಟಿಎಂನ ಶೇ 75ರಷ್ಟು ಮಾರುಕಟ್ಟೆ ಬಂಡವಾಳ ಮೌಲ್ಯ ನಾಲ್ಕು ತಿಂಗಳಲ್ಲಿ ಉಡೀಸ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?