AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Investors Wealth: ಷೇರುಪೇಟೆ ಹೂಡಿಕೆದಾರರ ಸಂಪತ್ತು ಒಂದು ತಿಂಗಳಲ್ಲಿ 30 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಕಳೆದ ಒಂದು ತಿಂಗಳಲ್ಲಿ ಷೇರುಪೇಟೆ ಹೂಡಿಕೆದಾರರ ಸಂಪತ್ತು 30 ಲಕ್ಷ ಕೋಟಿ ರೂಪಾಯಿ ಏರಿಕೆ ಆಗಿದೆ. ಇಂದಿನ ವಹಿವಾಟಿನಲ್ಲಿ ಷೇರುಪೇಟೆಯಲ್ಲಿ ಏನೇನಾಯಿತು ಎಂಬ ಮಾಹಿತಿ ಇಲ್ಲಿದೆ.

Investors Wealth: ಷೇರುಪೇಟೆ ಹೂಡಿಕೆದಾರರ ಸಂಪತ್ತು ಒಂದು ತಿಂಗಳಲ್ಲಿ 30 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 04, 2022 | 6:44 PM

Share

ಏಪ್ರಿಲ್ 4ನೇ ತಾರೀಕಿನ ಸೋಮವಾರದಂದು ಬಿಎಸ್​ಇ ಸೆನ್ಸೆಕ್ಸ್ 60,000 ಪಾಯಿಂಟ್ಸ್ ಗಡಿ ದಾಟಿದೆ. ಮತ್ತು ಕಳೆದ ಒಂದು ತಿಂಗಳಲ್ಲಿ ಹೂಡಿಕೆದಾರರ ಸಂಪತ್ತು 30 ಲಕ್ಷ ಕೋಟಿ ರೂಪಾಯಿ ಹೆಚ್ಚಾಗಿದೆ. ಉಕ್ರೇನ್- ರಷ್ಯಾ ಬಿಕ್ಕಟ್ಟು (Russia-Ukraine Crisis)  ತಮಣಿ ಆಗುತ್ತಾ ಇದ್ದಂತೆ ಹಾಗೂ ಎರಡೂ ದೇಶಗಳ ಮಧ್ಯೆ ಶಾಂತಿ ಮಾತುಕತೆಯು ಪಾಸಿಟಿವ್ ಆದಂಥ ಫಲಿತಾಂಶ ತೋರಿದ ಹಿನ್ನೆಲೆಯಲ್ಲಿ ಖೀವ್​ನಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ನಿರ್ಧರಿಸುವುದರೊಂದಿಗೆ ಈ ಏರಿಕೆಗೆ ಕಾರಣ ಆಯಿತು. ಅದರ ಫಲಿತಾಂಶವಾಗಿ ತೈಲದ ಬೆಲೆ ಬ್ಯಾರೆಲ್​ಗೆ 105 ಅಮೆರಿಕನ್ ಡಾಲರ್ ಆಯಿತು. ಇದರಿಂದ ಭಾರತದಂಥ ನಿವ್ವಳ ತೈಲ ಆಮದುದಾರ ದೇಶಗಳಿಗೆ ದೊಡ್ಡ ನಿರಾಳ ಆದಂತಾಗಿದೆ. ಭಾರತದ ಈಕ್ವಿಟಿಯಲ್ಲಿ ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಮತ್ತು ಖರೀದಿ ಆಸಕ್ತಿ ತೋರಿದ್ದಾರೆ. ಇದಕ್ಕೂ ಮುನ್ನ ಹಣಕಾಸು ವರ್ಷದ ದ್ವಿತೀಯಾರ್ಧದಕ್ಕು 2.3 ಲಕ್ಷ ಕೋಟಿ ರೂಪಾಯಿಯಷ್ಟು ಮಾರಾಟ ಮಾಡಿದ್ದರು. ಅವರಿಂದಲೂ ಬೆಂಬಲ ಕಂಡುಬಂದಿದೆ.

ಕಳೆದ ವಾರದಲ್ಲಿ ವಿದೇಶೀ ಸಾಂಸ್ಥಿಕ ಹೂಡಿಕೆದಾರರು 5,590 ಕೋಟಿ ರೂಪಾಯಿಗೂ ಹೆಚ್ಚು ಖರೀದಿ ಮಾಡಿದ್ದಾರೆ. ಈಚಿನ ಇಳಿಕೆ ನಂತರ ಮಾರುಕಟ್ಟೆ ಸೂಕ್ತವಾದ ಮೌಲ್ಯಮಾಪನ ಆಗಿದೆ ಮತ್ತು ಫೆಡರಲ್ ರಿಸರ್ವ್​ನಿಂದ ಭವಿಷ್ಯದ ದರ ಏರಿಕೆ ಬಗ್ಗೆ ಸ್ಪಷ್ಟ ದಿಕ್ಕು ದೊರೆತಿದೆ ಎಂಬ ಕಾರಣಗಳಿಗೆ ಎಫ್​ಐಐ ಹರಿವು ಉತ್ತಮಗೊಂಡಿರಬಹುದು. ಬಿಎಸ್​ಇ ಸೆನ್ಸೆಕ್ಸ್ 1335 ಪಾಯಿಂಟ್ಸ್ ಅಥವಾ ಶೇ 2.25ರಷ್ಟು ಮೇಲೇರಿ 60,611 ಪಾಯಿಂಟ್ಸ್​ನಲ್ಲಿ ಸೋಮವಾರ ದಿನಾಂತ್ಯ ಕಂಡರೆ, ನಿಪ್ಟಿ 50 ಸೂಚ್ಯಂಕವು 382.95 ಪಾಯಿಂಟ್ಸ್ ಅಥವಾ ಶೇ 2.17ರಷ್ಟು ಹೆಚ್ಚಳವಾಗಿ, 18053.40 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಮುಗಿಸಿದೆ.

ಹೂಡಿಕೆದಾರರ ಸಂಪತ್ತು ಬಿಎಸ್​ಇ ಮಾರುಕಟ್ಟೆ ಬಂಡವಾಳ ಮೌಲ್ಯದ ಮೂಲಕ 3.50 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಾಗಿದೆ. ಅಂದಹಾಗೆ ಎಚ್​ಡಿಎಫ್​ಸಿ-ಎಚ್​ಡಿಎಫ್​ಸಿ ಬ್ಯಾಂಕ್ ವಿಲೀನ ಬಗ್ಗೆ ಘೋಷಣೆ ಮಾಡಲಾಗಿದೆ. ವಿಲೀನ ಆದ ನಂತರ ಮಾರುಕಟ್ಟೆ ಬಂಡವಾಳ ಮೌಲ್ಯದಲ್ಲಿ ಮೂರನೇ ಅತಿದೊಡ್ಡ ಕಾರ್ಪೊರೇಟ್ ಆಗಲಿದೆ. ಅದು ಸಹ ಇಂದಿನ ಏರಿಕೆಗೆ ತನ್ನದೇ ಕೊಡುಗೆ ನೀಡಿದೆ. ಒಟ್ಟುಗೂಡಿ ಎರಡರಿಂದಲೂ ಬೆಂಚ್​ಮಾರ್ಕ್ ಸೂಚ್ಯಂಕದಿಂದ ಅತಿದೊಡ್ಡ ವೇಯ್ಟೇಜ್ ಆಗಿದೆ. ವಿಲೀನ ಸುದ್ದಿ ಹೊರಬಿದ್ದ ನಂತರ ಎಚ್​ಡಿಎಫ್​ಸಿ ಬ್ಯಾಂಕ್ ಮತ್ತು ಎಚ್​ಡಿಎಫ್​ಸಿ ಅದ್ಭುತ ಗಳಿಕೆ ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎಚ್​ಡಿಎಫ್​ಸಿ ಬ್ಯಾಂಕ್ ಶೇ 10.01 ಎಚ್​ಡಿಎಫ್​ಸಿ ಶೇ 9.29 ಅದಾನಿ ಪೋರ್ಟ್ಸ್ ಶೇ 4.17 ಎಚ್​ಡಿಎಫ್​ಸಿ ಲೈಫ್ ಶೇ 3.90 ಕೊಟಕ್ ಮಹೀಂದ್ರಾ ಶೇ 3.34

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಇನ್ಫೋಸಿಸ್ ಶೇ -1.08 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -0.22 ಟೈಟನ್ ಕಂಪೆನಿ ಶೇ -0.15

ಇದನ್ನೂ ಓದಿ: Multibagger penny stocks: ಈ ಮಲ್ಟಿಬ್ಯಾಗರ್ ಪೆನ್ನಿ ಸ್ಟಾಕ್​ನಲ್ಲಿ ಹೂಡಿದ 1 ಲಕ್ಷ ರೂಪಾಯಿ 10 ವರ್ಷಗಳಲ್ಲಿ ರೂ. 4 ಕೋಟಿಗೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು