AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು ಕೇವಲ ಎರಡು ದಿನದಲ್ಲಿ 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಡಿ. 22ರ ವಹಿವಾಟಿನಲ್ಲಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 22, 2021 | 6:47 PM

Share

ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್​ 22ನೇ ತಾರೀಕಿನ ಬುಧವಾರ ಎರಡನೇ ದಿನವೂ ಗಳಿಕೆಯನ್ನು ಮುಂದುವರಿಸಿದ್ದರಿಂದ ಹೂಡಿಕೆದಾರರ ಸಂಪತ್ತು 6,56,828.59 ಕೋಟಿ ರೂಪಾಯಿಗಳಷ್ಟು ಜಿಗಿತ ಕಂಡಿದೆ. 30-ಷೇರುಗಳ ಗುಚ್ಛವಾದ ಬಿಎಸ್‌ಇ ಸೆನ್ಸೆಕ್ಸ್ ಸೂಚ್ಯಂಕವು 611.55 ಪಾಯಿಂಟ್‌ಗಳು ಅಥವಾ ಶೇ 1.09ರಷ್ಟು ಏರಿಕೆ ಕಂಡು, 56,930.56 ಪಾಯಿಂಟ್​ ಅನ್ನು ಮುಟ್ಟಿತು. ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 670 ಪಾಯಿಂಟ್‌ಗಳಷ್ಟು ಜಿಗಿದು, 56,989.01 ಪಾಯಿಂಟ್ಸ್ ತಲುಪಿತ್ತು. ಬಿಎಸ್‌ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ಎರಡು ದಿನಗಳಲ್ಲಿ 6,56,828.59 ಕೋಟಿ ರೂಪಾಯಿ ಹೆಚ್ಚಳವಾಗಿ, 2,59,14,409.64 ಕೋಟಿ ರೂಪಾಯಿಗೆ ಏರಿಕೆಯಾಗಿದೆ.

“ಜಾಗತಿಕ ಮಾರುಕಟ್ಟೆಯಲ್ಲಿ ಪಾಸಿಟಿವ್ ಹಿಂತಿರುಗವುದರ ಮಧ್ಯೆ ದೇಶೀಯ ಮಾರುಕಟ್ಟೆಯು ನೆಲೆಯನ್ನು ಕಂಡುಕೊಳ್ಳುತ್ತಿದೆ. ಹಿಂತಿರುಗಿಸುವಿಕೆ ವಿಶಾಲವಾಗಿ ಆಧಾರಿತವಾಗಿದೆ. ಆದರೆ ಮಧ್ಯಮ ಮತ್ತು ಸಣ್ಣ ಕ್ಯಾಪ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದವು ಏಕೆಂದರೆ ಚೌಕಾಶಿ ಅವಕಾಶವು ಹೂಡಿಕೆದಾರರು ಇಳಿಕೆ ಕಂಡ ಷೇರುಗಳನ್ನು ಖರೀದಿಸಲು ಕಾರಣವಾಯಿತು,” ಎಂದು ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

30-ಮುಂಚೂಣಿ ಕಂಪೆನಿಗಳ ಪೈಕಿ ಬಜಾಜ್ ಫೈನಾನ್ಸ್ ಅತಿ ಹೆಚ್ಚು ಲಾಭ ಕಂಡಿದ್ದು, ಶೇ 2.94ರಷ್ಟು ಜಿಗಿದಿದೆ. ಆ ನಂತರ ಭಾರ್ತಿ ಏರ್‌ಟೆಲ್, ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಸ್‌ಬಿಐ ಗಳಿಕೆ ಕಂಡಿವೆ. ಇದಕ್ಕೆ ವ್ಯತಿರಿಕ್ತವಾಗಿ ವಿಪ್ರೋ, ಐಟಿಸಿ ಮತ್ತು ನೆಸ್ಲೆ ಇಂಡಿಯಾ ಇಳಿಕೆ ಕಂಡವು. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಶೇ 1.66ರ ವರೆಗೆ ಜಿಗಿದವು.

ಇದನ್ನೂ ಓದಿ: Multibagger stock: ಒಂದು ವಾರದಲ್ಲಿ ಶೇ 95ರಷ್ಟು ರಿಟರ್ನ್ಸ್​ ನೀಡಿದೆ ಈ ಮಲ್ಟಿಬ್ಯಾಗರ್ ಸ್ಟಾಕ್

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ