AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು ಕೇವಲ ಎರಡು ದಿನದಲ್ಲಿ 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಡಿ. 22ರ ವಹಿವಾಟಿನಲ್ಲಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market investors wealth: ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6.56 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Dec 22, 2021 | 6:47 PM

Share

ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್​ 22ನೇ ತಾರೀಕಿನ ಬುಧವಾರ ಎರಡನೇ ದಿನವೂ ಗಳಿಕೆಯನ್ನು ಮುಂದುವರಿಸಿದ್ದರಿಂದ ಹೂಡಿಕೆದಾರರ ಸಂಪತ್ತು 6,56,828.59 ಕೋಟಿ ರೂಪಾಯಿಗಳಷ್ಟು ಜಿಗಿತ ಕಂಡಿದೆ. 30-ಷೇರುಗಳ ಗುಚ್ಛವಾದ ಬಿಎಸ್‌ಇ ಸೆನ್ಸೆಕ್ಸ್ ಸೂಚ್ಯಂಕವು 611.55 ಪಾಯಿಂಟ್‌ಗಳು ಅಥವಾ ಶೇ 1.09ರಷ್ಟು ಏರಿಕೆ ಕಂಡು, 56,930.56 ಪಾಯಿಂಟ್​ ಅನ್ನು ಮುಟ್ಟಿತು. ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 670 ಪಾಯಿಂಟ್‌ಗಳಷ್ಟು ಜಿಗಿದು, 56,989.01 ಪಾಯಿಂಟ್ಸ್ ತಲುಪಿತ್ತು. ಬಿಎಸ್‌ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು ಎರಡು ದಿನಗಳಲ್ಲಿ 6,56,828.59 ಕೋಟಿ ರೂಪಾಯಿ ಹೆಚ್ಚಳವಾಗಿ, 2,59,14,409.64 ಕೋಟಿ ರೂಪಾಯಿಗೆ ಏರಿಕೆಯಾಗಿದೆ.

“ಜಾಗತಿಕ ಮಾರುಕಟ್ಟೆಯಲ್ಲಿ ಪಾಸಿಟಿವ್ ಹಿಂತಿರುಗವುದರ ಮಧ್ಯೆ ದೇಶೀಯ ಮಾರುಕಟ್ಟೆಯು ನೆಲೆಯನ್ನು ಕಂಡುಕೊಳ್ಳುತ್ತಿದೆ. ಹಿಂತಿರುಗಿಸುವಿಕೆ ವಿಶಾಲವಾಗಿ ಆಧಾರಿತವಾಗಿದೆ. ಆದರೆ ಮಧ್ಯಮ ಮತ್ತು ಸಣ್ಣ ಕ್ಯಾಪ್​ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದವು ಏಕೆಂದರೆ ಚೌಕಾಶಿ ಅವಕಾಶವು ಹೂಡಿಕೆದಾರರು ಇಳಿಕೆ ಕಂಡ ಷೇರುಗಳನ್ನು ಖರೀದಿಸಲು ಕಾರಣವಾಯಿತು,” ಎಂದು ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

30-ಮುಂಚೂಣಿ ಕಂಪೆನಿಗಳ ಪೈಕಿ ಬಜಾಜ್ ಫೈನಾನ್ಸ್ ಅತಿ ಹೆಚ್ಚು ಲಾಭ ಕಂಡಿದ್ದು, ಶೇ 2.94ರಷ್ಟು ಜಿಗಿದಿದೆ. ಆ ನಂತರ ಭಾರ್ತಿ ಏರ್‌ಟೆಲ್, ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಸ್‌ಬಿಐ ಗಳಿಕೆ ಕಂಡಿವೆ. ಇದಕ್ಕೆ ವ್ಯತಿರಿಕ್ತವಾಗಿ ವಿಪ್ರೋ, ಐಟಿಸಿ ಮತ್ತು ನೆಸ್ಲೆ ಇಂಡಿಯಾ ಇಳಿಕೆ ಕಂಡವು. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಶೇ 1.66ರ ವರೆಗೆ ಜಿಗಿದವು.

ಇದನ್ನೂ ಓದಿ: Multibagger stock: ಒಂದು ವಾರದಲ್ಲಿ ಶೇ 95ರಷ್ಟು ರಿಟರ್ನ್ಸ್​ ನೀಡಿದೆ ಈ ಮಲ್ಟಿಬ್ಯಾಗರ್ ಸ್ಟಾಕ್

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್