AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 709 ಪಾಯಿಂಟ್ಸ್, ನಿಫ್ಟಿ 208 ಪಾಯಿಂಟ್ಸ್ ಕುಸಿತ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 15ನೇ ತಾರೀಕಿನ ಮಂಗಳವಾರದಂದು ಭಾರೀ ಇಳಿಕೆ ಕಂಡಿದೆ. ನಿಫ್ಟಿಯಲ್ಲಿ ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Closing Bell: ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 709 ಪಾಯಿಂಟ್ಸ್, ನಿಫ್ಟಿ 208 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 15, 2022 | 4:35 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 15ನೇ ತಾರೀಕಿನ ಮಂಗಳವಾರದಂದು ಭಾರೀ ಇಳಿಕೆ ಕಂಡಿದೆ. ಸತತ ಐದು ದಿನಗಳಿಂದ ಏರಿಕೆ ಕಾಣುತ್ತಾ ಸಾಗಿದ್ದ ಮಾರುಕಟ್ಟೆಯು ಇಂದು ಲಯ ಕಳೆದುಕೊಂಡಿತು. ಲೋಹ, ತೈಲ ಮತ್ತು ಅನಿಲ ಹಾಗೂ ಮಾಹಿತಿ ತಂತ್ರಜ್ಞಾನ ಷೇರುಗಳು ದಿನಾಂತ್ಯಕ್ಕೆ 16,700 ಪಾಯಿಂಟ್ಸ್​ಗೂ ಕೆಳಗೆ ಎಳೆದಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 709.17 ಪಾಯಿಂಟ್ಸ್ ಅಥವಾ ಶೇ 1.26ರಷ್ಟು ಇಳಿಕೆ ಕಂಡು, 55,776.85 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 208.30 ಪಾಯಿಂಟ್ಸ್ ಅಥವಾ ಶೇ 1.23ರಷ್ಟು ಕುಸಿದು, 16,663 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ.

ಇಂದಿನ ವಹಿವಾಟಿನಲ್ಲಿ 1296 ಕಂಪೆನಿಗಳ ಷೇರು ಏರಿಕೆಯನ್ನು ದಾಖಲಿಸಿದರೆ, 20214 ಕಂಪೆನಿ ಷೇರುಗಳು ಏರಿಕೆ ಕಂಡಿವೆ. 95 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವಲಯವಾರು ನೋಡುವುದಾದರೆ, ವಾಹನವೊಂದನ್ನು ಹೊರತುಪಡಿಸಿ, ಇತರ ಎಲ್ಲ ವಲಯಗಳು ಕುಸಿತ ದಾಖಲಿಸಿವೆ. ಮಾಹಿತಿ ತಂತ್ರಜ್ಞಾನ, ಲೋಹ, ವಿದ್ಯುತ್ ಮತ್ತು ತೈಲ ಹಾಗೂ ಅನಿಲ ಸೂಚ್ಯಂಕವು ಶೇ 1ರಿಂದ 4ರಷ್ಟು ಕುಸಿದಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 0.5ರಷ್ಟು ಇಳಿಕೆ ಕಂಡಿವೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟಾಟಾ ಕನ್ಸ್ಯೂಮರ್ ಪಾಡಕ್ಟ್ಸ್ ಶೇ 3.65 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 2.42 ಶ್ರೀ ಸಿಮೆಂಟ್ಸ್ ಶೇ 1.96 ಸಿಪ್ಲಾ ಶೇ 1.85 ಮಾರುತಿ ಸುಜುಕಿ ಶೇ 1.41

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹಿಂಡಾಲ್ಕೋ ಶೇ -5.26 ಟಾಟಾ ಸ್ಟೀಲ್ ಶೇ -4.88 ಒಎನ್​ಜಿಸಿ ಶೇ -4.69 ಕೋಲ್ ಇಂಡಿಯಾ ಶೇ -4.13 ಜೆಡ್​ಡಬ್ಲ್ಯು ಸ್ಟೀಲ್ ಶೇ -3.56

ಇದನ್ನೂ ಓದಿ: Multibagger penny stocks: ಈ ಮಲ್ಟಿಬ್ಯಾಗರ್ ಪೆನ್ನಿ ಸ್ಟಾಕ್​ನಲ್ಲಿ ಹೂಡಿದ 1 ಲಕ್ಷ ರೂಪಾಯಿ 10 ವರ್ಷಗಳಲ್ಲಿ ರೂ. 4 ಕೋಟಿಗೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್