AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರುಪೇಟೆ ಭರ್ಜರಿ ಕುಸಿತ; 8 ಲಕ್ಷ ಕೋಟಿ ರೂ ನಷ್ಟ; ಶೇ 80 ಷೇರುಗಳಿಗೆ ಹಿನ್ನಡೆ

Indian stock market seeing Bear dance: ಜಾಗತಿಕವಾಗಿ ಷೇರು ಮಾರುಕಟ್ಟೆಗಳು ಹಿನ್ನಡೆಯಲ್ಲಿವೆ. ಇರಾನ್ ಯುದ್ಧ, ತೈಲ ಬೆಲೆ ಏರಿಕೆ ಇತ್ಯಾದಿ ಸಂಗತಿಗಳು ಮಾರುಕಟ್ಟೆಯನ್ನು ಅಲುಗಾಡಿಸುತ್ತಿವೆ. ಭಾರತದ ಷೇರು ಮಾರುಕಟ್ಟೆ ಬುಧವಾರ ಶೇ. 2ರಷ್ಟು ಕುಸಿತ ಕಂಡಿದೆ. ಹೂಡಿಕೆದಾರರಿಗೆ ಎಂಟು ಲಕ್ಷ ಕೋಟಿ ರೂ ನಷ್ಟ ಎದುರಾಗಿದೆ.

ಭಾರತದ ಷೇರುಪೇಟೆ ಭರ್ಜರಿ ಕುಸಿತ; 8 ಲಕ್ಷ ಕೋಟಿ ರೂ ನಷ್ಟ; ಶೇ 80 ಷೇರುಗಳಿಗೆ ಹಿನ್ನಡೆ
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2026 | 11:56 AM

Share

ನವದೆಹಲಿ, ಮಾರ್ಚ್ 4: ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿ (Stock Market) ಕರಡಿ ಕುಣಿತ ಮುಂದುವರಿದಿದೆ. ಇಂದು ಬಿಎಸ್​ಇ ಮತ್ತು ಎನ್​ಎಸ್​ಇಯ ಹೆಚ್ಚಿನ ಸೂಚ್ಯಂಕಗಳು ಕೆಂಪು ಬಣ್ಣಕ್ಕೆ ತಿರುಗಿವೆ. ನಿಫ್ಟಿ, ಸೆನ್ಸೆಕ್ಸ್ ಶೇ. 2ರವರೆಗೂ ಕುಸಿತ ಕಂಡಿವೆ. ಹೂಡಿಕೆದಾರರಿಗೆ ಬರೋಬ್ಬರಿ 8 ಲಕ್ಷ ಕೋಟಿ ರೂ ನಷ್ಟ ಎದುರಾಗಿದೆ. ಇರಾನ್ ಯುದ್ಧ ನಡೆಯುತ್ತಿರುವುದರಿಂದ ಷೇರು ಮಾರುಕಟ್ಟೆ ಕುಸಿತ ಅನಿರೀಕ್ಷಿತವೇನಲ್ಲ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲಾ ಷೇರು ಮಾರುಕಟ್ಟೆಗಳು ಹಿನ್ನಡೆ ಕಾಣುತ್ತಿವೆ.

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ 1,523 ಅಂಕ ಕಳೆದುಕೊಂಡು 78,711 ಮಟ್ಟ ಮುಟ್ಟಿತ್ತು. ಬುಧವಾರದ ಟ್ರೇಡಿಂಗ್​ನ ಒಂದು ಹಂತದಲ್ಲಿ ಸೆನ್ಸೆಕ್ಸ್ 78,528 ಅಂಕಗಳ ಮಟ್ಟದವರೆಗೆ ಕುಸಿದಿತ್ತು.

ಇದನ್ನೂ ಓದಿ: ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ 506 ಅಂಕಗಳನ್ನು ತೊಡೆದುಕೊಂಡು 24,359 ಮಟ್ಟಕ್ಕೆ ಇಳಿದಿದೆ. ಒಂದು ಹಂತದಲ್ಲಿ ಇದು 24,325 ಅಂಕಗಳಿಗೆ ಇಳಿದಿತ್ತು. 50 ಸ್ಟಾಕ್​ಗಳ ಬುಟ್ಟಿಯಾದ ನಿಫ್ಟಿ, ಶೇ. 2ಕ್ಕಿಂತಲೂ ಹೆಚ್ಚು ಕುಸಿತ ಕಂಡಿದೆ. ಒಂದು ಅಂದಾಜು ಪ್ರಕಾರ ಭಾರತದ

ಗೋಲ್ಡ್ ಇಟಿಎಫ್, ಸಿಲ್ವರ್ ಇಟಿಎಫ್​ಗಳೂ ಕೂಡ ಕುಸಿತ ಕಾಣುತ್ತಿವೆ. ಹೆಚ್ಚಿನ ಹೂಡಿಕೆದಾರರು ಈ ಇಟಿಎಫ್​ಗಳಿಂದ ಹೂಡಿಕೆ ಹಿಂಪಡೆಯುತ್ತಿರುವ ಟ್ರೆಂಡ್ ಇದೆ. ಭಾರತದ ಷೇರು ಪೇಟೆಯ ಭಯದ ಸೂಚಕವಾಗಿರುವ ವಿಐಎಕ್ಸ್ 20ರ ಮಟ್ಟ ದಾಟುತ್ತಿದೆ. ಇದು ಹೂಡಿಕೆದಾರರು ಆತಂಕದಲ್ಲಿರುವುದನ್ನು ಸೂಚಿಸುತ್ತದೆ.

ಇದನ್ನೂ ಓದಿ: ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

ಷೇರು ಮಾರುಕಟ್ಟೆ ಕುಸಿಯುತ್ತಿರುವುದ್ಯಾಕೆ?

  • ಪಶ್ಚಿಮ ಏಷ್ಯಾದಲ್ಲಿ ಯುದ್ಧ ಸಂಭವಿಸುತ್ತಿರುವುದು ಎಲ್ಲರನ್ನೂ ಚಿಂತಿತರನ್ನಾಗಿ ಮಾಡುತ್ತಿದೆ.
  • ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಾಗಣೆಗೆ ತಡೆ ಎದುರಾಗಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ಕಚ್ಚಾ ತೈಲ ಬೆಲೆ ಏರಿಕೆ ಆಗುತ್ತಿದೆ.
  • ಜಾಗತಿಕ ಮಾರುಕಟ್ಟೆಗಳು ಹಿನ್ನಡೆಯಲ್ಲಿವೆ. ಅದರಲ್ಲೂ ಏಷ್ಯನ್ ಸೂಚ್ಯಂಕಗಳು ತೀವ್ರ ಒತ್ತಡದಲ್ಲಿವೆ. ಇದು ಭಾರತೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರುತ್ತಿರಬಹುದು.
  • ಡಾಲರ್ ಎದುರು ರುಪಾಯಿ ಮೌಲ್ಯ ಹೊಸ ದಾಖಲೆ ಮಟ್ಟಕ್ಕೆ ಕುಸಿದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್
ವಿಶ್ವದ ನಂ.1 ಆಟಗಾರನಿಗೆ ಸೋಲುಣಿಸಿದ ಲಕ್ಷ್ಯ ಸೇನ್
ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು
ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ