Sign In

By signing in or creating an account, you agree with Associated Broadcasting Company's Terms & Conditions and Privacy Policy.

Opening Bell: ಸೆನ್ಸೆಕ್ಸ್ 950ಕ್ಕೂ ಪಾಯಿಂಟ್ಸ್, ನಿಫ್ಟಿ 291 ಪಾಯಿಂಟ್ಸ್​ನಷ್ಟು ಭಾರೀ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಫೆಬ್ರವರಿ 11ನೇ ತಾರೀಕಿನ ಶುಕ್ರವಾರದ ಆರಂಭದ ವಹಿವಾಟಿನಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇಳಿಕೆ, ಏರಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Opening Bell: ಸೆನ್ಸೆಕ್ಸ್ 950ಕ್ಕೂ ಪಾಯಿಂಟ್ಸ್, ನಿಫ್ಟಿ 291 ಪಾಯಿಂಟ್ಸ್​ನಷ್ಟು ಭಾರೀ ಕುಸಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Feb 11, 2022 | 11:39 AM

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಫೆಬ್ರವರಿ 11ನೇ ತಾರೀಕಿನ ಶುಕ್ರವಾರದ ಬೆಳಗಿನ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿದೆ. ಸೆನ್ಸೆಕ್ಸ್ 908.91 ಪಾಯಿಂಟ್ಸ್​ ಅಥವಾ ಶೇ 1.54ರಷ್ಟು ಕೆಳಗಿಳಿದು ವಹಿವಾಟು ನಡೆಸುತ್ತಿತ್ತು. ಇನ್ನು ನಿಫ್ಟಿ 270.50 ಪಾಯಿಂಟ್ಸ್​ ಅಥವಾ ಶೇ 1.54ರಷ್ಟು ಕುಸಿದು, 17,335 ಪಾಯಿಂಟ್ಸ್​​ನಲ್ಲಿ ವ್ಯವಹಾರ ಮಾಡುತ್ತಿತ್ತು. ನಿಫ್ಟಿ ಬ್ಯಾಂಕ್ ಸೂಚ್ಯಂಕ 502.70 ಪಾಯಿಂಟ್ಸ್ ಅಥವಾ ಶೇ 1.29ರಷ್ಟು ಕುಸಿದು, 38,508.25 ಪಾಯಿಂಟ್ಸ್​​ನೊಂದಿಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸುತ್ತಿತ್ತು. ನಿಫ್ಟಿ ಮಾಹಿತಿ ತಂತ್ರಜ್ಞಾನ ಸೂಚ್ಯಂಕವು 919.55 ಪಾಯಿಂಟ್ಸ್​ ಅಥವಾ ಶೇ 2.60ರಷ್ಟು ನೆಲ ಕಚ್ಚಿತ್ತು. ನಿಫ್ಟಿ ಲೋಹದ ಸೂಚ್ಯಂಕವು 32.50 ಪಾಯಿಂಟ್ಸ್ ಅಥವಾ ಶೇ 0.54ರಷ್ಟು ಕುಸಿದಿತ್ತು.

ಮದುವೆ ಹಾಗೂ ಸಮಾರಂಭಗಳ ಬಟ್ಟೆ ಸೆಗ್ಮೆಂಟ್​ಗಳ ಭಾರತದ ಅತಿದೊಡ್ಡ ಕಂಪೆನಿಯಾದ ವೇದಾಂತ್ ಫ್ಯಾಷನ್ಸ್ ಐಪಿಒ ಷೇರು ವಿತರಣೆ ಫೆಬ್ರವರಿ 11ನೇ ತಾರೀಕಿನಂದು ವಿತರಣೆ ಮಾಡಲಿದೆ. ಹೂಡಿಕೆದಾರರು ಎರಡು ಬಗೆಯಲ್ಲಿ ತಮ್ಮ ವಿತರಣೆ ಸ್ಥಿತಿಯನ್ನು ಪರೀಕ್ಷಿಸಿಕೊಳ್ಳಬಹುದು. ಐಪಿಒ ರಿಜಿಸ್ಟ್ರಾರ್ ವೆಬ್​ಸೈಟ್​ ಅಥವಾ ಬಿಎಸ್​ಇ ವೆಬ್​ಸೈಟ್​ನಲ್ಲಿ ಪರೀಕ್ಷಿಸಬಹುದು. ಇನ್ನು ಭಾರತದ ರೂಪಾಯಿ ಮೌಲ್ಯವು ಡಾಲರ್ ವಿರುದ್ಧ ಶುಕ್ರವಾರ 45 ಪೈಸೆ ಇಳಿಕೆಯಲ್ಲಿ ಆರಂಭವಾಗಿದ್ದು, ಈ ಹಿಂದಿನ ಸೆಷನ್​ನಲ್ಲಿ 74.94ಕ್ಕೆ ಕೊನೆಗೊಂಡಿತ್ತು. ಈ ಲೇಖನ ಸಿದ್ಧವಾಗುವ ಹೊತ್ತಿಗೆ ಸೆನ್ಸೆಕ್ಸ್ 970 ಪಾಯಿಂಟ್ಸ್​ಗೂ ಹೆಚ್ಚು, ನಿಫ್ಟಿ 291 ಪಾಯಿಂಟ್ಸ್ ನೆಲ ಕಚ್ಚಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಐಒಸಿ ಶೇ 1.21

ಬಿಪಿಸಿಎಲ್ ಶೇ 0.43

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಗ್ರಾಸಿಮ್ ಶೇ -3.14

ಇನ್ಫೋಸಿಸ್ ಶೇ -2.97

ಟೆಕ್​ ಮಹೀಂದ್ರಾ ಶೇ -2.89

ಬ್ರಿಟಾನಿಯಾ ಶೇ -2.68

ನೆಸ್ಟ್ಲೆ ಶೇ -2.55

ಇದನ್ನೂ ಓದಿ: Adani Wilmar Listing: ಅದಾನಿ ವಿಲ್ಮರ್ ಶೇ 4ರ ರಿಯಾಯಿತಿಗೆ ಷೇರು ಮಾರ್ಕೆಟ್​ನಲ್ಲಿ ಲಿಸ್ಟಿಂಗ್

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ