AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರವಸೆ ಮೂಡಿಸಿದ ಅಮೆರಿಕ-ಇರಾನ್ ಡೀಲ್; ಗರಿಗೆದರಿದ ಷೇರುಬಜಾರು

Stock market rising today: ಭಾರತದ ಷೇರುಬಜಾರಿನ ನಿಫ್ಟಿ, ಸೆನ್ಸೆಕ್ಸ್ ಮೊದಲಾದ ಪ್ರಮುಖ ಸೂಚ್ಯಂಕಗಳು ಸೋಮವಾರ ಹಸಿರುಬಣ್ಣದಲ್ಲಿವೆ. ಬಹಳ ಏರುಪೇರು ಕಾಣುತ್ತಿರುವ ಮಾರುಕಟ್ಟೆಯಲ್ಲಿ ಈಗ ಉತ್ಸಾಹ ಕಂಡು ಬಂದಿದೆ. ಅಮೆರಿಕ ಮತ್ತು ಇರಾನ್ ಮಧ್ಯೆ ಒಪ್ಪಂದ ಏರ್ಪಡುವ ಸಾಧ್ಯತೆ ಇರುವುದು ಮಾರುಕಟ್ಟೆ ಚೇತರಿಕೆಗೆ ಇರುವ ಪ್ರಮುಖ ಕಾರಣಗಳಲ್ಲಿ ಒಂದೆನ್ನಲಾಗಿದೆ.

ಭರವಸೆ ಮೂಡಿಸಿದ ಅಮೆರಿಕ-ಇರಾನ್ ಡೀಲ್; ಗರಿಗೆದರಿದ ಷೇರುಬಜಾರು
ಷೇರು ಬಜಾರುImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 25, 2026 | 12:45 PM

Share

ನವದೆಹಲಿ, ಮೇ 25: ಭಾರತದ ಷೇರು ಮಾರುಕಟ್ಟೆ (Stock Market) ಇವತ್ತು ಸೋಮವಾರ ಚೇತರಿಸಿಕೊಂಡಿದೆ. ಪ್ರಮುಖ ಸೂಚ್ಯಂಕಗಳಾದ ನಿಫ್ಟಿ50 ಮತ್ತು ಸೆನ್ಸೆಕ್ಸ್30 ಇದು ಶೇ. 1ರಿಂದ ಶೇ. 1.20ರಷ್ಟು ಹೆಚ್ಚಳ ಕಂಡಿವೆ. ಹೂಡಿಕೆದಾರರಿಗೆ 5 ಲಕ್ಷ ಕೋಟಿ ರೂ ಗಳಿಕೆ ಆಗಿದೆ. ನಿಫ್ಟಿ ಸೂಚ್ಯಂಕ 240 ಅಂಕಗಳ (ಶೇ. 1.02) ಹೆಚ್ಚಳದೊಂದಿಗೆ 23,959 ಮಟ್ಟಕ್ಕೆ ಏರಿದೆ. ಸೆನ್ಸೆಕ್ಸ್ 863 ಅಂಕಗಳ ಏರಿಕೆಯೊಂದಿಗೆ 76,279 ಮಟ್ಟ ಮುಟ್ಟಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿರುವ ಬಹುತೇಕ ಎಲ್ಲಾ ಸೂಚ್ಯಂಕಗಳೂ ಕೂಡ ಹಸಿರುಬಣ್ಣದಲ್ಲಿವೆ. ಷೇರು ಬಜಾರು ಇವತ್ತು ಸೋಮವಾರ ಗರಿಗೆದರಲು ಪ್ರಮುಖ ಕಾರಣಗಳೇನು?

ಅಮೆರಿಕ ಇರಾನ್ ಒಪ್ಪಂದ ಏರ್ಪಡುವ ನಿರೀಕ್ಷೆ

ಅಮೆರಿಕ ಮತ್ತು ಇರಾನ್ ದೇಶಗಳು ಒಂದು ಸರ್ವಸಮ್ಮತವಾದ ಒಪ್ಪಂದಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಮೂರು ತಿಂಗಳ ಸಂಘರ್ಷದಿಂದ ಇಡೀ ಜಗತ್ತು ನಲುಗಿ ಹೋಗಿದೆ. ಅದರಲ್ಲೂ ಭಾರತಕ್ಕೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ. ಹೀಗಾಗಿ, ಸಂಘರ್ಷ ಕೊನೆಗೊಳ್ಳುವ ನಿರೀಕ್ಷೆಯು ಹೂಡಿಕೆದಾರರಿಗೆ ಸಮಾಧಾನ ಕೊಟ್ಟಿರಬಹುದು.

ಇದನ್ನೂ ಓದಿ: ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್

ಕಚ್ಚಾ ತೈಲ ಬೆಲೆ 100 ಡಾಲರ್​ನೊಳಗೆ

ಅಮೆರಿಕ ಇರಾನ್ ಮಧ್ಯೆ ಒಪ್ಪಂದ ಏರ್ಪಡುವ ಸಾಧ್ಯತೆಯು ಕಚ್ಚಾ ತೈಲ ಬೆಲೆ ಇಳಿಕೆಗೆ ದಾರಿ ಮಾಡಿಕೊಟ್ಟಿದೆ. ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಶೇ. 4.6ರಷ್ಟು ತಗ್ಗಿ 98.8 ಡಾಲರ್​ಗೆ ಇಳಿದಿದೆ.

ಆರ್​ಬಿಐನಿಂದ ಭರ್ಜರಿ ಡಿವಿಡೆಂಡ್

ಭಾರತೀಯ ರಿಸರ್ವ್ ಬ್ಯಾಂಕ್ ಮೊನ್ನೆ ಸರ್ಕಾರಕ್ಕೆ ಭರ್ಜರಿ ಡಿವಿಡೆಂಡ್ ಪ್ರಕಟಿಸಿದೆ. 2025-26ರ ವರ್ಷದಲ್ಲಿ ಆರ್ಬಿಐನಿಂದ ಸರ್ಕಾರಕ್ಕೆ 2.87 ಲಕ್ಷ ಕೋಟಿ ರೂ ಲಾಭಾಂಶ ಸಂದಾಯವಾಗಲಿದೆ. ಇದು ಅದರ ಇತಿಹಾಸದಲ್ಲೇ ಯಾವುದೇ ವರ್ಷದಲ್ಲಿ ಸರ್ಕಾರಕ್ಕೆ ನೀಡಲಾಗಿರುವ ಅತಿದೊಡ್ಡ ಡಿವಿಡೆಂಡ್ ಮೊತ್ತ. ಆರ್ಥಿಕವಾಗಿ ಒತ್ತಡದಲ್ಲಿರುವ ಭಾರತಕ್ಕೆ ಈ ಡಿವಿಡೆಂಡ್ ಬಹಳ ಸಹಾಯಕ್ಕೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಭಾರತದ ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳಲ್ಲಿ ಡೀಪ್-ಟೆಕ್ ಕ್ರಾಂತಿ: ಕ್ಯಾಂಪಸ್ ಫಂಡ್ ವರದಿ

ಡಾಲರ್ ಎದುರು ರುಪಾಯಿ ಚೇತರಿಕೆ

ಅಮೆರಿಕದ ಡಾಲರ್ ಎದುರು ರುಪಾಯಿ ಚೇತರಿಸಿಕೊಳ್ಳುತ್ತಿರುವುದೂ ಕೂಡ ಷೇರು ಪೇಟೆ ಉಬ್ಬಲು ಒಂದು ಕಾರಣ. ಕಳೆದ ವಾರ 96 ದಾಟಿ 97 ರ ಸಮೀಪಕ್ಕೆ ಹೋಗಿದ್ದ ರುಪಾಯಿ ಇದೀಗ 95.20ಗೆ ಬಂದಿದೆ. ಹಾಗೆಯೇ, ಭಯದ ಸೂಚಿಯಾಗಿರುವ ವಿಐಎಕ್ಸ್ ಕೂಡ ಕಡಿಮೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು