AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಉಬ್ಬಿದ್ದ ಷೇರುಪೇಟೆ ಇವತ್ತು ಪ್ರಪಾತಕ್ಕೆ; ಸೆನ್ಸೆಕ್ಸ್, ನಿಫ್ಟಿ ಸೇರಿ ಪ್ರಮುಖ ಸೂಚ್ಯಂಕಗಳ ಕುಸಿತ

Stock Market updates today: ಎಕ್ಸಿಟ್ ಪೋಲ್​ಗಳು ಎನ್​ಡಿಎ ಗೆಲುವನ್ನು ಸೂಚಿಸಿದ ಬಳಿಕ ನಿನ್ನೆ ಸೋಮವಾರ (ಜೂನ್ 3) ಷೇರುಪೇಟೆ ಸಖತ್ತಾಗಿ ಏರಿತ್ತು. ಎಲ್ಲಾ ಸೂಚ್ಯಂಕಗಳು ಪಾಸಿಟಿವ್ ಆಗಿ ಅಂತ್ಯಗೊಂಡಿದ್ದವು. ಇವತ್ತು ಮತ ಎಣಿಕೆ ದಿನ ಮಾರುಕಟ್ಟೆ ಆರಂಭವಾಗಿ ಕೆಲವೇ ನಿಮಿಷಗಳಲ್ಲಿ ಷೇರುಪೇಟೆ ಕುಸಿತ ಕಂಡಿದೆ. 15 ನಿಮಿಷದಲ್ಲಿ ಹೂಡಿಕೆದಾರರು 9 ಲಕ್ಷ ಕೋಟಿ ರೂ ಹಣ ನಷ್ಟ ಮಾಡಿಕೊಂಡಿದ್ದಾರೆ.

ನಿನ್ನೆ ಉಬ್ಬಿದ್ದ ಷೇರುಪೇಟೆ ಇವತ್ತು ಪ್ರಪಾತಕ್ಕೆ; ಸೆನ್ಸೆಕ್ಸ್, ನಿಫ್ಟಿ ಸೇರಿ ಪ್ರಮುಖ ಸೂಚ್ಯಂಕಗಳ ಕುಸಿತ
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 04, 2024 | 10:20 AM

Share

ಮುಂಬೈ, ಜೂನ್ 4: ಎಕ್ಸಿಟ್ ಪೋಲ್ ಬಳಿಕ ಫೀನಿಕ್ಸ್​ನಂತೆ ಮೇಲೆ ಜಿಗಿದಿದ್ದ ಷೇರು ಮಾರುಕಟ್ಟೆ (stock market) ಇವತ್ತು ಅಷ್ಟೇ ವೇಗದಲ್ಲಿ ಕೆಳಗೆ ಬಿದ್ದಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ (Nifty50 index) ಸೇರಿದಂತೆ ಬಹುತೇಕ ಎಲ್ಲಾ ಸೂಚ್ಯಂಕಗಳು ಕುಸಿತ ಕಂಡಿವೆ. ಬೆಳಗ್ಗೆ 9:15ಕ್ಕೆ ಮಾರುಕಟ್ಟೆ ವ್ಯವಹಾರ ಆರಂಭವಾಗಿ ಕೆಲವೇ ನಿಮಿಷದಲ್ಲಿ ಸೆನ್ಸೆಕ್ಸ್ ಬರೋಬ್ಬರಿ 2,800 ಅಂಕಗಳಷ್ಟು ಕುಸಿತ ಕಂಡಿತು. ನಿಫ್ಟಿ50 ಸೂಚ್ಯಂಕ 22,400 ಮಟ್ಟಕ್ಕಿಂತ ಕೆಳಗೆ ಇಳಿದಿತ್ತು. ಕೇವಲ 15 ನಿಮಿಷದಲ್ಲಿ ಷೇರುಪೇಟೆಯಲ್ಲಿ ಹೂಡಿಕೆದಾರರ 9 ಲಕ್ಷ ಕೋಟಿ ರೂ ಹಣ ವೈಟ್​ವಾಶ್ ಆಯಿತು.

ಹತ್ತು ಗಂಟೆಯ ಬಳಿಕ ಸೂಚ್ಯಂಕಗಳು ಮತ್ತೆ ತುಸು ಮೇಲೇರತೊಡಗಿವೆ. ಎಕ್ಸಿಟ್ ಪೋಲ್​ನಲ್ಲಿ ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸುವ ಸುಳಿವು ಸಿಕ್ಕ ಬಳಿಕ ಷೇರು ಮಾರುಕಟ್ಟೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಬಿಎಸ್​ಇನ 30 ಷೇರುಗಳ ಸೆನ್ಸೆಕ್ಸ್ ಸೂಚ್ಯಂಕ 2,507 ಅಂಕಗಳಷ್ಟು ಮೇಲೇರಿ 76,468.78 ಮಟ್ಟ ಮುಟ್ಟಿತು. ಬಿಎಸ್​ಇ ಇತಿಹಾಸದಲ್ಲಿ ಯಾವುದೇ ದಿನದಲ್ಲಿ ಸೆನ್ಸೆಕ್ಸ್ ಈ ಎತ್ತರದಲ್ಲಿ ಅಂತ್ಯಗೊಂಡಿದ್ದು ಅದೇ ಮೊದಲು. ಕಳೆದ ಮೂರು ವರ್ಷದಲ್ಲಿ ಒಂದೇ ದಿನದಲ್ಲಿ ಸೆನ್ಸೆಕ್ಸ್ ಕಂಡ ಅತಿಹೆಚ್ಚಳ ಅದು.

ಇದನ್ನೂ ಓದಿ: ಐಪಿಒದಲ್ಲಿ ಷೇರು ಖರೀದಿಸಿ ಲಿಸ್ಟಿಂಗ್​ನಲ್ಲಿ ಮಾರಿದಾಗ ಎಷ್ಟು ತೆರಿಗೆ ಕಟ್ಟಬೇಕು?

ನಿಫ್ಟಿ50, ಸೆನ್ಸೆಕ್ಸ್, ನಿಫ್ಟಿ ಬ್ಯಾಂಕ್, ನಿಫ್ಟಿ ಐಟಿ, ಬಿಎಸ್​ಇ ಸ್ಮಾಲ್​ಕ್ಯಾಪ್ ಹೀಗೆ ಬಹುತೇಕ ಎಲ್ಲಾ ಸೂಚ್ಯಂಕಗಳು ಇಳಿಕೆ ಕಂಡಿವೆ. ಫಾರ್ಮಾ, ಎಫ್​ಎಂಸಿಜಿ, ಹೆಲ್ತ್​ಕೇರ್ ಇತ್ಯಾದಿ ವಲಯಗಳ ಸೂಚ್ಯಂಕಗಳು ಮಾತ್ರ ಹಸಿರು ಬಣ್ಣದಲ್ಲಿವೆ. ಉಳಿದಂತೆ ಬಹುತೇಕ ಎಲ್ಲವೂ ಕೆಂಪು ಬಣ್ಣಮಯವಾಗಿದೆ.

ಎಚ್​ಯುಎಲ್, ನೆಸ್ಲೆ, ಟಿಸಿಎಸ್, ಬ್ರಿಟಾನಿಯಾ, ಸನ್ ಫಾರ್ಮಾ, ಡಿವಿಸ್ ಲ್ಯಾಬ್ಸ್, ಅಪೋಲೋ ಆಸ್ಪತ್ರೆ, ಏಷ್ಯನ್ ಪೇಮೆಂಟ್ಸ್, ಟೈಟಾನ್ ಕಂಪನಿ, ಡಾಕ್ಟರ್ ರೆಡ್ಡೀಸ್ ಲ್ಯಾಬ್ಸ್, ಹೀರೋ ಮೋಟೋಕಾರ್ಪ್, ಟಿಸಿಎಸ್ ಮೊದಲಾದ ಕಂಪನಿಗಳ ಷೇರುಗಳು ಬೆಲೆ ಪಡೆದಿವೆ.

ಇದನ್ನೂ ಓದಿ: ರಿಸಲ್ಟ್ ಬರುವ ಮುನ್ನವೇ ಉಬ್ಬಿ ನಿಂತ ಷೇರುಪೇಟೆ; ನಿಫ್ಟಿ, ಸೆನ್ಸೆಕ್ಸ್ ಸೇರಿ ಪ್ರಮುಖ ಸೂಚ್ಯಂಕಗಳು ಮೇಲಕ್ಕೆ

ರಿಲಾಯನ್ಸ್, ಅದಾನಿ ಎಂಟರ್​ಪ್ರೈಸಸ್, ಅದಾನಿ ಪೋರ್ಟ್ಸ್, ಎಚ್​ಡಿಎಫ್​ಸಿ ಬ್ಯಾಂಕ್, ಎಸ್​ಬಿಐ, ವಿಪ್ರೋ, ಅಲ್ಟ್ರಾಟೆಕ್ ಸಿಮೆಂಟ್, ಬಜಾಜ್ ಆಟೊ, ಏಚರ್ ಮೋಟಾರ್ಸ್ ಮೊದಲಾದ ಷೇರುಗಳು ಪ್ರಮುಖವಾಗಿ ಲಾಸ್ ಮಾಡಿಕೊಂಡಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!