ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?

Stock Market Shaking: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ ಒಂದು ದಿನದಲ್ಲಿ 900ಕ್ಕೂ ಹೆಚ್ಚು ಅಂಕಗಳಷ್ಟು ಕುಸಿತ ಕಂಡಿದೆ. ನಿನ್ನೆ ದಿನಾಂತ್ಯದಲ್ಲಿ ಈ ಸೂಚ್ಯಂಕ 63,148.15 ಅಂಕಗಳಲ್ಲಿ ಅಂತ್ಯಗೊಂಡಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಒಟ್ಟು ಷೇರುಸಂಪತ್ತು ಬಹಳಷ್ಟು ನಶಿಸಿದೆ. ವರದಿ ಪ್ರಕಾರ ಬಿಎಸ್​ಇಯಲ್ಲಿರುವ ಒಟ್ಟು ಷೇರುಸಂಪತ್ತು 324 ಲಕ್ಷಕೋಟಿ ರೂನಿಂದ 306 ಲಕ್ಷಕೋಟಿ ರೂಗೆ ಕುಸಿದಿದೆ. ಅಂದರೆ, ಸುಮಾರು 17,77,622 ಕೋಟಿ ರೂನಷ್ಟು ಷೇರುನಷ್ಟವಾಗಿದೆ.

ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?
ಷೇರುಪೇಟೆ
Follow us
|

Updated on: Oct 27, 2023 | 10:23 AM

ನವದೆಹಲಿ, ಅಕ್ಟೋಬರ್ 27: ಭಾರತದ ಷೇರುಪೇಟೆ ಕಳೆದ ಒಂದು ವಾರದಲ್ಲಿ ವಿಪರೀತವಾಗಿ ಅಲುಗಾಡುತ್ತಿದೆ. ಬಹಳಷ್ಟು ಷೇರುಗಳು ಸತತವಾಗಿ ಕುಸಿಯುತ್ತಿವೆ. ಕಳೆದ ಒಂದು ವಾರದಲ್ಲಂತೂ ಷೇರುಪೇಟೆ (share market) ಕುಸಿತ ಗಮನಾರ್ಹವಾಗಿದೆ. ಸತತ ಆರು ದಿನದಲ್ಲಿ ಷೇರುಪೇಟೆಯಲ್ಲಿ ಹೂಡಿಕೆದಾರರು ನಷ್ಟ ಮಾಡಿಕೊಂಡ ಹಣ 17.7 ಲಕ್ಷಕೋಟಿ ರೂ ಎನ್ನಲಾಗಿದೆ. ಇಸ್ರೇಲ್ ಪ್ಯಾಲಸ್ಟೀನ್ ಬಿಕ್ಕಟ್ಟು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಜಾಗತಿಕವಾಗಿ ಯಾವುದೇ ಬಿಕ್ಕಟ್ಟು ಉದ್ಭವವಾದರೂ ಈ ರೀತಿ ಷೇರುಪೇಟೆಯ ಮೇಲೆ ವ್ಯತಿರಿಕ್ತ ಪ್ರಭಾವ ಬೀರುವುದು ಅಸಹಜವೇನಲ್ಲ. ಮುಂದಿನ ದಿನಗಳಲ್ಲಿ ಷೇರುಪೇಟೆ ಸಹಜ ಸ್ಥಿತಿಗೆ ಮರಳಬಹುದು ಎಂದು ತಜ್ಞರು ಆಶಾಭಾವ ವ್ಯಕ್ತಪಡಿಸಿದ್ದಾರೆ.

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ ಒಂದು ದಿನದಲ್ಲಿ 900ಕ್ಕೂ ಹೆಚ್ಚು ಅಂಕಗಳಷ್ಟು ಕುಸಿತ ಕಂಡಿದೆ. ನಿನ್ನೆ ದಿನಾಂತ್ಯದಲ್ಲಿ ಈ ಸೂಚ್ಯಂಕ 63,148.15 ಅಂಕಗಳಲ್ಲಿ ಅಂತ್ಯಗೊಂಡಿದೆ. ಅಕ್ಟೋಬರ್ 17ರ ನಂತರ ಈ ಸೂಚ್ಯಂಕ ಶೇ. 4.93ರಷ್ಟು ಕುಸಿತ ಕಂಡಿದೆ. 3,279 ಅಂಕಗಳನ್ನು ಕಳೆದುಕೊಂಡಿದೆ.

ಇದನ್ನೂ ಓದಿ: ವನ್ಯಜೀವಿ ಕಳ್ಳಸಾಗಾಣಿಕೆ ಭಾರೀ ದೊಡ್ಡ ಬಿಸಿನೆಸ್; ವರ್ಷದಲ್ಲಿ ಎಷ್ಟು ಅಕ್ರಮ ಟ್ರೇಡಿಂಗ್ ನಡೆಯುತ್ತೆ ಗೊತ್ತಾ?

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಒಟ್ಟು ಷೇರುಸಂಪತ್ತು ಬಹಳಷ್ಟು ನಶಿಸಿದೆ. ವರದಿ ಪ್ರಕಾರ ಬಿಎಸ್​ಇಯಲ್ಲಿರುವ ಒಟ್ಟು ಷೇರುಸಂಪತ್ತು 324 ಲಕ್ಷಕೋಟಿ ರೂನಿಂದ 306 ಲಕ್ಷಕೋಟಿ ರೂಗೆ ಕುಸಿದಿದೆ. ಅಂದರೆ, ಸುಮಾರು 17,77,622 ಕೋಟಿ ರೂನಷ್ಟು ಷೇರುನಷ್ಟವಾಗಿದೆ.

ಬಿಎಸ್​ಇನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಪೈಕಿ 2,232 ಸಂಸ್ಥೆಗಳು ಕುಸಿತ ಕಂಡಿವೆ. ಮಹೀಂದ್ರ ಅಂಡ್ ಮಹೀಂದ್ರ ಅತಿಹೆಚ್ಚು ಹಿನ್ನಡೆ ಕಂಡಿದೆ. ಬಜಾಜ್ ಫೈನಾನ್ಸ್, ಏಷ್ಯನ್ ಪೇಂಟ್ಸ್, ಬಜಾಜ್ ಫಿನ್​ಸರ್ವ್, ನೆಸ್ಲೆ, ಟಾಟಾ, ಜೆಎಸ್​ಡಬ್ಲ್ಯು ಸ್ಟೀಲ್, ಟೆಕ್ ಮಹೀಂದ್ರ, ಎಚ್​ಡಿಎಫ್​ಸಿ ಬ್ಯಾಂಕ್, ಟಾಟಾ ಮೋಟಾರ್ಸ್, ಎಲ್ ಅಂಡ್ ಟಿ ಸಂಸ್ಥೆಗಳ ಷೇರುಗಳು ಹೆಚ್ಚು ನಷ್ಟ ಮಾಡಿಕೊಂಡಿವೆ.

ಇದನ್ನೂ ಓದಿ: Inspiring Story: ಅಂದು ತಮ್ಮ ಬಿಸಿನೆಸ್​ಗೆ ಬಂಡವಾಳ ತರಲು 150 ಬಾರಿ ವಿಫಲ; ಇಂದು ಹರ್ಷ್ ಕನಸಿನ ಬಿಸಿನೆಸ್ ಮೌಲ್ಯ 64,000 ಕೋಟಿ ರೂ

ಇಸ್ರೇಲ್ ಯುದ್ಧ ಮಾತ್ರವಾ ಈ ಹಿನ್ನಡೆಗೆ ಕಾರಣ?

ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ಯುದ್ಧ ನಿರೀಕ್ಷೆಮೀರಿದ ರೀತಿಯಲ್ಲಿ ದೀರ್ಘ ಬಿಕ್ಕಟ್ಟು ಮುಂದುವರಿಯುತ್ತಿರುವುದು ಷೇರು ಪೇಟೆಯ ಅಲುಗಾಟಕ್ಕೆ ಒಂದು ಕಾರಣವಾಗಿದೆ. ಆದರೆ ಹೂಡಿಕೆದಾರರು ಬಂಡವಾಳ ಹಿಂತೆಗೆಯಲು ಅದೊಂದೇ ಕಾರಣವಲ್ಲ. ಅಮೆರಿಕದ ಮಾರುಕಟ್ಟೆಯಲ್ಲಿ ಬಾಂಡ್ ಮೌಲ್ಯ ಹೆಚ್ಚುತ್ತಿರುವುದು ಇನ್ನೊಂದು ಪ್ರಮುಖ ಕಾರಣ. ಅಮೆರಿಕದ ಬಾಂಡ್​ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುವ ನಿರೀಕ್ಷೆಯಲ್ಲಿ ಬಹಳಷ್ಟು ಎಫ್​ಪಿಐಗಳು ಷೇರುಪೇಟೆಯಿಂದ ತಮ್ಮ ಹೂಡಿಕೆ ಹಿಂಪಡೆದು ಬಾಂಡ್​ಗಳಲ್ಲಿ ಇನ್ವೆಸ್ಟ್ ಮಾಡುತ್ತಿದ್ದಾರೆ ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು