AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?

Stock Market Shaking: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ ಒಂದು ದಿನದಲ್ಲಿ 900ಕ್ಕೂ ಹೆಚ್ಚು ಅಂಕಗಳಷ್ಟು ಕುಸಿತ ಕಂಡಿದೆ. ನಿನ್ನೆ ದಿನಾಂತ್ಯದಲ್ಲಿ ಈ ಸೂಚ್ಯಂಕ 63,148.15 ಅಂಕಗಳಲ್ಲಿ ಅಂತ್ಯಗೊಂಡಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಒಟ್ಟು ಷೇರುಸಂಪತ್ತು ಬಹಳಷ್ಟು ನಶಿಸಿದೆ. ವರದಿ ಪ್ರಕಾರ ಬಿಎಸ್​ಇಯಲ್ಲಿರುವ ಒಟ್ಟು ಷೇರುಸಂಪತ್ತು 324 ಲಕ್ಷಕೋಟಿ ರೂನಿಂದ 306 ಲಕ್ಷಕೋಟಿ ರೂಗೆ ಕುಸಿದಿದೆ. ಅಂದರೆ, ಸುಮಾರು 17,77,622 ಕೋಟಿ ರೂನಷ್ಟು ಷೇರುನಷ್ಟವಾಗಿದೆ.

ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 27, 2023 | 10:23 AM

Share

ನವದೆಹಲಿ, ಅಕ್ಟೋಬರ್ 27: ಭಾರತದ ಷೇರುಪೇಟೆ ಕಳೆದ ಒಂದು ವಾರದಲ್ಲಿ ವಿಪರೀತವಾಗಿ ಅಲುಗಾಡುತ್ತಿದೆ. ಬಹಳಷ್ಟು ಷೇರುಗಳು ಸತತವಾಗಿ ಕುಸಿಯುತ್ತಿವೆ. ಕಳೆದ ಒಂದು ವಾರದಲ್ಲಂತೂ ಷೇರುಪೇಟೆ (share market) ಕುಸಿತ ಗಮನಾರ್ಹವಾಗಿದೆ. ಸತತ ಆರು ದಿನದಲ್ಲಿ ಷೇರುಪೇಟೆಯಲ್ಲಿ ಹೂಡಿಕೆದಾರರು ನಷ್ಟ ಮಾಡಿಕೊಂಡ ಹಣ 17.7 ಲಕ್ಷಕೋಟಿ ರೂ ಎನ್ನಲಾಗಿದೆ. ಇಸ್ರೇಲ್ ಪ್ಯಾಲಸ್ಟೀನ್ ಬಿಕ್ಕಟ್ಟು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಜಾಗತಿಕವಾಗಿ ಯಾವುದೇ ಬಿಕ್ಕಟ್ಟು ಉದ್ಭವವಾದರೂ ಈ ರೀತಿ ಷೇರುಪೇಟೆಯ ಮೇಲೆ ವ್ಯತಿರಿಕ್ತ ಪ್ರಭಾವ ಬೀರುವುದು ಅಸಹಜವೇನಲ್ಲ. ಮುಂದಿನ ದಿನಗಳಲ್ಲಿ ಷೇರುಪೇಟೆ ಸಹಜ ಸ್ಥಿತಿಗೆ ಮರಳಬಹುದು ಎಂದು ತಜ್ಞರು ಆಶಾಭಾವ ವ್ಯಕ್ತಪಡಿಸಿದ್ದಾರೆ.

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ ಒಂದು ದಿನದಲ್ಲಿ 900ಕ್ಕೂ ಹೆಚ್ಚು ಅಂಕಗಳಷ್ಟು ಕುಸಿತ ಕಂಡಿದೆ. ನಿನ್ನೆ ದಿನಾಂತ್ಯದಲ್ಲಿ ಈ ಸೂಚ್ಯಂಕ 63,148.15 ಅಂಕಗಳಲ್ಲಿ ಅಂತ್ಯಗೊಂಡಿದೆ. ಅಕ್ಟೋಬರ್ 17ರ ನಂತರ ಈ ಸೂಚ್ಯಂಕ ಶೇ. 4.93ರಷ್ಟು ಕುಸಿತ ಕಂಡಿದೆ. 3,279 ಅಂಕಗಳನ್ನು ಕಳೆದುಕೊಂಡಿದೆ.

ಇದನ್ನೂ ಓದಿ: ವನ್ಯಜೀವಿ ಕಳ್ಳಸಾಗಾಣಿಕೆ ಭಾರೀ ದೊಡ್ಡ ಬಿಸಿನೆಸ್; ವರ್ಷದಲ್ಲಿ ಎಷ್ಟು ಅಕ್ರಮ ಟ್ರೇಡಿಂಗ್ ನಡೆಯುತ್ತೆ ಗೊತ್ತಾ?

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಒಟ್ಟು ಷೇರುಸಂಪತ್ತು ಬಹಳಷ್ಟು ನಶಿಸಿದೆ. ವರದಿ ಪ್ರಕಾರ ಬಿಎಸ್​ಇಯಲ್ಲಿರುವ ಒಟ್ಟು ಷೇರುಸಂಪತ್ತು 324 ಲಕ್ಷಕೋಟಿ ರೂನಿಂದ 306 ಲಕ್ಷಕೋಟಿ ರೂಗೆ ಕುಸಿದಿದೆ. ಅಂದರೆ, ಸುಮಾರು 17,77,622 ಕೋಟಿ ರೂನಷ್ಟು ಷೇರುನಷ್ಟವಾಗಿದೆ.

ಬಿಎಸ್​ಇನಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಪೈಕಿ 2,232 ಸಂಸ್ಥೆಗಳು ಕುಸಿತ ಕಂಡಿವೆ. ಮಹೀಂದ್ರ ಅಂಡ್ ಮಹೀಂದ್ರ ಅತಿಹೆಚ್ಚು ಹಿನ್ನಡೆ ಕಂಡಿದೆ. ಬಜಾಜ್ ಫೈನಾನ್ಸ್, ಏಷ್ಯನ್ ಪೇಂಟ್ಸ್, ಬಜಾಜ್ ಫಿನ್​ಸರ್ವ್, ನೆಸ್ಲೆ, ಟಾಟಾ, ಜೆಎಸ್​ಡಬ್ಲ್ಯು ಸ್ಟೀಲ್, ಟೆಕ್ ಮಹೀಂದ್ರ, ಎಚ್​ಡಿಎಫ್​ಸಿ ಬ್ಯಾಂಕ್, ಟಾಟಾ ಮೋಟಾರ್ಸ್, ಎಲ್ ಅಂಡ್ ಟಿ ಸಂಸ್ಥೆಗಳ ಷೇರುಗಳು ಹೆಚ್ಚು ನಷ್ಟ ಮಾಡಿಕೊಂಡಿವೆ.

ಇದನ್ನೂ ಓದಿ: Inspiring Story: ಅಂದು ತಮ್ಮ ಬಿಸಿನೆಸ್​ಗೆ ಬಂಡವಾಳ ತರಲು 150 ಬಾರಿ ವಿಫಲ; ಇಂದು ಹರ್ಷ್ ಕನಸಿನ ಬಿಸಿನೆಸ್ ಮೌಲ್ಯ 64,000 ಕೋಟಿ ರೂ

ಇಸ್ರೇಲ್ ಯುದ್ಧ ಮಾತ್ರವಾ ಈ ಹಿನ್ನಡೆಗೆ ಕಾರಣ?

ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ಯುದ್ಧ ನಿರೀಕ್ಷೆಮೀರಿದ ರೀತಿಯಲ್ಲಿ ದೀರ್ಘ ಬಿಕ್ಕಟ್ಟು ಮುಂದುವರಿಯುತ್ತಿರುವುದು ಷೇರು ಪೇಟೆಯ ಅಲುಗಾಟಕ್ಕೆ ಒಂದು ಕಾರಣವಾಗಿದೆ. ಆದರೆ ಹೂಡಿಕೆದಾರರು ಬಂಡವಾಳ ಹಿಂತೆಗೆಯಲು ಅದೊಂದೇ ಕಾರಣವಲ್ಲ. ಅಮೆರಿಕದ ಮಾರುಕಟ್ಟೆಯಲ್ಲಿ ಬಾಂಡ್ ಮೌಲ್ಯ ಹೆಚ್ಚುತ್ತಿರುವುದು ಇನ್ನೊಂದು ಪ್ರಮುಖ ಕಾರಣ. ಅಮೆರಿಕದ ಬಾಂಡ್​ಗಳಲ್ಲಿ ಹೆಚ್ಚಿನ ರಿಟರ್ನ್ ಸಿಗುವ ನಿರೀಕ್ಷೆಯಲ್ಲಿ ಬಹಳಷ್ಟು ಎಫ್​ಪಿಐಗಳು ಷೇರುಪೇಟೆಯಿಂದ ತಮ್ಮ ಹೂಡಿಕೆ ಹಿಂಪಡೆದು ಬಾಂಡ್​ಗಳಲ್ಲಿ ಇನ್ವೆಸ್ಟ್ ಮಾಡುತ್ತಿದ್ದಾರೆ ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ