AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಅತಿಹೆಚ್ಚು ಷೇರು ವಹಿವಾಟು; ಭಾರತದ ಎನ್​ಎಸ್​ಇ ಹೊಸ ವಿಶ್ವದಾಖಲೆ

National Stock Exchange world record in transactions: ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಜೂನ್ 5ರಂದು ಭರ್ಜರಿ ಷೇರು ವಹಿವಾಟು ನಡೆದಿದೆ. ಒಂದೇ ದಿನದಲ್ಲಿ ಬರೋಬ್ಬರಿ 1,971 ಕೋಟಿ ಆರ್ಡರ್​​ಗಳು ಬುಕ್ ಆಗಿವೆ. ಈ ಪೈಕಿ 28.55 ಕೋಟಿ ಟ್ರೇಡ್​ಗಳಾಗಿವೆ ಎಂದು ಎನ್​ಎಸ್​ಇ ಸಿಇಒ ಆಶೀಶ್ ಚೌಹಾಣ್ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಇದು ವಿಶ್ವದಾಖಲೆ ಎಂದೂ ಅವರು ತಿಳಿಸಿದ್ದಾರೆ. ಜೂನ್ 4ರಂದು ಗಣನೀಯ ಪ್ರಮಾಣದಲ್ಲಿ ನಷ್ಟ ಮಾಡಿಕೊಂಡಿದ್ದ ಹೂಡಿಕೆದಾರರಿಗೆ ಜೂನ್ 5ರಂದು ಒಂದಷ್ಟು ಸಮಾಧಾನ ಸಿಕ್ಕಿದೆ.

ಒಂದೇ ದಿನ ಅತಿಹೆಚ್ಚು ಷೇರು ವಹಿವಾಟು; ಭಾರತದ ಎನ್​ಎಸ್​ಇ ಹೊಸ ವಿಶ್ವದಾಖಲೆ
ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 05, 2024 | 5:22 PM

Share

ನವದೆಹಲಿ, ಜೂನ್ 5: ಭಾರತದ ಷೇರು ಮಾರುಕಟ್ಟೆ (stock market) ಕಳೆದ ಕೆಲ ದಿನಗಳಿಂದ ಭರ್ಜರಿ ವಹಿವಾಟು ಕಾಣುತ್ತಿದೆ. ನಿನ್ನೆ ಲೋಕಸಭಾ ಚುನಾವಣೆಯ ಫಲಿತಾಂಶ (Lok Sabha elections 2024) ಪ್ರಕಟವಾದ ದಿನದಂದು ಸಾಕಷ್ಟು ಜನರು ಷೇರುಗಳನ್ನು ಆಫ್​ಲೋಡ್ ಮಾಡಿ ಹೋಗಿದ್ದರು. ಇವತ್ತು ಬೇರೆ ಬೇರೆ ವಲಯದ ಷೇರುಗಳಿಗೆ ಹೂಡಿಕೆ ಹರಿದುಬರುತ್ತಿದೆ. ಇಂದು ಬುಧವಾರ ಭಾರೀ ಸಂಖ್ಯೆಯಲ್ಲಿ ಷೇರು ವಹಿವಾಟು ನಡೆದಿರುವುದು ತಿಳಿದುಬಂದಿದೆ. ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ (NSE) ಹೊಸ ವಿಶ್ವದಾಖಲೆಯೇ ಆಗಿದೆ ಎಂದು ಎನ್​ಎಸ್​ಇ ಸಿಇಒ ಹೇಳಿದ್ದಾರೆ. ಜೂನ್ 5, ಬುಧವಾರದಂದು ಮಾರುಕಟ್ಟೆ ಅವಧಿಯಲ್ಲಿ 28.55 ಕೋಟಿ ಟ್ರಾನ್ಸಾಕ್ಷನ್​ಗಳಾಗಿವೆ ಎಂದು ಸಿಇಒ ಆಶೀಶ್ ಚೌಹಾಣ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ಜೂನ್ 5ರಂದು ಬೆಳಗ್ಗೆ 9:15ರಿಂದ 3:30ರವರೆಗೆ ಆರು ಗಂಟೆ 15 ನಿಮಿಷ ಕಾಲದಲ್ಲಿ ಎನ್​ಎಸ್​ಇ ವಿಶ್ವದಾಖಲೆಯ ಸಂಖ್ಯೆಯಲ್ಲಿ ವಹಿವಾಟುಗಳನ್ನು ನಿರ್ವಹಿಸಿದೆ. ಒಂದು ದಿನದಲ್ಲಿ 1,971 ಕೋಟಿ ಆರ್ಡರ್​ಗಳು, ಮತ್ತು 28.55 ಕೋಟಿ ಟ್ರೇಡ್​ಗಳನ್ನು ನಿರ್ವಹಣೆ ಮಾಡಲಾಗಿದೆ,’ ಎಂದು ಎನ್​ಎಸ್​ಇ ಸಿಇಒ ತಿಳಿಸಿದ್ದಾರೆ.

ಇದನ್ನೂ ಓದಿ: ಐಪಿಒದಲ್ಲಿ ಷೇರು ಖರೀದಿಸಿ ಲಿಸ್ಟಿಂಗ್​ನಲ್ಲಿ ಮಾರಿದಾಗ ಎಷ್ಟು ತೆರಿಗೆ ಕಟ್ಟಬೇಕು?

ಆರ್ಡರ್​ಗೂ ಟ್ರೇಡ್​ಗೂ ಏನು ವ್ಯತ್ಯಾಸ?

ಇಲ್ಲಿ ಆರ್ಡರ್ ಬುಕ್ ಮಾಡುವುದು ಎಂದರೆ ಷೇರು ಮಾರುವವರು ನಿರ್ದಿಷ್ಟ ಷೇರುಗಳನ್ನು ಮಾರಾಟಕ್ಕಿಡುತ್ತಾರೆ. ಇದು ಆರ್ಡರ್ ಸಲ್ಲಿಕೆ ಮಾಡಿದಂತೆ. ಈ ಷೇರುಗಳನ್ನು ಯಾರಾದರೂ ಖರೀದಿಸಿದರೆ ಆಗ ಅದು ಟ್ರೇಡ್ ಆದಂತೆ. ಅಲ್ಲಿಗೆ ಒಂದು ವಹಿವಾಟು ಮುಗಿದಂತೆ. ಈ ರೀತಿ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಇಂದು ಜೂನ್ 5ರಂದು ಬರೋಬ್ಬರಿ 28.55 ಕೋಟಿಯಷ್ಟು ವಹಿವಾಟುಗಳಾಗಿರುವುದು ಆಶೀಶ್ ಅವರ ಎಕ್ಸ್ ಪೋಸ್ಟ್​ನಿಂದ ತಿಳಿದು ಬರುತ್ತದೆ. ಆದರೆ, ಈ 28 ಕೋಟಿ ವಹಿವಾಟಿನಲ್ಲಿ ಎಷ್ಟು ಮೊತ್ತದ ಹಣದ ವಿನಿಮಯ ಆಯಿತು ಎಂಬ ಮಾಹಿತಿ ಗೊತ್ತಾಗಿಲ್ಲ.

ಆದರೆ, ನಿನ್ನೆ ಜೂನ್ 4ರಂದು ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂಗೂ ಹೆಚ್ಚು ಹಣ ನಷ್ಟವಾಗಿತ್ತು. ಇವತ್ತು ಸುಮಾರು 10-15 ಲಕ್ಷ ಕೋಟಿ ರೂನಷ್ಟು ಲಾಭ ಮಾಡಿಕೊಂಡಿದ್ದಾರೆ ಹೂಡಿಕೆದಾರರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಈ ಹೇಳಿಕೆ ಕೊಟ್ಟ ಬಳಿಕ ಷೇರು ಮಾರುಕಟ್ಟೆ ಮತ್ತೆ ಹಸಿರು ಬಣ್ಣಕ್ಕೆ

ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಎರಡರಲ್ಲೂ ಹೇರಳವಾಗಿ ವಹಿವಾಟುಗಳಾಗುತ್ತಿವೆ. ನಿನ್ನೆಯಿಂದ ಸಾರ್ವಜನಿಕ ವಲಯದ ಉದ್ದಿಮೆಗಳ ಷೇರುಗಳನ್ನು ಸಿಕ್ಕಂತೆ ಮಾರಲಾಗುತ್ತಿದೆ. ಇವತ್ತೂ ಕೂಡ ಪಿಎಸ್​ಯು ಸ್ಟಾಕ್​ಗಳಿಗೆ ದಯನೀಯ ಸ್ಥಿತಿ ಮುಂದುವರಿದಿತ್ತು. ಆದರೆ, ಎಫ್​ಎಂಸಿಜಿ ಮತ್ತು ವಾಹನ ಸಂಸ್ಥೆಗಳ ಷೇರುಗಳತ್ತ ಹೂಡಿಕೆದಾರರ ಹಣ ಹರಿದುಹೋಗುತ್ತಿರುವುದು ಗಮನಾರ್ಹ ಎನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ