AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ?

Indian stock market rises on Monday: ಸತತ ಐದು ದಿನ ಕುಸಿತ ಕಂಡಿದ್ದ ಭಾರತದ ಷೇರುಮಾರುಕಟ್ಟೆ ಆ ಸರಮಾಲೆಯನ್ನು ಕಳಚಿಕೊಂಡಿದೆ. ಜನವರಿ 12, ಸೋಮವಾರವಾದ ಇಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಕ್ರಮವಾಗಿ ಶೇ. 0.36 ಮತ್ತು ಶೇ. 0.42 ಗಳಿಸಿವೆ. ದಿನದ ಮೊದಲಾರ್ಧ ಹಿನ್ನಡೆಯಲ್ಲಿದ್ದರೂ ನಂತರ ಚೇತರಿಕೆ ಕಂಡಿದೆ. ಇದಕ್ಕೆ ಏನು ಕಾರಣ ಎಂದು ಇಲ್ಲಿ ವಿಶ್ಲೇಷಿಸಲಾಗಿದೆ.

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ?
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 12, 2026 | 4:55 PM

Share

ನವದೆಹಲಿ, ಜನವರಿ 12: ಇವತ್ತು ಬೆಳಗ್ಗೆ ಟ್ರೇಡಿಂಗ್ ಅವಧಿಯಲ್ಲಿ ಷೇರು ಮಾರುಕಟ್ಟೆ (Stock Market) ಕಳೆಗುಂದಿತ್ತು. ಸತತ ಐದು ಸೆಷನ್ಸ್ ಕುಸಿದಿದ್ದ ಮಾರುಕಟ್ಟೆ, ಇವತ್ತು ಆರನೇ ಸೆಷನ್​ನಲ್ಲೂ ಭರ್ಜರಿ ಇಳಿಕೆಯ ಹಾದಿಯಲ್ಲಿತ್ತು. ಮಾಧ್ಯಮಗಳಲ್ಲೂ ಕೂಡ ಸತತ ಆರು ದಿನ ಷೇರು ಮಾರುಕಟ್ಟೆ ಕುಸಿದಿದೆ ಎನ್ನುವಂತಹ ಸುದ್ದಿ ಪ್ರಕಟವಾಯಿತು. ಆದರೆ, ನೋಡನೋಡುತ್ತಿದ್ದಂತೆಯೇ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಪಾಸಿಟಿವ್ ಆಗಿವೆ.

ಸೆನ್ಸೆಕ್ಸ್ ಇವತ್ತು ಟ್ರೇಡಿಂಗ್ ಕೊನೆಯಲ್ಲಿ 83,878 ಅಂಕಗಳಲ್ಲಿ ಅಂತ್ಯಗೊಂಡಿತು. 302 ಅಂಕ ಅಥವಾ ಶೇ 0.36ರಷ್ಟು ಹೆಚ್ಚಳ ಆಗಿದೆ. ನಿಫ್ಟಿ50 ಸೂಚ್ಯಂಕವು ಶೇ. 0.42 ಅಥವಾ 107 ಅಂಕ ಗಳಿಕೆಯೊಂದಿಗೆ 25,790.25 ಮಟ್ಟದಲ್ಲಿ ಅಂತ್ಯಗೊಂಡಿದೆ.

ಇದನ್ನೂ ಓದಿ: ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ

ಸೆನ್ಸೆಕ್ಸ್ ಇವತ್ತು ಒಂದು ಹಂತದಲ್ಲಿ 82,861 ಅಂಕಗಳಿಗೆ ಕುಸಿದಿತ್ತು. ದ್ವಿತೀಯಾರ್ಧದಲ್ಲಿ ಚೇತರಿಸಿಕೊಂಡು 700 ಅಂಕಗಳನ್ನು ಗಳಿಸಿ, ಒಟ್ಟಾರೆ 302 ಅಂಕಗಳ ಮುನ್ನಡೆ ಪಡೆದಿದೆ. ಆದರೆ, ಲಾರ್ಜ್ ಕ್ಯಾಪ್ ಇಂಡೆಕ್ಸ್ ಸಕಾರಾತ್ಮಕ ಸ್ಪಂದನೆ ಪಡೆದಿವೆ. ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಷೇರುಗಳು ಹಿನ್ನಡೆ ಕಂಡಿವೆ.

ಷೇರು ಮಾರುಕಟ್ಟೆ ಸೋಮವಾರ ದ್ವಿತೀಯಾರ್ಧದಲ್ಲಿ ಜಿಗಿದಿದ್ದು ಯಾಕೆ?

ಭಾರತ ಮತ್ತು ಅಮೆರಿಕ ದೇಶಗಳು ವ್ಯಾಪಾರ ಒಪ್ಪಂದ ಅಂತಿಮಗೊಳಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ಅವರು ಹೇಳಿಕೆ ನೀಡಿದ್ದು ಮಾರುಕಟ್ಟೆಗೆ ಸಕಾರಾತ್ಮಕ ಭಾವನೆ ತರಲು ಸಹಾಯವಾಗಿದೆ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

‘ಅಮೆರಿಕಕ್ಕೆ ಭಾರತದಷ್ಟು ಮುಖ್ಯವಾಗಿರುವ ದೇಶ ಮತ್ತೊಂದಿಲ್ಲ. ಟ್ರೇಡ್ ಡೀಲ್ ಅಂತಿಮಗೊಳಿಸಲು ಎರಡೂ ದೇಶಗಳು ಪ್ರಯತ್ನಿಸುತ್ತಿವೆ. ನಿಜವಾದ ಸ್ನೇಹಿತರು ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ, ಕೊನೆಯಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಯಶಸ್ವಿಯಾಗುತ್ತಾರೆ’ ಎಂದು ಸರ್ಗಿಯೋ ಗೋರ್ ಹೇಳಿದ್ದಾರೆ. ಇವರ ಈ ಭರವಸೆದಾಯಕ ಮಾತುಗಳು ಮಾರುಕಟ್ಟೆಯ ಉತ್ಸಾಹ ಹೆಚ್ಚಲು ಕಾರಣವಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್