AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock market: ದಿನದ ಕನಿಷ್ಠ ಮಟ್ಟದಿಂದ 400 ಪಾಯಿಂಟ್ ಚೇತರಿಕೆ ಕಂಡ ಸೆನ್ಸೆಕ್ಸ್; ಈಗಲೂ 1000 ಪಾಯಿಂಟ್ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರದಂದು (ಏಪ್ರಿಲ್ 19, 2021) ಭಾರೀ ಇಳಿಕೆ ಕಂಡಿವೆ. ಏರುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಪ್ರಭಾವ ಮಾರುಕಟ್ಟೆ ಮೇಲೆ ಆಗಿದೆ.

Stock market: ದಿನದ ಕನಿಷ್ಠ ಮಟ್ಟದಿಂದ 400 ಪಾಯಿಂಟ್ ಚೇತರಿಕೆ ಕಂಡ ಸೆನ್ಸೆಕ್ಸ್; ಈಗಲೂ 1000 ಪಾಯಿಂಟ್ ಕುಸಿತ
ಸಾಂದರ್ಭಿಕ ಚಿತ್ರ
Srinivas Mata
|

Updated on:Apr 19, 2021 | 1:51 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳು ಸೋಮವಾರ (ಏಪ್ರಿಲ್ 19, 2021) ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿವೆ. ಸೆನ್ಸೆಕ್ಸ್ ಸೂಚ್ಯಂಕವು ಮಧ್ಯಾಹ್ನ 1.10ರ ಹೊತ್ತಿಗೆ 1022 ಪಾಯಿಂಟ್ ಕುಸಿದು, 47,809 ಪಾಯಿಂಟ್​ನೊಂದಿಗೆ ವಹಿವಾಟು ನಡೆಸುತ್ತಿತ್ತು. ಆ ಮೂಲಕ ದಿನದ ಕನಿಷ್ಠ ಮಟ್ಟವಾಗಿ 1450ಕ್ಕೂ ಹೆಚ್ಚು ಪಾಯಿಂಟ್ ಕುಸಿದಿದ್ದ ಸೆನ್ಸೆಕ್ಸ್, 400ಕ್ಕೂ ಹೆಚ್ಚು ಪಾಯಿಂಟ್ ಏರಿಕೆ ಕಂಡಿದೆ. ಇನ್ನು ಎನ್​ಎಸ್​ಇ ನಿಫ್ಟಿ ಸೂಚ್ಯಂಕವು ಮಧ್ಯಾಹ್ನ 1.15ರ ಹೊತ್ತಿಗೆ 306 ಪಾಯಿಂಟ್ ಕುಸಿದು 14,311.65 ಪಾಯಿಂಟ್​ನೊಂದಿಗೆ ವ್ಯವಹಾರ ನಡೆಸುತ್ತಿತ್ತು. ಅಂದ ಹಾಗೆ ನಿಫ್ಟಿ- 50 ದಿನದ ಕನಿಷ್ಠ ಮಟ್ಟವಾದ 14,191.40 ಪಾಯಿಂಟ್ ತಲುಪಿ ಅಲ್ಲಿಂದ ಚೇತರಿಕೆ ಕಂಡಿದೆ.

ನಿಫ್ಟಿ ಪಿಎಸ್​ಯು ಬ್ಯಾಂಕ್, ವಾಹನ, ಮೂಲಸೌಕರ್ಯ ಮತ್ತು ಎನರ್ಜಿ ಸೂಚ್ಯಂಕಗಳು ಶೇ 2ರಿಂದ 5ರಷ್ಟು ಕುಸಿತ ಕಂಡವು. ಇನ್ನು ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ 2 ಪರ್ಸೆಂಟ್ ಇಳಿಕೆ ಕಂಡವು. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಹೂಡಿಕೆದಾರರು ಆತಂಕಕ್ಕೆ ಈಡಾಗಿದ್ದಾರೆ. ಅಮೆರಿಕ ಡಾಲರ್ ವಿರುದ್ಧ ರೂಪಾಯಿ ಮೌಲ್ಯದ ಕುಸಿತವು ಮುಂದುವರಿದಿದೆ. ಈ ಲೇಖನ ಸಿದ್ಧವಾಗುವ ಹೊತ್ತಿಗೆ ಷೇರು ಮಾರ್ಕೆಟ್​ನಲ್ಲಿ ಏರಿಕೆ ಹಾಗೂ ಇಳಿಕೆ ಕಂಡಿದ್ದ ಪ್ರಮುಖ ಷೇರುಗಳ ವಿವರ ಹೀಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ 5 ಷೇರುಗಳು ಡಾ ರೆಡ್ಡೀಸ್ ಲ್ಯಾಬ್ಸ್ ಇನ್ಫೋಸಿಸ್ ಸಿಪ್ಲಾ ಎಚ್​ಸಿಎಲ್ ಟೆಕ್ ವಿಪ್ರೋ

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ 5 ಷೇರುಗಳು ಆಕ್ಸಿಸ್ ಬ್ಯಾಂಕ್ ಇಂಡಸ್​ಇಂಡ್ ಬ್ಯಾಂಕ್ ಒಎನ್​ಜಿಸಿ ಅದಾನಿ ಪೋರ್ಟ್ಸ್ ಅಲ್ಟ್ರಾಟೆಕ್ ಸಿಮೆಂಟ್

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

(Indian stock market index Sensex tank more than 1000 points on April 19, 2021 at 1 PM. Here is the top gainers and losers)

Published On - 1:39 pm, Mon, 19 April 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ