AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಜಿಎಸ್​ಟಿಯಿಂದ ಹಿಡಿದು ರುಪಾಯಿವರೆಗೆ ಷೇರು ಮಾರುಕಟ್ಟೆಗೆ ಉತ್ಸಾಹ ಹೆಚ್ಚಿಸಿದ ಅಂಶಗಳು

Reasons behind rise of stock market: ಭಾರತದ ಷೇರು ಮಾರುಕಟ್ಟೆ ಇವತ್ತು ಮಿರಮಿರ ಮಿಂಚುತ್ತಿದೆ. ಬಹುತೇಕ ಎಲ್ಲಾ ಸೂಚ್ಯಂಕಗಳು ಪಾಸಿಟಿವ್ ಆಗಿವೆ. ಕಳೆದ ಕೆಲ ವಾರಗಳಿಂದ ವಿಕ್ಷಿಪ್ತ ಸ್ಥಿತಿಯಲ್ಲಿದ್ದ ಷೇರುಪೇಟೆ ಇವತ್ತು ಹೊಸ ಉತ್ಸಾಹ ಪಡೆಯಲು ಕಾರಣಗಳಿವೆ. ಜಿಎಸ್​ಟಿ ಸುಧಾರಣೆಯಿಂದ ಆಗಬಹುದಾದ ಪಾಸಿಟಿವ್ ಪರಿಣಾಮಗಳಿಂದ ಹಿಡಿದು ಟ್ರಂಪ್ ಟ್ಯಾರಿಫ್ ಹೊರೆ ಕಡಿಮೆ ಆಗುವ ಸಾಧ್ಯತೆವರೆಗೆ ಕಾರಣಗಳಿವೆ.

Stock Market: ಜಿಎಸ್​ಟಿಯಿಂದ ಹಿಡಿದು ರುಪಾಯಿವರೆಗೆ ಷೇರು ಮಾರುಕಟ್ಟೆಗೆ ಉತ್ಸಾಹ ಹೆಚ್ಚಿಸಿದ ಅಂಶಗಳು
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 18, 2025 | 11:47 AM

Share

ನವದೆಹಲಿ, ಆಗಸ್ಟ್ 18: ಕಳೆದ ಕೆಲ ವಾರಗಳಿಂದ ಕಳೆಗುಂದಿದ್ದ ಷೇರು ಮಾರುಕಟ್ಟೆ (stock market) ಇವತ್ತು ಸೋಮವಾರ ಭರ್ಜರಿ ಏರಿಕೆ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಗರಿಗೆದರಿವೆ. ಬಿಎಸ್​ಇನ ಸೆನ್ಸೆಕ್ಸ್ ಸೋಮವಾರ ಒಂದು ಸಾವಿರಕ್ಕೂ ಹೆಚ್ಚು ಅಂಕಗಳ ಏರಿಕೆ ಕಂಡಿದೆ. ನಿಫ್ಟಿ50 ಸೂಚ್ಯಂಕ ಹಲವು ದಿನಗಳ ಬಳಿಕ 25,000 ಅಂಕಗಳ ಗಡಿ ದಾಟಿದೆ. ಅದರಲ್ಲೂ ಆಟೊಮೊಬೈಲ್ ಮತ್ತು ಕನ್ಸೂಮರ್ ಗೂಡ್ಸ್ ಕ್ಷೇತ್ರಗಳ ಷೇರುಗಳಿಗೆ ಬೇಡಿಕೆ ಹೆಚ್ಚಿದೆ. ಷೇರು ಮಾರುಕಟ್ಟೆ ದಿಢೀರನೇ ಲಂಬವಾಗಿ ಏರಲು ಏನು ಕಾರಣ?

ಜಿಎಸ್​ಟಿ ಸುಧಾರಣೆಗೆ ಸರ್ಕಾರದ ಇಂಗಿತ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್​ಟಿ ಸುಧಾರಣೆಗಳನ್ನು ತರುವುದಾಗಿ ಘೋಷಿಸಿದ್ದರು. ಶೇ. 12 ಮತ್ತು ಶೇ. 28 ಟ್ಯಾಕ್ಸ್ ಸ್ಲಾಬ್​ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18 ಸ್ಲ್ಯಾಬ್ ಮಾತ್ರ ಉಳಿಸಿಕೊಳ್ಳಲು ಸರ್ಕಾರ ಯೋಜಿಸಿದೆ. ಟ್ಯಾಕ್ಸ್ ದರಗಳು ಸಾಕಷ್ಟು ಕಡಿಮೆ ಆಗಲಿವೆ. ಇದರಿಂದ ಹೆಚ್ಚಿನ ಸರಕುಗಳ ಬೆಲೆ ಇಳಿಕೆ ಆಗಬಹುದು. ಪ್ರಯಾಣಿಕ ವಾಹನಗಳ ಮೇಲಿನ ಜಿಎಸ್​ಟಿಯನ್ನೂ ಕಡಿಮೆ ಮಾಡಬಹುದು. ಇದು ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ.

ಇದನ್ನೂ ಓದಿ: ಸೋಲಾರ್ ಶಕ್ತಿ: ಐತಿಹಾಸಿಕ ಸೆಂಚುರಿ ಭಾರಿಸಿದ ಭಾರತ; 100 ಗಿ.ವ್ಯಾ. ಸೋಲಾರ್ ಪಿವಿ ಮಾಡ್ಯೂಲ್ ತಯಾರಿಕಾ ಸಾಮರ್ಥ್ಯ

ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್

ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಸಂಸ್ಥೆ ಭಾರತಕ್ಕೆ ನೀಡಿರುವ ರೇಟಿಂಗ್ ಅನ್ನು ಬಿಬಿಬಿಗೆ ಅಪ್​ಗ್ರೇಡ್ ಮಾಡಿದೆ. ಮುಂದಿನ ಎರಡು ಮೂರು ವರ್ಷ ಭಾರತದ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದರಿಂದ ಈ ಅಪ್​ಗ್ರೇಡ್ ಕೊಡಲಾಗಿದೆ.

ರಷ್ಯಾ ಉಕ್ರೇನ್ ಯುದ್ಧ ಅಂತ್ಯಗೊಳ್ಳುವ ಸಂಭವ

ಜಗತ್ತಿಗೆ ತಲೆಬೇನೆ ತಂದಿದ್ದ ರಷ್ಯಾ ಮತ್ತು ಉಕ್ರೇನ್ ಯುದ್ಧ ಅಂತ್ಯಗೊಳ್ಳುವ ಭರವಸೆಯ ಕಿರಣವೊಂದು ಕಂಡಿದೆ. ವ್ಲಾದಿಮಿರ್ ಪುಟಿನ್ ಮತ್ತು ಝೆಲೆನ್​ಸ್ಕಿ ಅವರನ್ನು ಡೊನಾಲ್ಡ್ ಟ್ರಂಪ್ ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ. ಷೇರು ಮಾರುಕಟ್ಟೆ ಚೇತರಿಕೆ ಪಡೆಯಲು ಇದೂ ಒಂದು ಕಾರಣ ಇರಬಹುದು.

ಕಚ್ಚಾ ತೈಲ ಬೆಲೆ ಇಳಿಕೆ

ರಷ್ಯಾದ ತೈಲ ಹೆಚ್ಚಿನ ನಿರ್ಬಂಧ ಹೇರುವ ನಿರ್ಧಾರದಿಂದ ಅಮೆರಿಕ ಹಿಂದಕ್ಕೆ ಸರಿದಿದೆ. ಇದರಿಂದ ಜಾಗತಿಕವಾಗಿ ತೈಲ ಬೆಲೆ ಸ್ವಲ್ಪ ಇಳಿಕೆ ಆಗಿದೆ.

ಸಕಾರಾತ್ಮಕ ಜಾಗತಿಕ ಮಾರುಕಟ್ಟೆ

ಚೀನಾ, ತೈವಾನ್, ಜಪಾನ್, ಸೌತ್ ಕೊರಿಯಾ, ಹಾಂಕಾಂಗ್ ಇತ್ಯಾದಿ ದೇಶಗಳ ಷೇರು ಮಾರುಕಟ್ಟೆ ಇವತ್ತು ಹಸಿರು ಬಣ್ಣಕ್ಕೆ ತಿರುಗಿವೆ. ಭಾರತದ ಮಾರುಕಟ್ಟೆಯ ಮೇಲೂ ಇದು ಪಾಸಿಟಿವ್ ಪ್ರಭಾವ ಬೀರಿರಬಹುದು.

ಇದನ್ನೂ ಓದಿ: ಭಾರತದ ಕ್ರೆಡಿಟ್ ರೇಟಿಂಗ್ ಹೆಚ್ಚಳದ ಬಳಿಕ ಎಸ್​ಬಿಐ ಸೇರಿದಂತೆ 10 ಬ್ಯಾಂಕುಗಳ ರೇಟಿಂಗ್ ಅಪ್​ಗ್ರೇಡ್ ಮಾಡಿದ ಎಸ್ ಅಂಡ್ ಪಿ

ಅಮೆರಿಕ ಟ್ಯಾರಿಫ್ ಸಡಿಲಿಕೆ

ಭಾರತದ ಮೇಲೆ ಹೆಚ್ಚುವರಿಯಾಗಿ ಹಾಕಲಾಗಿದ್ದ ಶೇ. 25 ಟ್ಯಾರಿಫ್ ಅನ್ನು ಅಮೆರಿಕ ಹಿಂಪಡೆಯುವ ಸಾಧ್ಯತೆ ಇದೆ. ಇದು ಮಾರುಕಟ್ಟೆಯ ಉತ್ಸಾಹ ಹೆಚ್ಚಿಸಿದೆ.

ರುಪಾಯಿ ಏರಿಕೆ

ಡಾಲರ್ ಎದುರು ರುಪಾಯಿ ಮೌಲ್ಯ ಏರಿದೆ. ಸೋಮವಾರ 20 ಪೈಸೆಯಷ್ಟು ರುಪಾಯಿ ಮೌಲ್ಯ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ