70 ಗಂಟೆ ಕೆಲಸ ಮಾಡಬೇಕೆಂದು ಹೇಳುವ ನಾರಾಯಣಮೂರ್ತಿ ನಿಜಜೀವನದಲ್ಲಿ ಹೇಗೆ? ಪತ್ನಿ ಸುಧಾಮೂರ್ತಿ ಹೇಳಿದ್ದಿದು

Sudha Murthy Speaks On Husband NR Narayana Murthy: ಮುಂಬೈನಲ್ಲಿ ಭಾನುವಾರ (ಅ. 29) ನಡೆದ 14ನೇ ಟಾಟಾ ಲಿಟರೇಚರ್ ಫೆಸ್ಟಿವಲ್​ ಹಿನ್ನೆಲೆಯಲ್ಲಿ ಭಾನುವಾರ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸುಧಾಮೂರ್ತಿ, ತಮ್ಮ ಪತಿಯ ಕಾಯಕ ಪ್ರವೃತ್ತಿಯ ಬಗ್ಗೆ ಇನ್ನಷ್ಟು ಬೆಳಕು ಚೆಲ್ಲಿದ್ದಾರೆ. ತಮ್ಮ ಪತಿ ವಾರಕ್ಕೆ 80ರಿಂದ 90 ಗಂಟೆಗಳಷ್ಟು ಕೆಲಸ ಮಾಡುತ್ತಾರೆ. ಅದಕ್ಕಿಂತ ಕೆಲಸ ಮಾಡಿ ಗೊತ್ತೇ ಇಲ್ಲ ಅವರಿಗೆ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

70 ಗಂಟೆ ಕೆಲಸ ಮಾಡಬೇಕೆಂದು ಹೇಳುವ ನಾರಾಯಣಮೂರ್ತಿ ನಿಜಜೀವನದಲ್ಲಿ ಹೇಗೆ? ಪತ್ನಿ ಸುಧಾಮೂರ್ತಿ ಹೇಳಿದ್ದಿದು
ಸುಧಾಮೂರ್ತಿ
Follow us
|

Updated on:Oct 30, 2023 | 1:49 PM

ಮುಂಬೈ, ಅಕ್ಟೋಬರ್ 30: ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ (NR Narayana Murthy) ಅವರು ಕಳೆದ ವಾರ ಹೇಳಿದ್ದು ಈಗಲೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯ ವಿಷಯವಾಗಿದೆ. ಈ ಬಗ್ಗೆ ನಾರಾಯಣಮೂರ್ತಿ ಅವರ ಪತ್ನಿ ಸುಧಾಮೂರ್ತಿ (Sudha Murthy) ಮಾತನಾಡಿ ಕೆಲವೊಂದಿಷ್ಟು ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಪತಿ ವಾರಕ್ಕೆ 80ರಿಂದ 90 ಗಂಟೆಗಳಷ್ಟು ಕೆಲಸ ಮಾಡುತ್ತಾರೆ. ಅದಕ್ಕಿಂತ ಕಡಿಮೆ ಕೆಲಸ ಮಾಡಿ ಗೊತ್ತೇ ಇಲ್ಲ ಅವರಿಗೆ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ 14ನೇ ಟಾಟಾ ಲಿಟರೇಚರ್ ಫೆಸ್ಟಿವಲ್ (Tata Lit Fest 2023)​ ಹಿನ್ನೆಲೆಯಲ್ಲಿ ಭಾನುವಾರ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸುಧಾಮೂರ್ತಿ, ತಮ್ಮ ಪತಿಯ ಕಾಯಕ ಪ್ರವೃತ್ತಿಯ ಬಗ್ಗೆ ಇನ್ನಷ್ಟು ಬೆಳಕು ಚೆಲ್ಲಿದ್ದಾರೆ.

‘ಅವರು ಒಂದು ವಾರದಲ್ಲಿ 80-90 ಗಂಟೆ ಕೆಲಸ ಮಾಡುತ್ತಾರೆ. ಅದಕ್ಕಿಂತ ಕಡಿಮೆ ಅವಧಿ ಕೆಲಸ ಮಾಡುವುದೆಂದರೆ ಗೊತ್ತಿಲ್ಲ. ನಿಜವಾದ ಪರಿಶ್ರಮದಲ್ಲಿ (hard work) ಅವರಿಗೆ ನಂಬಿಕೆ ಇದೆ. ಅದರಂತೆಯೇ ಅವರು ಬದುಕಿದವರು. ತಮಗೆ ಅನಿಸಿದ್ದನ್ನು ಅವರು ಹೇಳಿದ್ದಾರೆ’ ಎಂದು ಸುಧಾಮೂರ್ತಿ ತಮ್ಮೊಂದಿಗಿನ ಎಕ್ಸ್​ಕ್ಲೂಸಿವ್ ಸಂದರ್ಶನದಲ್ಲಿ ಹೇಳಿದರೆಂದು ನ್ಯೂಸ್18 ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಪ್ರತಿದಿನ 16 ಗಂಟೆ ಕೆಲಸ ಮಾಡುತ್ತಾರೆ, ನಾರಾಯಣ ಮೂರ್ತಿ ಹೇಳಿಕೆ ಬೆಂಬಲಸಿದ ಸಜ್ಜನ್ ಜಿಂದಾಲ್

‘ಜನರು ಹೇಳುವ ರೀತಿ ಭಿನ್ನವಾಗಿರುತ್ತದೆ. ಅವರು ಏನು ಹೇಳಿದ್ದಾರೋ ಅದೇ ರೀತಿ ಬದುಕಿ ತೋರಿಸಿದ್ದಾರೆ. ತಮ್ಮ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ,’ ಎಂದು ಸುಧಾ ಮೂರ್ತಿ ಸ್ಪಷ್ಟಪಡಿಸಿದ್ದಾರೆ.

ಪತಿಯಿಂದ ಸುಧಾಮೂರ್ತಿ ಕಲಿತ ವಿಚಾರಗಳೇನು?

ಇನ್ಫೋಸಿಸ್ ಸಂಸ್ಥೆ ಸ್ಥಾಪನೆಯಲ್ಲಿ ಸುಧಾಮೂರ್ತಿ ಪಾತ್ರವೂ ಮಹತ್ವದ್ದಾಗಿದೆ. ಕಂಪನಿ ಸ್ಥಾಪಿಸುವಾಗ ನಾರಾಯಣಮೂರ್ತಿ ಅವರಿಗೆ ಹಣದ ನೆರವು ನೀಡಿದ್ದು ಸುಧಾ ಅವರೆಯೇ. ಅವರಿಬ್ಬರ ದಾಂಪತ್ಯಕ್ಕೆ ಬಹುತೇಕ 45 ವರ್ಷಗಳಾಗಿವೆ. ಅಪ್ಪಟ ಕಾಯಕಪ್ರೇಮಿಯಾದ ಎನ್ ಆರ್ ನಾರಾಯಣಮೂರ್ತಿ ಅವರಿಂದ ತಾನು ಕಲಿತ ಸಂಗತಿಗಳೇನು ಎಂಬುದನ್ನು ಪತ್ನಿಯಾದ ಸುಧಾಮೂರ್ತಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಿ ಎಂಬ ನಾರಾಯಣ ಮೂರ್ತಿ ಹೇಳಿಕೆಗೆ ಹೃದ್ರೋಗ ತಜ್ಞನ ವಿರೋಧ

ಪತಿಯಿಂದ ಸುಧಾಮೂರ್ತಿ ಕಲಿತ 3 ಗುಣಗಳು

  1. ಗುರಿ ಹೊಂದಿದ್ದು ಅದನ್ನು ಈಡೇರಿಸಲು ಶ್ರಮ ಹಾಕಬೇಕು. ಗುರಿಯಿಂದ ಸ್ವಲ್ಪ ಆಚೆ ಈಚೆ ಗಮನ ವಿಮುಖಗೊಳ್ಳಬಾರದು
  2. ನೀವು ಕೆಲಸ ಮಾಡುವಾಗ ಪರಿಪೂರ್ಣತೆ ಇರಲಿ. ಯಾವುದನ್ನೂ ಉಳಿಸಬೇಡಿ.
  3. ನಿಮಗೆ ಕೆಲಸದಲ್ಲಿ ಉತ್ಕಟತೆ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ. ಸುಮ್ಮನೆ ಕಷ್ಟಪಟ್ಟರೆ ಯಶಸ್ಸು ಸಿಗುವುದಿಲ್ಲ. ಬುದ್ಧಿವಂತಿಕೆ ಮತ್ತು ಪರಿಶ್ರಮ ಎರಡೂ ಇರಬೇಕು. ಆಗ ಯಶಸ್ಸು ಸಾಧ್ಯ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Mon, 30 October 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ