AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ

Nitin Gadkari defends ethanol policy: ಇಥನಾಲ್ ಮಿಶ್ರಿತ ಇ20 ಪೆಟ್ರೋಲ್ ಬಳಕೆಯಿಂದ ವಾಹನಗಳ ಮೈಲೇಜ್ ಕಡಿಮೆ ಆಗುತ್ತಿದೆ ಎನ್ನುವ ಆರೋಪವನ್ನು ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಗಡ್ಕರಿ ಮಕ್ಕಳಿಗೆ ಅನುಕೂಲವಾಗಲೆಂದು ಇಥನಾಲ್ ಬಳಕೆ ಮಾಡಲಾಗುತ್ತಿದೆ ಎನ್ನುವ ಆರೋಪವನ್ನೂ ತಳ್ಳಿಹಾಕಿದ್ದಾರೆ. ಇಥನಾಲ್ ಬಳಕೆಯಿಂದಾಗಿ ಸಕ್ಕರೆ ಉದ್ಯಮ ಜೀವ ಉಳಿಸಿಕೊಂಡಿದೆ ಎಂದಿದ್ದಾರೆ.

ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 14, 2025 | 5:08 PM

Share

ಪುಣೆ, ಸೆಪ್ಟೆಂಬರ್ 14: ಇಥನಾಲ್ ಬಳಕೆ ಆರಂಭವಾದಾಗಿನಿಂದ ದೇಶದ ಸಕ್ಕರೆ ಉದ್ಯಮಕ್ಕೆ ಜೀವ ಬಂದಂತಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿಯ ನಾಮ್ ಫೌಂಡೇಶನ್​ನ ಕಾರ್ಯಕ್ರಮದವೊಂದರಲ್ಲಿ ಮಾತನಾಡುತ್ತಿದ್ದ ನಿತಿನ್ ಗಡ್ಕರಿ, ಭಾರತದಲ್ಲಿ ಸಕ್ಕರೆ ಅಧಿಕ ಇದೆ. ಇಥನಾಲ್​ನಿಂದಾಗಿ ಸಕ್ಕರೆ ಕಾರ್ಖಾನೆಗಳು ಜೀವ ಉಳಿಸಿಕೊಳ್ಳಲು ಯಶಸ್ವಿಯಾಗಿವೆ ಎಂದು ಹೇಳಿದ್ದಾರೆ.

ಇಥನಾಲ್ ಮಿಶ್ರಿತ ಪೆಟ್ರೋಲ್​ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ. ನಿತಿನ್ ಗಡ್ಕರಿಯ ಇಬ್ಬರು ಮಕ್ಕಳಿಗೆ ಲಾಭ ಮಾಡಲು ಇಥನಾಲ್ ಬಳಸಲಾಗುತ್ತಿದೆ ಎನ್ನುವುದು ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ನಿತಿನ್ ಗಡ್ಕರಿ ಈ ಮೇಲಿನ ಮಾತುಗಳನ್ನಾಡಿದ್ದಾರೆ.

ನಾವು ಸಾಕಷ್ಟು ಪೆಟ್ರೋಲಿಯಂ ಇಂಧನ ಆಮದು ಮಾಡಿಕೊಳ್ಳುತ್ತಿದ್ದೇವೆ. ಇಥನಾಲ್ ಬಳಕೆ ಶುರುವಾದಾಗಿನಿಂದ ಪೆಟ್ರೋಲಿಯಂ ಆಮದು ಕಡಿಮೆಗೊಂಡಿದೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಇಥನಾಲ್​ನಿಂದ ಲಾಭವಾಗಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಹೇಗೆ ಸಾಗಬೇಕು? ಮಲೇಷ್ಯಾವಾ, ಕೊರಿಯಾವಾ? ಭಾರತದ 16 ವರ್ಷದ ಜೀನಿಯಸ್ ಬಾಲಕ ಹೇಳೋದೇನು ಗೊತ್ತಾ?

ಶೇ. 20ರಷ್ಟು ಇಥನಾಲ್ ಮಿಶ್ರವಾಗಿರುವ ಪೆಟ್ರೋಲ್ (ಇ20) ಬಳಕೆಯನ್ನು ಸರ್ಕಾರ ಉತ್ತೇಜಿಸುತ್ತಿದೆ. ಈ ಇ20 ಪೆಟ್ರೋಲ್​ನಿಂದ ವಾಹನಗಳ ಎಂಜಿನ್​ಗೆ ಹಾನಿಯಾಗುತ್ತಿದೆ. ಮೈಲೆಜ್ ಕೂಡ ಕಡಿಮೆ ಆಗುತ್ತಿದೆ ಎನ್ನುವ ಆರೋಪವನ್ನು ಅನೇಕರು ಮಾಡುತ್ತಿದ್ದಾರೆ. ಹಾಗೆಯೇ, ನಿತಿನ್ ಗಡ್ಕರಿ ಅವರ ಇಬ್ಬರು ಮಕ್ಕಳು ಇಥನಾಲ್ ತಯಾರಿಕೆಯ ಬ್ಯುಸಿನೆಸ್​ನಲ್ಲಿದ್ದಾರೆ. ಹೀಗಾಗಿ, ಇ20 ಪೆಟ್ರೋಲ್ ಬಳಕೆಗೆ ಉತ್ತೇಜಿಸಲಾಗುತ್ತಿದೆ ಎನ್ನುವ ಗಂಭೀರ ಆರೋಪವೂ ಕೇಳಿಬರುತ್ತಿದೆ.

ಆದರೆ, ಇ20 ಪೆಟ್ರೋಲ್ ಬಳಕೆಯನ್ನು ನಿಲ್ಲಿಸಬೆಕು ಎಂದು ದಾಖಲಾಗಿದ್ದ ಪಿಐಎಲ್ ಅನ್ನು ಸುಪ್ರೀಂಕೋರ್ಟ್ ಕೂಡ ತಿರಸ್ಕರಿಸಿದೆ. ಆದಾಗ್ಯೂ ಕಾಂಗ್ರೆಸ್ ಹಾಗು ಇತರ ವಿಪಕ್ಷಗಳು ಇ20 ಪೆಟ್ರೋಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇವೆ.

ಇದನ್ನೂ ಓದಿ: ಮುಂದಿನ ಅನೇಕ ದಶಕಗಳು ಭಾರತದ ಪಾರಮ್ಯಕ್ಕೆ ಅವಕಾಶ: ಮಾರುತಿ ಸುಜುಕಿ ಸಿಇಒ

ಕೃಷಿ ಕ್ಷೇತ್ರಕ್ಕೆ ಹೊಸ ತಂತ್ರಜ್ಞಾನ ಬೇಕು: ಗಡ್ಕರಿ

ಮಹಾರಾಷ್ಟ್ರದ ವಿದರ್ಭ ಮತ್ತು ಮರಾಠವಾಡ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ ವಿಚಾರವನ್ನು ಉಲ್ಲೇಖಿಸಿದ ನಿತಿನ್ ಗಡ್ಕರಿ, ಈ ಪ್ರದೇಶಗಳಲ್ಲಿ ಕೃಷಿಗೆ ನೀರಿನ ಕೊರತೆ ಒಂದು ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ, ಕೃಷಿಗಾರಿಕೆಗೆ ಹೊಸ ತಂತ್ರಜ್ಞಾನಗಳ ಅಗತ್ಯ ಇದ್ದು ಈ ನಿಟ್ಟಿನಲ್ಲಿ ಪ್ರಯೋಗಗಳು ನಡೆಯುತ್ತಿವೆ ಎಂದು ಸಚಿವರು ವಿವರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ