AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಈ ಸೀಸನ್​ನಲ್ಲಿ 8,126 ಕೋಟಿ ರೂ ಪಾವತಿ

Sugar industry news: ಈ ವರ್ಷದ ಸಕ್ಕರೆ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ 8,126 ಕೋಟಿ ರೂ ಪಾತಿಯಾಗಿದೆ. 3,015 ಕೋಟಿ ರೂ ಬಾಕಿ ಉಳಿದಿದೆ. ಈ ಪೈಕಿ ಕರ್ನಾಟಕದ ರೈತರಿಗೆ 1,405 ಕೋಟಿ ರೂ ಬಾಕಿ ಇದೆ ಎನ್ನುವ ಮಾಹಿತಿ ಬಂದಿದೆ. ಕಳೆದ ವರ್ಷದಲ್ಲಿ ಕಬ್ಬುಬೆಳೆಗಾರರಿಗೆ ಶೇ. 99ರಷ್ಟು ಹಣ ಪಾವತಿಯಾಗಿತ್ತು.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಈ ಸೀಸನ್​ನಲ್ಲಿ 8,126 ಕೋಟಿ ರೂ ಪಾವತಿ
ಕಬ್ಬುಬೆಳೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 19, 2024 | 5:06 PM

Share

ನವದೆಹಲಿ, ಡಿಸೆಂಬರ್ 19: ಪ್ರಸಕ್ತ ವರ್ಷದ ಸಕ್ಕರೆ ಋತುವಿನ ಮೊದಲ 70 ದಿನದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರರಿಗೆ ಪಾವತಿಸಿದ ಹಣದ ಮೊತ್ತ 8,126 ಕೋಟಿ ರೂ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ರೈತರಿಗೆ ಪಾವತಿಸಬೇಕಾಗಿರುವ ಬಾಕಿ ಹಣ 3,015 ರೂ ಆಗಿದೆ. ಇದರಲ್ಲಿ ಕರ್ನಾಟಕದ ರೈತರಿಗೇ 1,405 ಕೋಟಿ ರೂ ಬರಬೇಕಿದೆ. ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳದ್ದು ನಂತರ ಸ್ಥಾನ.

ಭಾರತದಲ್ಲಿ ಸಕ್ಕರೆ ಋತು ಅಕ್ಟೋಬರ್​ನಿಂದ ಸೆಪ್ಟೆಂಬರ್​ವರೆಗೆ ಇದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ನೀಡಬೇಕಾದ ಹಣ 11,141 ಕೋಟಿ ರೂನಷ್ಟು ಇತ್ತು. ಇದರಲ್ಲಿ 3,015 ಕೋಟಿ ರೂ ಬಾಕಿ ಉಳಿದಿದೆ. ಕಳೆದ ವರ್ಷದಲ್ಲಿ ಬಾಕಿ ಇದ್ದ 1,11,674 ಕೋಟಿ ರೂನಲ್ಲಿ 1,275 ಕೋಟಿ ರೂ ಮಾತ್ರವೇ ಬಾಕಿ ಉಳಿದಿತ್ತು (ಡಿ. 13ರವರೆಗೆ). ಶೇ. 99ರಷ್ಟು ಬಾಕಿ ಹಣವನ್ನು ತೀರಿಸಲಾಗಿದೆ ಎನ್ನುವ ಮಾಹಿತಿ ಇದೆ.

ಹೆಚ್ಚು ಸಕ್ಕರೆ ರಫ್ತಿಗೆ ಅವಕಾಶ….

ಭಾರತದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಿದ್ದು, ಸರಬರಾಜು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಕ್ಕರೆ ಬೆಲೆ ಕಡಿಮೆಗೊಳ್ಳುತ್ತಿದೆ. ಇದರಿಂದಾಗಿ ಸಕ್ಕರೆ ಕಂಪನಿಗಳಿಗೆ ರಫ್ತು ಮಾಡುವ ಅವಕಾಶ ನೀಡಬೇಕು ಎಂಬುದು ಆ ಉದ್ಯಮದವರ ಒತ್ತಾಯವಾಗಿದೆ. ಭಾರತೀಯ ಸಕ್ಕರೆ ಕಾರ್ಖಾನೆ ಸಂಸ್ಥೆಯ ಮಹಾನಿರ್ದೇಶಕ ದೀಪಕ್ ಬಲ್ಲಾನಿ ಅವರ ಪ್ರಕಾರ ಭಾರತದಿಂದ 20 ಲಕ್ಷಕ್ಕಿಂತ ಹೆಚ್ಚು ಮೆಟ್ರಿಕ್ ಟನ್​ಗಳಷ್ಟು ಸಕ್ಕರೆ ರಫ್ತು ಮಾಡಲು ಸಾಧ್ಯವಂತೆ.

ಇದನ್ನೂ ಓದಿ: ಭಾರತ್ ಮಾಲಾ ಯೋಜನೆಯಡಿ ಅ. 31ರವರೆಗೆ 18,714 ಕಿಮೀ ಹೆದ್ದಾರಿಗಳ ನಿರ್ಮಾಣ: ಸರ್ಕಾರದಿಂದ ಮಾಹಿತಿ

ಬ್ರೆಜಿಲ್ ನಂತರ ಭಾರತದಲ್ಲೇ ಅತಿಹೆಚ್ಚು ಸಕ್ಕರೆ ಉತ್ಪಾದನೆ ಆಗುವುದು. 2022-23ರ ಸೀಸನ್​ನಲ್ಲಿ ಸಕ್ಕರೆ ರಫ್ತನ್ನು ನಿಲ್ಲಿಸಲಾಗಿತ್ತು. ಬರ ಪರಿಸ್ಥಿತಿಯಿಂದಾಗಿ ಕಬ್ಬು ಇಳುವರಿ ಕಡಿಮೆಗೊಂಡು ಸಕ್ಕರೆ ಅಭಾವ ಬಂದಿದ್ದರಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು. ಏಳು ವರ್ಷದಲ್ಲಿ ಮೊದಲ ಬಾರಿಗೆ ರಫ್ತನ್ನು ನಿಲ್ಲಿಸಲಾಗಿತ್ತು. 2023-24ರ ಸೀಸನ್​ನಲ್ಲೂ ಸರ್ಕಾರ ಈ ರಫ್ತು ನಿಷೇಧ ಕ್ರಮವನ್ನು ಮುಂದುವರಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ