AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಈ ಸೀಸನ್​ನಲ್ಲಿ 8,126 ಕೋಟಿ ರೂ ಪಾವತಿ

Sugar industry news: ಈ ವರ್ಷದ ಸಕ್ಕರೆ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ 8,126 ಕೋಟಿ ರೂ ಪಾತಿಯಾಗಿದೆ. 3,015 ಕೋಟಿ ರೂ ಬಾಕಿ ಉಳಿದಿದೆ. ಈ ಪೈಕಿ ಕರ್ನಾಟಕದ ರೈತರಿಗೆ 1,405 ಕೋಟಿ ರೂ ಬಾಕಿ ಇದೆ ಎನ್ನುವ ಮಾಹಿತಿ ಬಂದಿದೆ. ಕಳೆದ ವರ್ಷದಲ್ಲಿ ಕಬ್ಬುಬೆಳೆಗಾರರಿಗೆ ಶೇ. 99ರಷ್ಟು ಹಣ ಪಾವತಿಯಾಗಿತ್ತು.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಈ ಸೀಸನ್​ನಲ್ಲಿ 8,126 ಕೋಟಿ ರೂ ಪಾವತಿ
ಕಬ್ಬುಬೆಳೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 19, 2024 | 5:06 PM

Share

ನವದೆಹಲಿ, ಡಿಸೆಂಬರ್ 19: ಪ್ರಸಕ್ತ ವರ್ಷದ ಸಕ್ಕರೆ ಋತುವಿನ ಮೊದಲ 70 ದಿನದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರರಿಗೆ ಪಾವತಿಸಿದ ಹಣದ ಮೊತ್ತ 8,126 ಕೋಟಿ ರೂ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ರೈತರಿಗೆ ಪಾವತಿಸಬೇಕಾಗಿರುವ ಬಾಕಿ ಹಣ 3,015 ರೂ ಆಗಿದೆ. ಇದರಲ್ಲಿ ಕರ್ನಾಟಕದ ರೈತರಿಗೇ 1,405 ಕೋಟಿ ರೂ ಬರಬೇಕಿದೆ. ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳದ್ದು ನಂತರ ಸ್ಥಾನ.

ಭಾರತದಲ್ಲಿ ಸಕ್ಕರೆ ಋತು ಅಕ್ಟೋಬರ್​ನಿಂದ ಸೆಪ್ಟೆಂಬರ್​ವರೆಗೆ ಇದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ನೀಡಬೇಕಾದ ಹಣ 11,141 ಕೋಟಿ ರೂನಷ್ಟು ಇತ್ತು. ಇದರಲ್ಲಿ 3,015 ಕೋಟಿ ರೂ ಬಾಕಿ ಉಳಿದಿದೆ. ಕಳೆದ ವರ್ಷದಲ್ಲಿ ಬಾಕಿ ಇದ್ದ 1,11,674 ಕೋಟಿ ರೂನಲ್ಲಿ 1,275 ಕೋಟಿ ರೂ ಮಾತ್ರವೇ ಬಾಕಿ ಉಳಿದಿತ್ತು (ಡಿ. 13ರವರೆಗೆ). ಶೇ. 99ರಷ್ಟು ಬಾಕಿ ಹಣವನ್ನು ತೀರಿಸಲಾಗಿದೆ ಎನ್ನುವ ಮಾಹಿತಿ ಇದೆ.

ಹೆಚ್ಚು ಸಕ್ಕರೆ ರಫ್ತಿಗೆ ಅವಕಾಶ….

ಭಾರತದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಿದ್ದು, ಸರಬರಾಜು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಕ್ಕರೆ ಬೆಲೆ ಕಡಿಮೆಗೊಳ್ಳುತ್ತಿದೆ. ಇದರಿಂದಾಗಿ ಸಕ್ಕರೆ ಕಂಪನಿಗಳಿಗೆ ರಫ್ತು ಮಾಡುವ ಅವಕಾಶ ನೀಡಬೇಕು ಎಂಬುದು ಆ ಉದ್ಯಮದವರ ಒತ್ತಾಯವಾಗಿದೆ. ಭಾರತೀಯ ಸಕ್ಕರೆ ಕಾರ್ಖಾನೆ ಸಂಸ್ಥೆಯ ಮಹಾನಿರ್ದೇಶಕ ದೀಪಕ್ ಬಲ್ಲಾನಿ ಅವರ ಪ್ರಕಾರ ಭಾರತದಿಂದ 20 ಲಕ್ಷಕ್ಕಿಂತ ಹೆಚ್ಚು ಮೆಟ್ರಿಕ್ ಟನ್​ಗಳಷ್ಟು ಸಕ್ಕರೆ ರಫ್ತು ಮಾಡಲು ಸಾಧ್ಯವಂತೆ.

ಇದನ್ನೂ ಓದಿ: ಭಾರತ್ ಮಾಲಾ ಯೋಜನೆಯಡಿ ಅ. 31ರವರೆಗೆ 18,714 ಕಿಮೀ ಹೆದ್ದಾರಿಗಳ ನಿರ್ಮಾಣ: ಸರ್ಕಾರದಿಂದ ಮಾಹಿತಿ

ಬ್ರೆಜಿಲ್ ನಂತರ ಭಾರತದಲ್ಲೇ ಅತಿಹೆಚ್ಚು ಸಕ್ಕರೆ ಉತ್ಪಾದನೆ ಆಗುವುದು. 2022-23ರ ಸೀಸನ್​ನಲ್ಲಿ ಸಕ್ಕರೆ ರಫ್ತನ್ನು ನಿಲ್ಲಿಸಲಾಗಿತ್ತು. ಬರ ಪರಿಸ್ಥಿತಿಯಿಂದಾಗಿ ಕಬ್ಬು ಇಳುವರಿ ಕಡಿಮೆಗೊಂಡು ಸಕ್ಕರೆ ಅಭಾವ ಬಂದಿದ್ದರಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು. ಏಳು ವರ್ಷದಲ್ಲಿ ಮೊದಲ ಬಾರಿಗೆ ರಫ್ತನ್ನು ನಿಲ್ಲಿಸಲಾಗಿತ್ತು. 2023-24ರ ಸೀಸನ್​ನಲ್ಲೂ ಸರ್ಕಾರ ಈ ರಫ್ತು ನಿಷೇಧ ಕ್ರಮವನ್ನು ಮುಂದುವರಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!