AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಕ್ಕರೆ ರಫ್ತಿಗೆ ಭಾರತ ಸರ್ಕಾರ ನಿರ್ಬಂಧ: ಕಳೆದ 6 ವರ್ಷಗಳಲ್ಲಿ ಇದೇ ಮೊದಲು

ಈ ಬಾರಿಯ ಸಕ್ಕರೆ ಹಂಗಾಮಿನಲ್ಲಿ ರಫ್ತು ಪ್ರಮಾಣವನ್ನು 1 ಕೋಟಿ ಟನ್​ಗೆ ಮಿತಗೊಳಿಸಲಾಗಿದೆ.

ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಕ್ಕರೆ ರಫ್ತಿಗೆ ಭಾರತ ಸರ್ಕಾರ ನಿರ್ಬಂಧ: ಕಳೆದ 6 ವರ್ಷಗಳಲ್ಲಿ ಇದೇ ಮೊದಲು
ದಿನಸಿ ಅಂಗಡಿಯೊಂದರಲ್ಲಿ ಸಕ್ಕರೆ ಮಾರಾಟ (ಸಂಗ್ರಹ ಚಿತ್ರ)
TV9 Web
| Edited By: |

Updated on:May 25, 2022 | 11:19 AM

Share

ಮುಂಬೈ: ಕಳೆದ ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರವು ಸಕ್ಕರೆ ರಫ್ತಿಗೆ (Sugar Export) ನಿರ್ಬಂಧ ವಿಧಿಸಿದೆ. ಈ ಬಾರಿಯ ಸಕ್ಕರೆ ಹಂಗಾಮಿನಲ್ಲಿ ರಫ್ತು ಪ್ರಮಾಣವನ್ನು 1 ಕೋಟಿ ಟನ್​ಗೆ ಮಿತಗೊಳಿಸಲಾಗಿದೆ. ಹಲವು ಸಕ್ಕರೆ ಕಾರ್ಖಾನೆಗಳು (Sugar Factories) ತಮ್ಮ ಬಳಿಯಿದ್ದ ದಾಸ್ತಾನನ್ನು ವಿಶ್ವ ಮಾರುಕಟ್ಟೆಯಲ್ಲಿ ಗರಿಷ್ಠ ಪ್ರಮಾಣಕ್ಕೆ ಮಾರಾಟ ಮಾಡಲು ಮುಂದಾದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ಹಿಡಿತದಲ್ಲಿ ಇರಿಸಲು ಕೇಂದ್ರ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ.

ಜೂನ್ 1ರಿಂದ ಅಕ್ಟೋಬರ್ 31ರ ನಡುವಣ ಅವಧಿಯಲ್ಲಿ ವಿದೇಶಗಳಿಗೆ ಸಕ್ಕರೆ ರಫ್ತು ಮಾಡುವ ಮೊದಲು ತನ್ನ ಅನುಮತಿ ಪಡೆಯುವುದು ಕಡ್ಡಾಯ ಎಂದು ಭಾರತ ಸರ್ಕಾರವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿರುವ ಭಾರತವು ಎರಡನೇ ಅತಿ ಹೆಚ್ಚು ಪ್ರಮಾಣದ ಸಕ್ಕರೆ ರಫ್ತು ಮಾಡುವ ದೇಶವೂ ಹೌದು. ಬ್ರೆಜಿಲ್ ವಿಶ್ವದಲ್ಲಿ ಅತಿಹೆಚ್ಚು ಸಕ್ಕರೆ ರಫ್ತು ಮಾಡುವ ದೇಶ ಎನಿಸಿದೆ.

ಸಕ್ಕರೆ ರಫ್ತಿಗೆ ಭಾರತ ಸರ್ಕಾರವು ಕಡಿವಾಣ ಹಾಕಬಹುದು ಎಂದು ಕಳೆದ ಮಾರ್ಚ್ ತಿಂಗಳಲ್ಲಿ ರಾಯಿಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆಏರಿಕೆಗೆ ಕಡಿವಾಣ ಹಾಕುವುದು ಮತ್ತು ನಿರಂತರ ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳುವ ಉದ್ದೇಶದಿಂದ ಭಾರತ ಸರ್ಕಾರವು ಇಂಥ ಕ್ರಮ ತೆಗೆದುಕೊಳ್ಳಬಹುದು ಎಂದು ವಿಶ್ಲೇಷಿಸಲಾಗಿತ್ತು.

ಸಕ್ಕರೆ ರಫ್ತು ನಿಷೇಧದ ಆದೇಶವನ್ನು ಭಾರತ ಸರ್ಕಾರವು ಪ್ರಕಟಿಸಿದ ನಂತರ ಲಂಡನ್​ನಲ್ಲಿ ಸಕ್ಕರೆ ವಹಿವಾಟಿನ ಮಾನದಂಡವಾಗಿ ಬಳಸುವ (ಬೆಂಚ್​ಮಾರ್ಕ್​ ವೈಟ್ ಶುಗರ್) ಬಿಳಿ ಸಕ್ಕರೆ ಬೆಲೆಯು ಶೇ 1ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಪ್ರತಿವರ್ಷವೂ ಹಬ್ಬಸಾಲಿನಲ್ಲಿ (ಅಕ್ಟೋಬರ್) ಸಕ್ಕರೆಗೆ ಬೇಡಿಕೆ ಹೆಚ್ಚಾಗುವುದು ವಾಡಿಕೆ. ಈ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಕ್ಕರೆ ಇರಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಇಂಥ ತೀರ್ಮಾನ ತೆಗೆದುಕೊಂಡಿದೆ ಎಂದು ಮುಂಬೈ ಮೂಲದ ಜಾಗತಿಕ ಸಕ್ಕರೆ ವಹಿವಾಟುದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

1 ಕೋಟಿ ಟನ್​ನಷ್ಟು ಸಕ್ಕರೆಯನ್ನು ವಿಶ್ವ ಮಾರುಕಟ್ಟೆಯಲ್ಲಿ ಮಾರಲು ಅವಕಾಶ ಮಾಡಿಕೊಟ್ಟಿರುವುದು ಸಹ ಉತ್ತಮ ನಿರ್ಧಾರವೇ ಆಗಿದೆ. ಇದರಿಂದ ವಿಶ್ವದ ವಿವಿಧ ದೇಶಗಳಲ್ಲಿ ಸಕ್ಕರೆ ಬೆಲೆ ತಹಬಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಆರಂಭದಲ್ಲಿ 80 ಲಕ್ಷ ಟನ್​ ಸಕ್ಕರೆ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ನಂತರದ ದಿನಗಳಲ್ಲಿ ದೇಶದಲ್ಲಿ ಈ ಬಾರಿ ಸಕ್ಕರೆ ಉತ್ಪಾದನೆ ಹೆಚ್ಚಾಗಬಹುದು ಎಂಬ ಪರಿಷ್ಕೃತ ಅಂದಾಜು ಸಿಕ್ಕ ಕಾರಣ, ರಫ್ತು ಮಿತಿಯನ್ನು 1 ಕೋಟಿ ಟನ್​ಗೆ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿತು.

ಸುದ್ದಿಯಲ್ಲಿ ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲಿ ಸಕ್ಕರೆ ಹಂಗಾಮಿನಲ್ಲಿ 3.55 ಕೋಟಿ ಟನ್ ಸಕ್ಕರೆ ಉತ್ಪಾದನೆಯಾಗಬಹುದು ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (The Indian Sugar Mills Association) ಅಂದಾಜಿಸಿದೆ. ಈ ಹಿಂದೆ 3.1 ಕೋಟಿ ಟನ್ ಸಕ್ಕರೆ ಉತ್ಪಾದನೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಭಾರತದ ಸಕ್ಕರೆ ಕಾರ್ಖಾನೆಗಳು ಈವರೆಗೆ 91 ಲಕ್ಷ ಟನ್ ಸಕ್ಕರೆ ರಫ್ತಿಗೆ ವಿವಿಧ ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಈ ಪೈಕಿ 82 ಲಕ್ಷ ಟನ್ ಸಕ್ಕರೆ ಈಗಾಗಲೇ ರವಾನೆಯಾಗಿದೆ. ಈ ಸರಕಿಗೆ ಸರ್ಕಾರದಿಂದ ಯಾವುದೇ ಸಬ್ಸಿಡಿ ಸಿಗುವುದಿಲ್ಲ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 11:04 am, Wed, 25 May 22

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ