AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sugar Production: ಸಕ್ಕರೆ ಬೆಲೆ ಏರಲಿದೆಯಾ? ಭಾರತದಲ್ಲಿ ಕಡಿಮೆ ಆಗಿದೆ ಸಕ್ಕರೆ ಉತ್ಪಾದನೆ

ಭಾರತದಲ್ಲಿ ಸಕ್ಕರೆ ಉತ್ಪಾದನೆ ಈ ಮಾರುಕಟ್ಟೆ ವರ್ಷದಲ್ಲಿ ಶೇ. 10ರಷ್ಟು ಇಳಿಕೆ ಆಗಬಹುದು ಎಂದು ಸಕ್ಕರೆ ಕಾರ್ಖಾನೆಗಳ ಸಂಘಟನೆ ಹೇಳಿದೆ. ಮಾರುಕಟ್ಟೆ ವರ್ಷ ಅರಂಭವಾಗುವ ಅಕ್ಟೋಬರ್ 1ರಿಂದ ಇದೇ ಫೆಬ್ರುವರಿ 15ರವರೆಗೆ ಸಕ್ಕರೆ ಉತ್ಪಾದನೆ 22.36 ಮಿಲಿಯನ್ ಟನ್​ನಷ್ಟಿದೆ. ಶೇ. 2.48ರಷ್ಟು ಉತ್ಪಾದನೆ ಕಡಿಮೆ ಆಗಿದೆ. ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ 4.6 ಮಿಲಿಯನ್ ಟನ್​ನಿಂದ 4.32 ಮಿಲಿಯನ್ ಟನ್​ಗೆ ಇಳಿಕೆ. ದೇಶದಲ್ಲಿ ಅತಿಹೆಚ್ಚು ಸಕ್ಕರೆ ಉತ್ಪಾದಿಸುವ ರಾಜ್ಯ ಕರ್ನಾಟಕ.

Sugar Production: ಸಕ್ಕರೆ ಬೆಲೆ ಏರಲಿದೆಯಾ? ಭಾರತದಲ್ಲಿ ಕಡಿಮೆ ಆಗಿದೆ ಸಕ್ಕರೆ ಉತ್ಪಾದನೆ
ಕಬ್ಬಿನ ಇಳುವರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 19, 2024 | 5:27 PM

Share

ನವದೆಹಲಿ, ಫೆಬ್ರುವರಿ 19: ಭಾರತದ ಸಕ್ಕರೆ ಉತ್ಪಾದನೆ (sugar production) ಕಳೆದ ವರ್ಷಕ್ಕಿಂತ ಕಡಿಮೆ ಆಗಿದೆ. ಭಾರತೀಯ ಸಕ್ಕರೆ ಕಾರ್ಖಾನೆ ಸಂಘಟನೆಯಾದ ಇಸ್ಮಾ ಪ್ರಕಾರ 2023-24ರ ಮಾರುಕಟ್ಟೆ ವರ್ಷದಲ್ಲಿ (Marketing year) ಭಾರತದಲ್ಲಿ ಸಕ್ಕರೆ ಉತ್ಪಾದನೆ 33.05 ಮಿಲಿಯನ್ ಟನ್​ನಷ್ಟು ಆಗಬಹುದು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 10ರಷ್ಟು ಕಡಿಮೆ ಸಕ್ಕರೆ ಉತ್ಪಾದನೆ ಈ ವರ್ಷದ್ದಿರಲಿದೆ. ಅಕ್ಟೋಬರ್ 31ರಿಂದ ಸೆಪ್ಟೆಂಬರ್ 30ರವರೆಗೆ ಮಾರುಕಟ್ಟೆ ವರ್ಷ ಎಂದು ಪರಿಗಣಿಸಲಾಗುತ್ತದೆ. ಈ ಬಾರಿಯ ಮಾರ್ಕೆಟಿಂಗ್ ವರ್ಷದಲ್ಲಿ ಫೆಬ್ರುವರಿ 15ರವರೆಗೂ ಸಕ್ಕರೆ ಉತ್ಪಾದನೆ 22.36 ಮಿಲಿಯನ್ ಟನ್​ನಷ್ಟಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 22.93 ಮಿಲಿಯನ್ ಟನ್ ಸಕ್ಕರೆ ಉತ್ಪಾದನೆ ಆಗಿತ್ತು. ಅಂದರೆ ಶೇ. 2.48ರಷ್ಟು ಉತ್ಪಾದನೆ ಕುಂಠಿತವಾಗಿದೆ. ಆದರೆ, ಇಡೀ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ಉತ್ಪಾದನೆ ಶೇ. 10ರಷ್ಟು ಕಡಿಮೆ ಆಗಬಹುದು ಎಂಬುದು ಇಸ್ಮಾ ಅಂದಾಜು.

ಉತ್ತರಪ್ರದೇಶ ಹೊರತುಪಡಿಸಿದರೆ ಸಕ್ಕರೆ ಉತ್ಪಾದಿಸುವ ಪ್ರಮುಖ ರಾಜ್ಯಗಳಲ್ಲಿ ಇಳುವರಿ ಬಹಳ ಕಡಿಮೆ ಆಗಿದೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ಸಕ್ಕರೆ ಉತ್ಪಾದನೆ ಸದ್ಯ ಕಡಿಮೆಗೊಂಡಿದೆ. ಆದರೆ, ಉತ್ತರಪ್ರದೇಶದಲ್ಲಿ ಇದು ಹೆಚ್ಚಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಆರ್ಥಿಕತೆಗಿಂತಲೂ ದೊಡ್ಡದು ಟಾಟಾ ಗ್ರೂಪ್ ಮಾರುಕಟ್ಟೆ ಬಂಡವಾಳ

ಮಹಾರಾಷ್ಟ್ರ ಅತಿಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ರಾಜ್ಯವಾಗಿದೆ. ಅದು ಬಿಟ್ಟರೆ ಉತ್ತರಪ್ರದೇಶದಲ್ಲಿ ಹೆಚ್ಚು ಸಕ್ಕರೆ ಉತ್ಪಾದನೆ ಆಗುತ್ತದೆ. ಕರ್ನಾಟಕದ್ದು ಮೂರನೇ ಸ್ಥಾನ. ದೇಶಾದ್ಯಂತ 505 ಸಕ್ಕರೆ ಕಾರ್ಖಾನೆಗಳು ಸದ್ಯ ಕಾರ್ಯ ನಿರ್ವಹಿಸುತ್ತಿವೆ.

ಪ್ರಮುಖ ರಾಜ್ಯಗಳಲ್ಲಿ ಅಕ್ಟೋಬರ್ 1ರಿಂದ ಫೆಬ್ರುವರಿ 15ರವರೆಗೆ ಸಕ್ಕರೆ ಉತ್ಪಾದನೆ

  1. ಮಹಾರಾಷ್ಟ್ರ: ಸಕ್ಕರೆ ಉತ್ಪಾದನೆ 8.59 ಮಿಲಿಯನ್ ಟನ್​ನಿಂದ 7.94 ಮಿಲಿಯನ್ ಟನ್​ಗೆ ಇಳಿಕೆ.
  2. ಉತ್ತರಪ್ರದೇಶ: 6.12 ಮಿಲಿಯನ್ ಟನ್​ನಿಂದ 6.77 ಮಿಲಿಯನ್ ಟನ್​ಗೆ ಏರಿಕೆ.
  3. ಕರ್ನಾಟಕ: 4.6 ಮಿಲಿಯನ್ ಟನ್​ನಿಂದ 4.32 ಮಿಲಿಯನ್ ಟನ್​ಗೆ ಇಳಿಕೆ.
  4. ಗುಜರಾತ್: 6.85 ಲಕ್ಷ ಟನ್ ಸಕ್ಕರೆ ಉತ್ಪಾದನೆ
  5. ತಮಿಳುನಾಡು: 4.50 ಲಕ್ಷ ಟನ್

ಇದನ್ನೂ ಓದಿ: ಮಾಜಿ ಐಸಿಐಸಿಐ ಸಿಇಒ ಚಂದಾ ಕೋಚರ್ ಬಂಧನ, ಇದು ಅಧಿಕಾರ ದುರುಪಯೋಗ: ಸಿಬಿಐಗೆ ಹೈಕೋರ್ಟ್ ಛೀಮಾರಿ

ಇಡೀ ವಿಶ್ವದಲ್ಲಿ 150ರಿಂದ 180 ಮಿಲಿಯನ್ ಟನ್​ನಷ್ಟು ಸಕ್ಕರೆ ಉತ್ಪಾದನೆ ಆಗುತ್ತದೆ. ಬ್ರೆಜಿಲ್​ನಲ್ಲಿ ಅತಿಹೆಚ್ಚು ಸಕ್ಕರೆ ತಯಾರಾಗುತ್ತದೆ. ಬ್ರೆಜಿಲ್ ಮತ್ತು ಭಾರತದಲ್ಲಿ ಈ ವಿಶ್ವದ ಅರ್ಧದಷ್ಟು ಸಕ್ಕರೆ ಉತ್ಪಾದನೆ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!