AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ
ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 26, 2022 | 11:56 AM

Share

ದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯಲ್ಲಿ ಸುಪ್ರೀಂಕೋರ್ಟ್​ ಒಂದಿಷ್ಟು ರಿಯಾಯ್ತಿ ನೀಡಿದೆ. ಕಬ್ಬಿಣ ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಿಗೇ ಷೇರುಪೇಟೆಯಲ್ಲಿ ಲೋಹ ವಲಯದ (Metal Sector) ಷೇರುಗಳ ಮೌಲ್ಯ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಹೂಡಿದಾರರ ಗಮನ ಸೆಳೆದಿವೆ. ಬೆಳಿಗ್ಗೆ 11.35ರ ಹೊತ್ತಿಗೆ ಟಾಟಾ ಸ್ಟೀಲ್ ₹ 108.70 ( ಶೇ 2.31 ಏರಿಕೆ), ಜೆಎಸ್​ಡಬ್ಲ್ಯು ಸ್ಟೀಲ್ ₹ 663.95ರ (ಶೇ 2.35 ಏರಿಕೆ) ದರದಲ್ಲಿ ವಹಿವಾಟು ನಡೆಸುತ್ತಿದ್ದವು.

ಬಳ್ಳಾರಿ ಜಿಲ್ಲೆಯಲ್ಲಿ 28 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯನ್ನು ಸುಪ್ರೀಂಕೋರ್ಟ್​ ಇದೀಗ 35 ದಶಲಕ್ಷ ಮೆಟ್ರಿಕ್ ಟನ್​ಗೆ ಹೆಚ್ಚಿಸಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಮೊದಲು 7 ದಶಲಕ್ಷ ಟನ್ ಅದಿರು ಉತ್ಪಾದನೆಗೆ ಅವಕಾಶವಿತ್ತು. ಇದೀಗ ಈ ಮಿತಿಯನ್ನು 15 ದಶಲಕ್ಷ ಟನ್​ಗೆ ಹೆಚ್ಚಿಸಲಾಗಿದೆ ಎಂದು ‘ಮನಿಕಂಟ್ರೋಲ್’ ಜಾಲತಾಣ ವರದಿ ಮಾಡಿದೆ.

‘ಅದಿರು ಉತ್ಪಾದನೆಯ ಜೊತೆಗೆ ಪರಿಸರ ಮತ್ತು ಆರ್ಥಿಕ ಅಭಿವೃದ್ಧಿಯು ಜೊತೆಜೊತೆಗೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂರೂ ಜಿಲ್ಲೆಗಳಲ್ಲಿ ಉತ್ಪಾದನೆಯಾಗುವ ಕಬ್ಬಿಣದ ಅದಿರು ರಫ್ತು ಮಾಡಲು ಇದ್ದ ನಿರ್ಬಂಧವನ್ನು ಕಳೆದ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್​ ತೆರವು ಮಾಡಿತ್ತು. ಇ-ಹರಾಜಿನ ಬದಲು ನೇರ ಮಾರಾಟದ ಮೂಲಕ ಅದಿರು ಮಾರಾಟಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು. ಪರಿಸರ ಸಂರಕ್ಷಣೆಗಾಗಿ ಅದಿರು ಉತ್ಪಾದನೆಗೆ ನಿರ್ಬಂಧ ಅಗತ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

Published On - 11:56 am, Fri, 26 August 22

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ