AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ
ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 26, 2022 | 11:56 AM

Share

ದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯಲ್ಲಿ ಸುಪ್ರೀಂಕೋರ್ಟ್​ ಒಂದಿಷ್ಟು ರಿಯಾಯ್ತಿ ನೀಡಿದೆ. ಕಬ್ಬಿಣ ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಿಗೇ ಷೇರುಪೇಟೆಯಲ್ಲಿ ಲೋಹ ವಲಯದ (Metal Sector) ಷೇರುಗಳ ಮೌಲ್ಯ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಹೂಡಿದಾರರ ಗಮನ ಸೆಳೆದಿವೆ. ಬೆಳಿಗ್ಗೆ 11.35ರ ಹೊತ್ತಿಗೆ ಟಾಟಾ ಸ್ಟೀಲ್ ₹ 108.70 ( ಶೇ 2.31 ಏರಿಕೆ), ಜೆಎಸ್​ಡಬ್ಲ್ಯು ಸ್ಟೀಲ್ ₹ 663.95ರ (ಶೇ 2.35 ಏರಿಕೆ) ದರದಲ್ಲಿ ವಹಿವಾಟು ನಡೆಸುತ್ತಿದ್ದವು.

ಬಳ್ಳಾರಿ ಜಿಲ್ಲೆಯಲ್ಲಿ 28 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯನ್ನು ಸುಪ್ರೀಂಕೋರ್ಟ್​ ಇದೀಗ 35 ದಶಲಕ್ಷ ಮೆಟ್ರಿಕ್ ಟನ್​ಗೆ ಹೆಚ್ಚಿಸಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಮೊದಲು 7 ದಶಲಕ್ಷ ಟನ್ ಅದಿರು ಉತ್ಪಾದನೆಗೆ ಅವಕಾಶವಿತ್ತು. ಇದೀಗ ಈ ಮಿತಿಯನ್ನು 15 ದಶಲಕ್ಷ ಟನ್​ಗೆ ಹೆಚ್ಚಿಸಲಾಗಿದೆ ಎಂದು ‘ಮನಿಕಂಟ್ರೋಲ್’ ಜಾಲತಾಣ ವರದಿ ಮಾಡಿದೆ.

‘ಅದಿರು ಉತ್ಪಾದನೆಯ ಜೊತೆಗೆ ಪರಿಸರ ಮತ್ತು ಆರ್ಥಿಕ ಅಭಿವೃದ್ಧಿಯು ಜೊತೆಜೊತೆಗೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂರೂ ಜಿಲ್ಲೆಗಳಲ್ಲಿ ಉತ್ಪಾದನೆಯಾಗುವ ಕಬ್ಬಿಣದ ಅದಿರು ರಫ್ತು ಮಾಡಲು ಇದ್ದ ನಿರ್ಬಂಧವನ್ನು ಕಳೆದ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್​ ತೆರವು ಮಾಡಿತ್ತು. ಇ-ಹರಾಜಿನ ಬದಲು ನೇರ ಮಾರಾಟದ ಮೂಲಕ ಅದಿರು ಮಾರಾಟಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು. ಪರಿಸರ ಸಂರಕ್ಷಣೆಗಾಗಿ ಅದಿರು ಉತ್ಪಾದನೆಗೆ ನಿರ್ಬಂಧ ಅಗತ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

Published On - 11:56 am, Fri, 26 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!