AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ
ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 26, 2022 | 11:56 AM

Share

ದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯಲ್ಲಿ ಸುಪ್ರೀಂಕೋರ್ಟ್​ ಒಂದಿಷ್ಟು ರಿಯಾಯ್ತಿ ನೀಡಿದೆ. ಕಬ್ಬಿಣ ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಿಗೇ ಷೇರುಪೇಟೆಯಲ್ಲಿ ಲೋಹ ವಲಯದ (Metal Sector) ಷೇರುಗಳ ಮೌಲ್ಯ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಹೂಡಿದಾರರ ಗಮನ ಸೆಳೆದಿವೆ. ಬೆಳಿಗ್ಗೆ 11.35ರ ಹೊತ್ತಿಗೆ ಟಾಟಾ ಸ್ಟೀಲ್ ₹ 108.70 ( ಶೇ 2.31 ಏರಿಕೆ), ಜೆಎಸ್​ಡಬ್ಲ್ಯು ಸ್ಟೀಲ್ ₹ 663.95ರ (ಶೇ 2.35 ಏರಿಕೆ) ದರದಲ್ಲಿ ವಹಿವಾಟು ನಡೆಸುತ್ತಿದ್ದವು.

ಬಳ್ಳಾರಿ ಜಿಲ್ಲೆಯಲ್ಲಿ 28 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯನ್ನು ಸುಪ್ರೀಂಕೋರ್ಟ್​ ಇದೀಗ 35 ದಶಲಕ್ಷ ಮೆಟ್ರಿಕ್ ಟನ್​ಗೆ ಹೆಚ್ಚಿಸಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಮೊದಲು 7 ದಶಲಕ್ಷ ಟನ್ ಅದಿರು ಉತ್ಪಾದನೆಗೆ ಅವಕಾಶವಿತ್ತು. ಇದೀಗ ಈ ಮಿತಿಯನ್ನು 15 ದಶಲಕ್ಷ ಟನ್​ಗೆ ಹೆಚ್ಚಿಸಲಾಗಿದೆ ಎಂದು ‘ಮನಿಕಂಟ್ರೋಲ್’ ಜಾಲತಾಣ ವರದಿ ಮಾಡಿದೆ.

‘ಅದಿರು ಉತ್ಪಾದನೆಯ ಜೊತೆಗೆ ಪರಿಸರ ಮತ್ತು ಆರ್ಥಿಕ ಅಭಿವೃದ್ಧಿಯು ಜೊತೆಜೊತೆಗೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂರೂ ಜಿಲ್ಲೆಗಳಲ್ಲಿ ಉತ್ಪಾದನೆಯಾಗುವ ಕಬ್ಬಿಣದ ಅದಿರು ರಫ್ತು ಮಾಡಲು ಇದ್ದ ನಿರ್ಬಂಧವನ್ನು ಕಳೆದ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್​ ತೆರವು ಮಾಡಿತ್ತು. ಇ-ಹರಾಜಿನ ಬದಲು ನೇರ ಮಾರಾಟದ ಮೂಲಕ ಅದಿರು ಮಾರಾಟಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು. ಪರಿಸರ ಸಂರಕ್ಷಣೆಗಾಗಿ ಅದಿರು ಉತ್ಪಾದನೆಗೆ ನಿರ್ಬಂಧ ಅಗತ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

Published On - 11:56 am, Fri, 26 August 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ