AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು.

Breaking News: ಬಳ್ಳಾರಿ, ತುಮಕೂರು, ಚಿತ್ರದುರ್ಗದಲ್ಲಿ ಕಬ್ಬಿಣ ಅದಿರು ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಸಮ್ಮತಿ: ಷೇರುಪೇಟೆಯಲ್ಲಿ ಸಂಚಲನ
ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 26, 2022 | 11:56 AM

Share

ದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯಲ್ಲಿ ಸುಪ್ರೀಂಕೋರ್ಟ್​ ಒಂದಿಷ್ಟು ರಿಯಾಯ್ತಿ ನೀಡಿದೆ. ಕಬ್ಬಿಣ ಉತ್ಪಾದನೆ ಹೆಚ್ಚಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಿಗೇ ಷೇರುಪೇಟೆಯಲ್ಲಿ ಲೋಹ ವಲಯದ (Metal Sector) ಷೇರುಗಳ ಮೌಲ್ಯ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಹೂಡಿದಾರರ ಗಮನ ಸೆಳೆದಿವೆ. ಬೆಳಿಗ್ಗೆ 11.35ರ ಹೊತ್ತಿಗೆ ಟಾಟಾ ಸ್ಟೀಲ್ ₹ 108.70 ( ಶೇ 2.31 ಏರಿಕೆ), ಜೆಎಸ್​ಡಬ್ಲ್ಯು ಸ್ಟೀಲ್ ₹ 663.95ರ (ಶೇ 2.35 ಏರಿಕೆ) ದರದಲ್ಲಿ ವಹಿವಾಟು ನಡೆಸುತ್ತಿದ್ದವು.

ಬಳ್ಳಾರಿ ಜಿಲ್ಲೆಯಲ್ಲಿ 28 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಗೆ ವಿಧಿಸಿದ್ದ ಮಿತಿಯನ್ನು ಸುಪ್ರೀಂಕೋರ್ಟ್​ ಇದೀಗ 35 ದಶಲಕ್ಷ ಮೆಟ್ರಿಕ್ ಟನ್​ಗೆ ಹೆಚ್ಚಿಸಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ಮೊದಲು 7 ದಶಲಕ್ಷ ಟನ್ ಅದಿರು ಉತ್ಪಾದನೆಗೆ ಅವಕಾಶವಿತ್ತು. ಇದೀಗ ಈ ಮಿತಿಯನ್ನು 15 ದಶಲಕ್ಷ ಟನ್​ಗೆ ಹೆಚ್ಚಿಸಲಾಗಿದೆ ಎಂದು ‘ಮನಿಕಂಟ್ರೋಲ್’ ಜಾಲತಾಣ ವರದಿ ಮಾಡಿದೆ.

‘ಅದಿರು ಉತ್ಪಾದನೆಯ ಜೊತೆಗೆ ಪರಿಸರ ಮತ್ತು ಆರ್ಥಿಕ ಅಭಿವೃದ್ಧಿಯು ಜೊತೆಜೊತೆಗೆ ನಡೆಯಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಮೂರೂ ಜಿಲ್ಲೆಗಳಲ್ಲಿ ಉತ್ಪಾದನೆಯಾಗುವ ಕಬ್ಬಿಣದ ಅದಿರು ರಫ್ತು ಮಾಡಲು ಇದ್ದ ನಿರ್ಬಂಧವನ್ನು ಕಳೆದ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್​ ತೆರವು ಮಾಡಿತ್ತು. ಇ-ಹರಾಜಿನ ಬದಲು ನೇರ ಮಾರಾಟದ ಮೂಲಕ ಅದಿರು ಮಾರಾಟಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟಕದ ಬಳ್ಳಾರಿ, ತುಮಕೂರು ಮತ್ತು ಚಿತ್ರದುರ್ಗಗಳಲ್ಲಿ ಅದಿರು ಉತ್ಪಾದನೆ ಮತ್ತು ರಫ್ತಿಗೆ ಸುಪ್ರೀಂಕೋರ್ಟ್ 2011ರಲ್ಲಿ ನಿರ್ಬಂಧ ವಿಧಿಸಿತ್ತು. ಪರಿಸರ ಸಂರಕ್ಷಣೆಗಾಗಿ ಅದಿರು ಉತ್ಪಾದನೆಗೆ ನಿರ್ಬಂಧ ಅಗತ್ಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

Published On - 11:56 am, Fri, 26 August 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ