AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Future Group: ಫ್ಯೂಚರ್​ ಸಮೂಹಕ್ಕೆ ನಿರಾಳ ಎನಿಸುವ ಆದೇಶದ ನೀಡಿದ ಸುಪ್ರೀಂ ಕೋರ್ಟ್

ಅಮೆಜಾನ್ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯೂಚರ್ ರೀಟೇಲ್ ಲಿಮಿಟೆಡ್​ಗೆ ಸಮಾಧಾನ ತರುವಂಥ ಆದೇಶವೊಂದನ್ನು ಸುಪ್ರೀಂಕೋರ್ಟ್​ ನೀಡಿದೆ.

Future Group: ಫ್ಯೂಚರ್​ ಸಮೂಹಕ್ಕೆ ನಿರಾಳ ಎನಿಸುವ ಆದೇಶದ ನೀಡಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Follow us
TV9 Web
| Updated By: Srinivas Mata

Updated on: Sep 09, 2021 | 4:21 PM

ಫ್ಯೂಚರ್ ಸಮೂಹಕ್ಕೆ ಪ್ರಮುಖ ಪರಿಹಾರ ದೊರೆತಿದೆ. ಸುಪ್ರೀಂ ಕೋರ್ಟ್ ಗುರುವಾರ ಜಾಗತಿಕ ಇ-ಕಾಮರ್ಸ್ ಕಂಪೆನಿ ಅಮೆಜಾನ್​ನಿಂದ ಹಾಕಲಾದ ಪ್ರಕರಣದ ವಿಚಾರಣೆಯನ್ನು ತಡೆಹಿಡಿಯಿತು. ಸಿಂಗಾಪೂರ ಮೂಲದ ಮಧ್ಯವರ್ತಿ ನ್ಯಾಯಾಧೀಕರಣ ತನ್ನ ಪರವಾಗಿ ನೀಡಿದ ಆದೇಶದ ತುರ್ತು ಜಾರಿಗಾಗಿ ಮನವಿ ಮಾಡಿತ್ತು ಆ ಆದೇಶದ ಅನ್ವಯ, ಫ್ಯೂಚರ್ ರಿಟೇಲ್ ಲಿಮಿಟೆಡ್ ಮತ್ತು ರಿಲಯನ್ಸ್ ಸಮೂಹದ ಮಧ್ಯೆ ವಿಲೀನ ಒಪ್ಪಂದವನ್ನು ಸ್ಥಗಿತಗೊಳಿಸಿತು. NCLAT, CCI ಮತ್ತು SEBI ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಫ್ಯೂಚರ್-ರಿಲಯನ್ಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳವರೆಗೆ ಅಂತಿಮ ಆದೇಶಗಳನ್ನು ನೀಡದಂತೆ ನ್ಯಾಯಾಲಯವು ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ. ದೆಹಲಿಯ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಫ್ಯೂಚರ್ ಕೂಪನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಫ್ಯೂಚರ್ ರಿಟೇಲ್ ಲಿಮಿಟೆಡ್ ಸಲ್ಲಿಸಿದ ವಿಶೇಷ ಅರ್ಜಿಗೆ ಸಂಬಂಧಿಸಿದಂತೆ ಈ ಮೇಲಿನ ಆದೇಶವನ್ನು ನೀಡಲಾಗಿದೆ. ತುರ್ತಾಗಿ ಪಾಲನೆ ಮಾಡುವಂತೆ ನೀಡಿದ ಆದೇಶದ ಉಲ್ಲಂಘನೆ ಮಾಡಿದ್ದಕ್ಕಾಗಿ ಫ್ಯೂಚರ್ ಸಮೂಹ ಕಂಪೆನಿಗಳು ಮತ್ತು ಅದರ ಪ್ರವರ್ತಕರಾದ ಕಿಶೋರ್ ಬಿಯಾನಿ ಹಾಗೂ ಇತರರ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹೈಕೋರ್ಟ್ ನಿರ್ದೇಶಿಸಿತ್ತು. ಬಿಯಾನಿ ಮತ್ತು ಫ್ಯೂಚರ್ ಗ್ರೂಪ್‌ನ ಇತರ ನಿರ್ದೇಶಕರ ಸಿವಿಲ್ ಅರೆಸ್ಟ್‌ಗಾಗಿ ಹೈಕೋರ್ಟ್ ಏಕಸದಸ್ಯ ಪೀಠ ಶೋಕಾಸ್ ನೋಟಿಸ್ ನೀಡಿತ್ತು.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠ ಕಳೆದ ತಿಂಗಳು ಹೇಳಿದ್ದ ಪ್ರಕಾರ, FRL-ರಿಲಯನ್ಸ್ ಒಪ್ಪಂದವನ್ನು ಸ್ಥಗಿತಗೊಳಿಸುವಂತೆ ಸಿಂಗಾಪುರ್ ಮಧ್ಯಸ್ಥಗಾರರಿಂದ ನೀಡಲಾದ ತುರ್ತು ಆದೇಶವನ್ನು ಭಾರತೀಯ ಕಾನೂನಿನಲ್ಲಿ ಜಾರಿಗೊಳಿಸಬಹುದೆಂದು ಮತ್ತು ಏಕ ಸದಸ್ಯ ಪೀಠದಿಂದ ನೀಡಿದ ಆದೇಶಕ್ಕೆ ಮಧ್ಯಸ್ಥಿಕೆ ಕಾಯ್ದೆಯ ಸೆಕ್ಷನ್ 37 (2)ರ ಅಡಿಯಲ್ಲಿ ಹೈಕೋರ್ಟಿನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗದು ಎಂದು ಹೇಳಿತ್ತು.

ಇದನ್ನೂ ಓದಿ: Future Retail Limited: ದೆಹಲಿ ಹೈಕೋರ್ಟ್ ಅಮೆಜಾನ್ ಆದೇಶದ ವಿರುದ್ಧ ಫ್ಯೂಚರ್ ರೀಟೇಲ್ ಸುಪ್ರೀಂ ಮೊರೆ

Reliance- Future Deal: ಸುಪ್ರೀಮ್​ ಕೋರ್ಟ್​ನಲ್ಲಿ ಅಮೆಜಾನ್​ ಪರ ಆದೇಶ; ರಿಲಯನ್ಸ್​- ಫ್ಯೂಚರ್​ ಡೀಲ್​ಗೆ ಕಲ್ಲು

(Supreme Court Stayed Order Against Future Retail In Related To Amazon Filed Case)

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ