AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐಗೆ ಬೈಜುಸ್ ಕೊಟ್ಟ 158 ಕೋಟಿ ರೂ ತಾತ್ಕಾಲಿಕ ಅಕೌಂಟ್​ಗೆ ವರ್ಗಾವಣೆ; ಇನ್ಸಾಲ್ವೆನ್ಸಿ ಕೇಸ್​ಗೆ ಮರುಜೀವ ಕೊಟ್ಟ ಸುಪ್ರೀಂ

BCCI vs Byjus vs Supreme Court vs Lenders: ಬೈಜುಸ್ ಮತ್ತು ಬಿಸಿಸಿಐ ಆಫ್​ಕೋರ್ಟ್ ಸೆಟಲ್ಮೆಂಟ್​ಗೆ ಅವಕಾಶ ಕೊಟ್ಟಿದ್ದ ಎನ್​ಸಿಎಲ್​ಎಟಿ ಆದೇಶಕ್ಕೆ ಸುಪ್ರೀಂ ನ್ಯಾಯಪೀಠ ತಡೆ ನೀಡಿದೆ. ಇದರೊಂದಿಗೆ ಬಿಸಿಸಿಐಗೆ ಬೈಜುಸ್ ಪಾವತಿಸಿದ್ದ 158 ಕೋಟಿ ರೂ ಹಣವನ್ನು ತಾತ್ಕಾಲಿಕ ಖಾತೆಯೊಂದಕ್ಕೆ ವರ್ಗಾವಣೆ ಮಾಡಲಾಗಿದೆ. ಬೈಜುಸ್ ವಿರುದ್ಧದ ಇನ್ಸಾಲ್ವೆನ್ಸಿ ಕ್ರಮ ರದ್ದುಗೊಳಿಸಿದ್ದ ನ್ಯಾಯಮಂಡಳಿ ಆದೇಶಕ್ಕೂ ಸರ್ವೋಚ್ಚ ನ್ಯಾಯಾಲಯ ತಡೆ ಕೊಟ್ಟಿದೆ.

ಬಿಸಿಸಿಐಗೆ ಬೈಜುಸ್ ಕೊಟ್ಟ 158 ಕೋಟಿ ರೂ ತಾತ್ಕಾಲಿಕ ಅಕೌಂಟ್​ಗೆ ವರ್ಗಾವಣೆ; ಇನ್ಸಾಲ್ವೆನ್ಸಿ ಕೇಸ್​ಗೆ ಮರುಜೀವ ಕೊಟ್ಟ ಸುಪ್ರೀಂ
ಸುಪ್ರೀಂಕೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 14, 2024 | 6:04 PM

Share

ನವದೆಹಲಿ, ಆಗಸ್ಟ್ 14: ಬೈಜುಸ್ ಸಂಸ್ಥೆಯ ವಿರುದ್ಧ ಇನ್ಸಾಲ್ವೆನ್ಸಿ ಕೇಸ್ ಅಥವಾ ದಿವಾಳಿ ತಡೆ ಪ್ರಕ್ರಿಯೆ ರದ್ದುಗೊಳಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್​ಸಿಎಲ್​ಎಟಿ) ಆದೇಶಕ್ಕೆ ಸುಪ್ರೀಂಕೋರ್ಟ್ ಇಂದು ಬುಧವಾರ ತಡೆ ನೀಡಿದೆ. ಬಿಸಿಸಿಐಗೆ ಬೈಜುಸ್ ನೀಡಿರುವ 158 ಕೋಟಿ ರೂ ಬಾಕಿ ಹಣ ಪಾವತಿಗೂ ತಡೆ ಕೊಟ್ಟಿದೆ. ಇದರೊಂದಿಗೆ, ಬಿಸಿಸಿಐಗೆ ಬೈಜುಸ್ ನೀಡಿರುವ 158 ಕೋಟಿ ರೂ ಹಣವನ್ನು ಎಸ್​ಕ್ರೂ ಅಕೌಂಟ್ ಅಥವಾ ತಾತ್ಕಾಲಿಕ ಖಾತೆಗೆ ವರ್ಗಾವಣೆ ಆಗಲಿದೆ. ಬಿಸಿಸಿಐಗೆ ಒಂದು ರೀತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಹ ಸ್ಥಿತಿಯಾಗಿದೆ.

ಬಿಸಿಸಿಐಗೆ ಬೈಜುಸ್​ನ ಈ ಸೆಟಲ್ಮೆಂಟ್ ಹಣವನ್ನು ಆಗಸ್ಟ್ 23ರವರೆಗೆ ಪ್ರತ್ಯೇಕ ಖಾತೆಯಲ್ಲಿ ಇಟ್ಟಿರಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ನ್ಯಾಯಪೀಠ ಆದೇಶಿಸಿದೆ. ಆಗಸ್ಟ್ 23ರಂದು ಮುಂದಿನ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ತೆರಿಗೆ ಹೇರುವ ಆಸೆ ನಂಗೂ ಇಲ್ಲ, ಆದರೆ ಸರ್ಕಾರ ನಡೆಸಲು ಹಣ ಬೇಕಲ್ಲ: ನಿರ್ಮಲಾ ಸೀತಾರಾಮನ್

ಬೈಜುಸ್​ಗೆ ಸಾಲ ನೀಡಿರುವ ಸಂಸ್ಥೆಗಳಲ್ಲಿ ಒಂದಾದ ಗ್ಲಾಸ್ ಟ್ರಸ್ಟ್ ಎನ್​ಸಿಎಲ್​ಎಟಿ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಬೈಜುಸ್ ಮತ್ತು ಬಿಸಿಸಿಐ ನಡುವಿನ ಸೆಟಲ್ಮೆಂಟ್ ಅನ್ನು ಅದು ವಿರೋಧಿಸಿತ್ತು. ತಾವು ಸಲ್ಲಿಸಿದ್ದ ಇನ್ಸಾಲ್ವೆನ್ಸಿ ಪ್ರಕರಣ ಜೀವಂತ ಇರುವಾಗಲೇ ಬಿಸಿಸಿಐಗೆ ಹಣ ಪಾವತಿ ಮಾಡಲಾಗಿರುವುದನ್ನು ಅದು ಪ್ರಶ್ನಿಸಿತ್ತು. ಬಿಸಿಸಿಐ ಪರ ವಕಾಲತು ಮಾಡುತ್ತಿರುವ ತುಷಾರ್ ಮೆಹ್ತಾ ಅವರು ಎನ್​ಸಿಎಲ್​ಎಟಿ ಆದೇಶದ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ವಿರೋಧಿಸಿದರು. ಆದರೆ, ನ್ಯಾಯಪೀಠ ಅಂತಿಮವಾಗಿ ಈ ಆದೇಶಕ್ಕೆ ತಡೆ ನೀಡಿದೆ.

ಈ ಹಿಂದೆ ಬೈಜೂಸ್ ಸಂಸ್ಥೆ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವ ಪಡೆದಿತ್ತು. ಆ ಗುತ್ತಿಗೆಯ ಹಣದಲ್ಲಿ 158 ಕೋಟಿ ರೂ ಹಣ ಪಾವತಿ ಬಾಕಿ ಇದೆ ಎಂದು ಬಿಸಿಸಿಐ ಹೇಳಿತ್ತು. ಬೈಜು ರವೀಂದ್ರನ್ ತಮ್ಮ ವೈಯಕ್ತಿಕ ಫಂಡಿಂಗ್​ನಲ್ಲಿ ಈ ಹಣವನ್ನು ತಮ್ಮ ಸೋದರ ರಿಜು ರವೀಂದ್ರನ್ ಮೂಲಕ ಬಿಸಿಸಿಐಗೆ ಕೊಟ್ಟಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ಬಂದಾಗ ಭಾರತದ ಆರ್ಥಿಕತೆ ಹೇಗಿತ್ತು? ಬ್ರಿಟಿಷರು ಬರುವ ಮುನ್ನ ಹೇಗಿತ್ತು?

ಇದೇ ವೇಳೆ, ಬೈಜುಸ್ ಸಂಸ್ಥೆಗೆ ಸಾಲ ಕೊಟ್ಟಿರುವ ವಿವಿಧ ಸಾಲಗಾರರ ಗುಂಪು ಅಮೆರಿಕದ ಡೆಲಾವೇರ್​ನ ಬ್ಯಾಂಕ್ರಪ್ಸಿ ಕೋರ್ಟ್​ನಲ್ಲಿ ದಾಖಲಿಸಿದ ಪ್ರಕರಣ ತಿರಸ್ಕೃತಗೊಂಡಿದೆ. ಬೇರೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ತಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಈ ಅಮೆರಿಕನ್ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ