AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದಕ್ಕೆ ತಮಿಳುನಾಡು ಬ್ಯಾಂಕಿನ ಸಿಇಒ ರಾಜೀನಾಮೆ ಕೊಟ್ಟರಾ?

Tamilnad Mercantile Bank CEO Resigns: ಚೆನ್ನೈನ ತಮಿಳ್ನಾಡು ಮರ್ಕಂಟೈಲ್ ಬ್ಯಾಂಕ್ ವಾರದ ಹಿಂದೆ ಟ್ಯಾಕ್ಸಿ ಚಾಲಕನ ಖಾತೆಗೆ 9,000 ಕೋಟಿ ರೂ ವರ್ಗಾವಣೆ ಮಾಡಿತ್ತು. ಇದೀಗ ಬ್ಯಾಂಕ್​ನ ಎಂಡಿ ಮತ್ತು ಸಿಇಒ ರಾಜೀನಾಮೆ ನೀಡಿದ್ದಾರೆ. ಹಣ ವರ್ಗಾವಣೆ ವಿಚಾರವಾಗಿ ಅವರು ರಾಜೀನಾಮೆ ನೀಡಿದರಾ ಎಂಬುದು ಗೊತ್ತಿಲ್ಲ. ಆದರೆ, ರಾಜೀನಾಮೆ ನೀಡಲು ವೈಯಕ್ತಿಕ ಕಾರಣ ಉಲ್ಲೇಖಿಸಿದರೆಂದು ಹೇಳಲಾಗುತ್ತಿದೆ. ಆರ್​ಬಿಐ ಸೂಚನೆ ಬರುವವರೆಗೂ ಅವರು ಟಿಎಂಬಿಯ ಸಿಇಒ ಆಗಿ ಮುಂದುವರಿಯಲಿದ್ದಾರೆ.

ಆಟೋ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದಕ್ಕೆ ತಮಿಳುನಾಡು ಬ್ಯಾಂಕಿನ ಸಿಇಒ ರಾಜೀನಾಮೆ ಕೊಟ್ಟರಾ?
ತಮಿಳುನಾಡು ಮರ್ಕಂಟೈಲ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 29, 2023 | 2:55 PM

Share

ಚೆನ್ನೈ, ಸೆಪ್ಟೆಂಬರ್ 29: ತೂತ್ತುಕುಡಿ ಮೂಲದ ತಮಿಳುನಾಡು ಮರ್ಕಂಟೈಲ್ ಬ್ಯಾಂಕ್​ನ (TMB- Tamilnad Mercantile Bank) ಸಿಇಒ ಮತ್ತು ಎಂಡಿ ಎಸ್ ಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ಒಂದು ವಾರದ ಹಿಂದಷ್ಟೇ ಈ ಬ್ಯಾಂಕ್​ನಿಂದ 9,000 ಕೋಟಿ ರೂ ಹಣ ಟ್ಯಾಕ್ಸಿ ಚಾಲಕನ ಖಾತೆಗೆ ವರ್ಗಾವಣೆ ಆದ ಸುದ್ದಿ ದೇಶಾದ್ಯಂತ ವೈರಲ್ ಆಗಿತ್ತು. ಆ ಕಾರಣಕ್ಕೆ ಸಿಇಒ ರಾಜೀನಾಮೆ ನೀಡಿದರಾ ಎಂಬುದು ಗೊತ್ತಿಲ್ಲ. ಆದರೆ, ಖಾಸಗಿ ಕಾರಣದಿಂದ ಎಸ್ ಕೃಷ್ಣನ್ ಅವರು ಟಿಎಂಬಿಯ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದರೆಂದು ಬ್ಯಾಂಕ್ ಹೇಳಿದೆ. ಎಸ್ ಕೃಷ್ಣನ್ ಅವರು 2022ರ ಸೆಪ್ಟೆಂಬರ್ 4ರಂದು ತಮಿಳ್ನಾಡ್ ಮೆರ್ಕಂಟೈಲ್ ಬ್ಯಾಂಕ್​ಗೆ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಆಗಿ ನೇಮಕವಾಗಿದ್ದರು.

‘ಬ್ಯಾಂಕ್​ನ ಎಂಡಿ ಮತ್ತು ಸಿಇಒ ಎಸ್ ಕೃಷ್ಣನ್ ವೈಯಕ್ತಿಕ ಕಾರಣ ನೀಡಿ ಸೆಪ್ಟೆಂಬರ್ 28ರಂದು ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್​ನ ಮಂಡಳಿ ಸಭೆಯಲ್ಲಿ ಅವರ ರಾಜೀನಾಮೆ ಅಂಗೀಕರಿಸಲಾಗಿದ್ದು, ಅದನ್ನು ಆರ್​ಬಿಐಗೆ ಕಳುಹಿಸಿಕೊಡಲಾಗಿದೆ. ರಿಸರ್ವ್ ಬ್ಯಾಂಕ್​ನಿಂದ ಮುಂದಿನ ಸಲಹೆ ಅಥವಾ ಮಾರ್ಗದರ್ಶನ ಬರುವವರೆಗೂ ಕೃಷ್ಣನ್ ಅವರು ಎಂಡಿ ಮತ್ತು ಸಿಇಒ ಆಗಿ ಮುಂದುವರಿಯುತ್ತಾರೆ…’ ಎಂದು ಷೇರು ವಿನಿಮಯ ಕೇಂದ್ರಗಳಿಗೆ ಸಲ್ಲಿಸಿದ ಫೈಲಿಂಗ್​ನಲ್ಲಿ ಟಿಎಂಬಿ ತಿಳಿಸಿದೆ.

ಇದನ್ನೂ ಓದಿ: ಎರಡು ವರ್ಷವಾದರೂ ಎಫ್​ಟಿಎಸ್​ಇ​ ಇಂಡೆಕ್ಸ್ ಪಟ್ಟಿಗೆ ಸೇರ್ಪಡೆಯಾಗದ ಭಾರತೀಯ ಬಾಂಡ್​ಗಳು; ಏನಿದರ ಎಫೆಕ್ಟ್?

ರಾಜೀನಾಮೆ ಪತ್ರದಲ್ಲಿ ಕೃಷ್ಣನ್ ಹೇಳಿದ್ದೇನು?

‘ನನ್ನ ಅಧಿಕಾರಾವಧಿ ಇನ್ನೂ ಮುಕ್ಕಾಲು ಭಾಗ ಇದೆಯಾದರೂ ವೈಯಕ್ತಿಕ ಕಾರಣಗಳಿಗಾಗಿ ಬ್ಯಾಂಕ್​ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಬ್ಯಾಂಕ್​ನಲ್ಲಿ ಪೂರ್ಣಾವಧಿ ನಿರ್ದೇಶಕರು ಇರುವುದು ಒಬ್ಬರೇ ಆದ್ದರಿಂದ ಈ ಬಗ್ಗೆ ಆರ್​ಬಿಐನ ಮಾರ್ಗದರ್ಶನ ಕೋರುವೆ,’ ಎಂದು ಸಿಇಒ ಎಸ್ ಕೃಷ್ಣನ್ ಹೇಳಿದ್ದಾರೆ.

ಎಸ್ ಕೃಷ್ಣನ್ ಅವರು ತಮಿಳುನಾಡ್ ಮರ್ಕಂಟೈಲ್ ಬ್ಯಾಂಕ್​ಗೆ ಸಿಇಒ ಆಗಿ ನೇಮಕವಾಗುವ ಮುನ್ನ ಬೇರೆ ಕೆಲ ಬ್ಯಾಂಕುಗಳಲ್ಲಿ ಉನ್ನತ ಹುದ್ದೆಗಳನ್ನು ನಿರ್ವಹಿಸಿದ್ದರು. ಸಿಂಡಿಕೇಟ್ ಬ್ಯಾಂಕ್​ನಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ 2017ರಿಂದ 2020ರವರೆಗೂ ಕೆಲಸ ಮಾಡಿದ್ದರು. ಅದಾದ ಬಳಿಕ ಕೆನರಾ ಬ್ಯಾಂಕ್​ನಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ, ಮತ್ತು ಪಂಜಾಬ್ ಅಂಡ್ ಸಿಂದ್ ಬ್ಯಾಂಕ್​ನಲ್ಲಿ ಸಿಇಒ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಎರಡು ಸಾವಿರ ರೂ ನೋಟುಗಳ ವಿನಿಮಯಕ್ಕೆ ಡೆಡ್​ಲೈನ್ ವಿಸ್ತರಣೆ; ಅಕ್ಟೋಬರ್​ವರೆಗೂ ಕಾಲಾವಕಾಶ ಸಿಗುವ ಸಾಧ್ಯತೆ

ಆಟೋರಿಕ್ಷಾ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದ ಬ್ಯಾಂಕ್

ಕಳೆದ ವಾರ ತಮಿಳುನಾಡು ಮರ್ಸಂಟೈಲ್ ಬ್ಯಾಂಕ್​ನ ಚೆನ್ನೈ ಶಾಖೆಯಿಂದ ಅಚಾನಕ್ಕಾಗಿ ಟ್ಯಾಕ್ಸಿ ಚಾಲಕರೊಬ್ಬರ ಖಾತೆಗೆ 9,000 ಕೋಟಿ ರೂ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಬ್ಯಾಂಕಿಂಗ್ ವಲಯಕ್ಕೆ ಇದು ಅಕ್ಷರಶಃ ಶಾಕ್ ಕೊಟ್ಟ ಘಟನೆಯಾಗಿತ್ತು. ತಾಂತ್ರಿಕ ದೋಷದಿಂದ ಈ ಪ್ರಮಾದ ಆಯಿತು ಎಂದು ಟಿಎಂಬಿ ಆ ವಹಿವಾಟಿನ ವಿವರ ನೀಡಿತು. ಸದ್ಯ, ಆ ತಪ್ಪು ಬೇಗನೇ ಗಮನಕ್ಕೆ ಬಂದು, ಚಾಲಕನ ಖಾತೆಯಿಂದ ಅಷ್ಟೂ ಹಣವನ್ನು ವಾಪಸ್ ಪಡೆದುಕೊಳ್ಳಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ