AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದಕ್ಕೆ ತಮಿಳುನಾಡು ಬ್ಯಾಂಕಿನ ಸಿಇಒ ರಾಜೀನಾಮೆ ಕೊಟ್ಟರಾ?

Tamilnad Mercantile Bank CEO Resigns: ಚೆನ್ನೈನ ತಮಿಳ್ನಾಡು ಮರ್ಕಂಟೈಲ್ ಬ್ಯಾಂಕ್ ವಾರದ ಹಿಂದೆ ಟ್ಯಾಕ್ಸಿ ಚಾಲಕನ ಖಾತೆಗೆ 9,000 ಕೋಟಿ ರೂ ವರ್ಗಾವಣೆ ಮಾಡಿತ್ತು. ಇದೀಗ ಬ್ಯಾಂಕ್​ನ ಎಂಡಿ ಮತ್ತು ಸಿಇಒ ರಾಜೀನಾಮೆ ನೀಡಿದ್ದಾರೆ. ಹಣ ವರ್ಗಾವಣೆ ವಿಚಾರವಾಗಿ ಅವರು ರಾಜೀನಾಮೆ ನೀಡಿದರಾ ಎಂಬುದು ಗೊತ್ತಿಲ್ಲ. ಆದರೆ, ರಾಜೀನಾಮೆ ನೀಡಲು ವೈಯಕ್ತಿಕ ಕಾರಣ ಉಲ್ಲೇಖಿಸಿದರೆಂದು ಹೇಳಲಾಗುತ್ತಿದೆ. ಆರ್​ಬಿಐ ಸೂಚನೆ ಬರುವವರೆಗೂ ಅವರು ಟಿಎಂಬಿಯ ಸಿಇಒ ಆಗಿ ಮುಂದುವರಿಯಲಿದ್ದಾರೆ.

ಆಟೋ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದಕ್ಕೆ ತಮಿಳುನಾಡು ಬ್ಯಾಂಕಿನ ಸಿಇಒ ರಾಜೀನಾಮೆ ಕೊಟ್ಟರಾ?
ತಮಿಳುನಾಡು ಮರ್ಕಂಟೈಲ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 29, 2023 | 2:55 PM

Share

ಚೆನ್ನೈ, ಸೆಪ್ಟೆಂಬರ್ 29: ತೂತ್ತುಕುಡಿ ಮೂಲದ ತಮಿಳುನಾಡು ಮರ್ಕಂಟೈಲ್ ಬ್ಯಾಂಕ್​ನ (TMB- Tamilnad Mercantile Bank) ಸಿಇಒ ಮತ್ತು ಎಂಡಿ ಎಸ್ ಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ಒಂದು ವಾರದ ಹಿಂದಷ್ಟೇ ಈ ಬ್ಯಾಂಕ್​ನಿಂದ 9,000 ಕೋಟಿ ರೂ ಹಣ ಟ್ಯಾಕ್ಸಿ ಚಾಲಕನ ಖಾತೆಗೆ ವರ್ಗಾವಣೆ ಆದ ಸುದ್ದಿ ದೇಶಾದ್ಯಂತ ವೈರಲ್ ಆಗಿತ್ತು. ಆ ಕಾರಣಕ್ಕೆ ಸಿಇಒ ರಾಜೀನಾಮೆ ನೀಡಿದರಾ ಎಂಬುದು ಗೊತ್ತಿಲ್ಲ. ಆದರೆ, ಖಾಸಗಿ ಕಾರಣದಿಂದ ಎಸ್ ಕೃಷ್ಣನ್ ಅವರು ಟಿಎಂಬಿಯ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದರೆಂದು ಬ್ಯಾಂಕ್ ಹೇಳಿದೆ. ಎಸ್ ಕೃಷ್ಣನ್ ಅವರು 2022ರ ಸೆಪ್ಟೆಂಬರ್ 4ರಂದು ತಮಿಳ್ನಾಡ್ ಮೆರ್ಕಂಟೈಲ್ ಬ್ಯಾಂಕ್​ಗೆ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಆಗಿ ನೇಮಕವಾಗಿದ್ದರು.

‘ಬ್ಯಾಂಕ್​ನ ಎಂಡಿ ಮತ್ತು ಸಿಇಒ ಎಸ್ ಕೃಷ್ಣನ್ ವೈಯಕ್ತಿಕ ಕಾರಣ ನೀಡಿ ಸೆಪ್ಟೆಂಬರ್ 28ರಂದು ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್​ನ ಮಂಡಳಿ ಸಭೆಯಲ್ಲಿ ಅವರ ರಾಜೀನಾಮೆ ಅಂಗೀಕರಿಸಲಾಗಿದ್ದು, ಅದನ್ನು ಆರ್​ಬಿಐಗೆ ಕಳುಹಿಸಿಕೊಡಲಾಗಿದೆ. ರಿಸರ್ವ್ ಬ್ಯಾಂಕ್​ನಿಂದ ಮುಂದಿನ ಸಲಹೆ ಅಥವಾ ಮಾರ್ಗದರ್ಶನ ಬರುವವರೆಗೂ ಕೃಷ್ಣನ್ ಅವರು ಎಂಡಿ ಮತ್ತು ಸಿಇಒ ಆಗಿ ಮುಂದುವರಿಯುತ್ತಾರೆ…’ ಎಂದು ಷೇರು ವಿನಿಮಯ ಕೇಂದ್ರಗಳಿಗೆ ಸಲ್ಲಿಸಿದ ಫೈಲಿಂಗ್​ನಲ್ಲಿ ಟಿಎಂಬಿ ತಿಳಿಸಿದೆ.

ಇದನ್ನೂ ಓದಿ: ಎರಡು ವರ್ಷವಾದರೂ ಎಫ್​ಟಿಎಸ್​ಇ​ ಇಂಡೆಕ್ಸ್ ಪಟ್ಟಿಗೆ ಸೇರ್ಪಡೆಯಾಗದ ಭಾರತೀಯ ಬಾಂಡ್​ಗಳು; ಏನಿದರ ಎಫೆಕ್ಟ್?

ರಾಜೀನಾಮೆ ಪತ್ರದಲ್ಲಿ ಕೃಷ್ಣನ್ ಹೇಳಿದ್ದೇನು?

‘ನನ್ನ ಅಧಿಕಾರಾವಧಿ ಇನ್ನೂ ಮುಕ್ಕಾಲು ಭಾಗ ಇದೆಯಾದರೂ ವೈಯಕ್ತಿಕ ಕಾರಣಗಳಿಗಾಗಿ ಬ್ಯಾಂಕ್​ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಬ್ಯಾಂಕ್​ನಲ್ಲಿ ಪೂರ್ಣಾವಧಿ ನಿರ್ದೇಶಕರು ಇರುವುದು ಒಬ್ಬರೇ ಆದ್ದರಿಂದ ಈ ಬಗ್ಗೆ ಆರ್​ಬಿಐನ ಮಾರ್ಗದರ್ಶನ ಕೋರುವೆ,’ ಎಂದು ಸಿಇಒ ಎಸ್ ಕೃಷ್ಣನ್ ಹೇಳಿದ್ದಾರೆ.

ಎಸ್ ಕೃಷ್ಣನ್ ಅವರು ತಮಿಳುನಾಡ್ ಮರ್ಕಂಟೈಲ್ ಬ್ಯಾಂಕ್​ಗೆ ಸಿಇಒ ಆಗಿ ನೇಮಕವಾಗುವ ಮುನ್ನ ಬೇರೆ ಕೆಲ ಬ್ಯಾಂಕುಗಳಲ್ಲಿ ಉನ್ನತ ಹುದ್ದೆಗಳನ್ನು ನಿರ್ವಹಿಸಿದ್ದರು. ಸಿಂಡಿಕೇಟ್ ಬ್ಯಾಂಕ್​ನಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ 2017ರಿಂದ 2020ರವರೆಗೂ ಕೆಲಸ ಮಾಡಿದ್ದರು. ಅದಾದ ಬಳಿಕ ಕೆನರಾ ಬ್ಯಾಂಕ್​ನಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ, ಮತ್ತು ಪಂಜಾಬ್ ಅಂಡ್ ಸಿಂದ್ ಬ್ಯಾಂಕ್​ನಲ್ಲಿ ಸಿಇಒ ಆಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಎರಡು ಸಾವಿರ ರೂ ನೋಟುಗಳ ವಿನಿಮಯಕ್ಕೆ ಡೆಡ್​ಲೈನ್ ವಿಸ್ತರಣೆ; ಅಕ್ಟೋಬರ್​ವರೆಗೂ ಕಾಲಾವಕಾಶ ಸಿಗುವ ಸಾಧ್ಯತೆ

ಆಟೋರಿಕ್ಷಾ ಚಾಲಕನ ಖಾತೆಗೆ 9,000 ಕೋಟಿ ರೂ ಹಾಕಿದ್ದ ಬ್ಯಾಂಕ್

ಕಳೆದ ವಾರ ತಮಿಳುನಾಡು ಮರ್ಸಂಟೈಲ್ ಬ್ಯಾಂಕ್​ನ ಚೆನ್ನೈ ಶಾಖೆಯಿಂದ ಅಚಾನಕ್ಕಾಗಿ ಟ್ಯಾಕ್ಸಿ ಚಾಲಕರೊಬ್ಬರ ಖಾತೆಗೆ 9,000 ಕೋಟಿ ರೂ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಬ್ಯಾಂಕಿಂಗ್ ವಲಯಕ್ಕೆ ಇದು ಅಕ್ಷರಶಃ ಶಾಕ್ ಕೊಟ್ಟ ಘಟನೆಯಾಗಿತ್ತು. ತಾಂತ್ರಿಕ ದೋಷದಿಂದ ಈ ಪ್ರಮಾದ ಆಯಿತು ಎಂದು ಟಿಎಂಬಿ ಆ ವಹಿವಾಟಿನ ವಿವರ ನೀಡಿತು. ಸದ್ಯ, ಆ ತಪ್ಪು ಬೇಗನೇ ಗಮನಕ್ಕೆ ಬಂದು, ಚಾಲಕನ ಖಾತೆಯಿಂದ ಅಷ್ಟೂ ಹಣವನ್ನು ವಾಪಸ್ ಪಡೆದುಕೊಳ್ಳಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ