Developed India: ಭಾರತ ಮುಂದುವರಿದ ದೇಶವಾಗಲು 4 ಐ ಸೂತ್ರ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

Nirmala Sitharaman 4Is: 2047ರಷ್ಟರಲ್ಲಿ ಭಾರತ ಮುಂದುವರಿದ ದೇಶವಾಗಬೇಕೆನ್ನುವ ಗುರಿ ಈಡೇರಲು ಸರ್ಕಾರ ನಾಲ್ಕು ಐಗಳತ್ತ ಗಮನ ಹರಿಸುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Developed India: ಭಾರತ ಮುಂದುವರಿದ ದೇಶವಾಗಲು 4 ಐ ಸೂತ್ರ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Follow us
|

Updated on:Jul 30, 2023 | 1:59 PM

ನವದೆಹಲಿ, ಜುಲೈ 30: ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ಜಾಗತಿಕ ಸ್ಟಾರ್ ಆಗಿದೆ. ಇನ್ನು ಸ್ವಾತಂತ್ರ್ಯ ಶತಮಾನೋತ್ಸವದ ಸಂದರ್ಭದಲ್ಲಿ ಭಾರತ ಹೇಗಿರಲಿದೆ? ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2047ರಷ್ಟರಲ್ಲಿ ಭಾರತ ಮುಂದುವರಿದ ದೇಶವಾಗಬಹುದು ಎಂದು ಶನಿವಾರ (ಜುಲೈ 29) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದುವರಿದ ದೇಶವಾಗುವ ಕನಸು ನನಸಾಗಬೇಕಾದರೆ ಸರ್ಕಾರ ನಾಲ್ಕು ಅಂಶಗಳತ್ತ ಗಮನ ಹರಿಸಬೇಕು ಎಂದಿರುವ ಹಣಕಾಸು ಸಚಿವೆ, ಇನ್​ಫ್ರಾಸ್ಟ್ರಕ್ಚರ್, ಇನ್ವೆಸ್ಟ್​ಮೆಂಟ್, ಇನೋವೇಶನ್ ಮತ್ತು ಇನ್​ಕ್ಲೂಸಿವ್ನೆಸ್ ಅನ್ನು ಹೆಸರಿಸಿದ್ದಾರೆ.

2047ರಷ್ಟರಲ್ಲಿ ಭಾರತ ಮುಂದುವರಿದ ದೇಶವಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಇಟ್ಟಿರುವ ಗುರಿ ತಲುಪಲು ದೇಶಕ್ಕೆ ಸಾಮರ್ಥ್ಯ ಇದೆ ಎಂದ ನಿರ್ಮಲಾ ಸೀತಾರಾಮನ್, ಸರ್ಕಾರದಿಂದ ಕೈಗೊಳ್ಳಲಾದ ಹೂಡಿಕೆದಾರ ಸ್ನೇಹಿ ಸುಧಾರಣಾ ಕ್ರಮಗಳ ಜೊತೆಗೆ ದೇಶದ ಯುವಜನರ ಶಕ್ತಿಗೆ ಕೌಶಲ್ಯ ಒದಗಿಸುವ ಕ್ರಮಗಳು ಈ ನಿಟ್ಟಿನಲ್ಲಿ ಸಹಕಾರಿ ಆಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Modi Ki Guarantee: ವಿಶ್ವದ ಮೂರು ಅತಿದೊಡ್ಡ ಆರ್ಥಿಕತೆಗಳಲ್ಲೊಂದಾಗಲಿದೆ ಭಾರತ; ಇದು ಮೋದಿ ಗ್ಯಾರಂಟಿ ಎಂದ ಪ್ರಧಾನಿ

‘ಭಾರತ ನಾಲ್ಕು ವಿಚಾರಗಳತ್ತ ಗಮನ ಕೊಟ್ಟಿದೆ. ಇನ್​ಫ್ರಾಸ್ಟ್ರಕ್ಚರ್ ಅಥವಾ ಸೌಕರ್ಯ ವ್ಯವಸ್ಥೆಗೆ ಶಕ್ತಿ ತುಂಬುತ್ತಿದ್ದೇವೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಇನ್​ಫ್ರಾಸ್ಟ್ರಕ್ಚರ್ ಮೇಲಿನ ಹೂಡಿಕೆ ಬಹಳ ಹೆಚ್ಚಿಸಿದ್ದೇವೆ. 2023-24ರಲ್ಲಿ ಇದು 10 ಲಕ್ಷಕೋಟಿ ರುಪಾಯಿ ತಲುಪಲಿದೆ. ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ಏರ್​ಪೋರ್ಟ್, ಸೇತುವೆ ಇತ್ಯಾದಿ ಭೌತಿಕ ವಸ್ತುಗಳು ಮಾತ್ರವಲ್ಲ, ಡಿಜಿಟಲ್ ಸೌಕರ್ಯ ರಚನೆಯೂ ಒಳಗೊಂಡಿರುತ್ತದೆ.

‘ಇನ್ವೆಸ್ಟ್​ಮೆಂಟ್ (ಹೂಡಿಕೆ) ಎರಡನೇ ಸಂಗತಿ. ಸಾರ್ವಜನಿಕ ಮತ್ತು ಖಾಸಗಿ ಎರಡೂ ವಲಯಗಳಿಂದ ಹೂಡಿಕೆಗಳನ್ನು ಪಡೆಯುತ್ತೇವೆ’ ಎಂದು ನಿರ್ಮಲಾ ಸೀತಾರಾಮನ್ ಎರಡು ಐಗಳ ಬಗ್ಗೆ ವಿವರ ನೀಡಿದ್ದಾರೆ.

ಇದನ್ನೂ ಓದಿ: Economy: ಜಗತ್ತು ಅಲುಗಾಡಿದರೂ ಭಾರತ ನಿಶ್ಚಲ; 2023ರಲ್ಲಿ ಭಾರತದಿಂದ ನಿರೀಕ್ಷೆಮೀರಿದ ಆರ್ಥಿಕವೃದ್ಧಿ: ಐಎಂಎಫ್ ಅಂದಾಜು

ಮೂರನೇ ಐ ಎನಿಸಿದ ಇನೋವೇಶನ್, ಅಥವಾ ನಾವೀನ್ಯತೆ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಬಾಹ್ಯಾಕಾಶ, ಪರಮಾಣು ಶಕ್ತಿಯನ್ನು ಒಳಗೊಂಡಿರುವ ಹಲವು ಕ್ಷೇತ್ರಗಳನ್ನು ಸರ್ಕಾರ ತೆರೆದಿದೆ ಎಂದು ಹೇಳಿದ್ದಾರೆ.

ಇನ್ನು ನಾಲ್ಕನೇ ಐ ಆದ ಇನ್​ಕ್ಲೂಸಿವ್ನೆಸ್ ಅಥವಾ ಒಳಗೊಳ್ಳುವಿಕೆ ಬಗ್ಗೆ ವಿವರ ನೀಡಿದ ಅವರು, ಯಾವುದೇ ಹೂಡಿಕೆ ಅಥವಾ ಸುಧಾರಣೆಗಳು ದೇಶದ ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಲಾಗುವತ್ತ ಗಮನ ಕೊಟ್ಟು, 25 ವರ್ಷದಲ್ಲಿ ಅಭಿವೃದ್ಧಿ ದೇಶ ಆಗುವ ಗುರಿ ತಲುಪುತ್ತೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sun, 30 July 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ