AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata: ಟಾಟಾ ಕಂಪನಿಗಳಿಂದ ಬೆಂಗಳೂರಲ್ಲಿ ಗನ್ ಫ್ಯಾಕ್ಟರಿ, ಎಂಆರ್​ಒ ಘಟಕ; 2,300 ಕೋಟಿ ರೂ ಹೂಡಿಕೆ ಸಾಧ್ಯತೆ

Tata Group companies investment in Karnataka: ಕರ್ನಾಟಕದಲ್ಲಿ ಟಾಟಾ ಗ್ರೂಪ್​ನ ಕಂಪನಿಗಳು ವಿವಿಧ ಯೋಜನೆಗಳಿಗೆ 2,300 ಕೋಟಿ ರೂ ಹೂಡಿಕೆ ಮಾಡಲು ಒಪ್ಪಂದ ಮಾಡಿಕೊಂಡಿವೆ. ಏರ್ ಇಂಡಿಯಾ ಬೆಂಗಳೂರಿನಲ್ಲಿ ತನ್ನ ವಿಮಾನಗಳಿಗೆ ಎಂಆರ್​ಒ ಘಟಕ ಸ್ಥಾಪಿಸಲಿದೆ. ದಕ್ಷಿಣ ಭಾರತಕ್ಕೆ ಬೆಂಗಳೂರು ಅದರ ಎಂಆರ್​ಒ ಹಬ್ ಆಗಿರಲಿದೆ. ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಸಂಸ್ಥೆ ಬೆಂಗಳೂರಿನಲ್ಲಿ ಗನ್ ಫ್ಯಾಕ್ಟರಿ, ಆರ್ ಅಂಡ್ ಸೇರಿದಂತೆ ಮೂರು ಯೋಜನೆಗಳನ್ನು ಆರಂಭಿಸಲಿದೆ.

Tata: ಟಾಟಾ ಕಂಪನಿಗಳಿಂದ ಬೆಂಗಳೂರಲ್ಲಿ ಗನ್ ಫ್ಯಾಕ್ಟರಿ, ಎಂಆರ್​ಒ ಘಟಕ; 2,300 ಕೋಟಿ ರೂ ಹೂಡಿಕೆ ಸಾಧ್ಯತೆ
ಟಾಟಾ ಅಡ್ವಾನ್​ಸ್ಡ್ ಸಿಸ್ಟಮ್ಸ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 19, 2024 | 2:25 PM

Share

ನವದೆಹಲಿ, ಫೆಬ್ರುವರಿ 19: ಕರ್ನಾಟಕದಲ್ಲಿ ಐಫೋನ್ ಫ್ಯಾಕ್ಟರಿ ಸೇರಿದಂತೆ ಹಲವು ಯೋಜನೆಗಳನ್ನು ನಡೆಸುತ್ತಿರುವ ಟಾಟಾ ಗ್ರೂಪ್ (Tata Group) ಇದೀಗ ರಾಜ್ಯದಲ್ಲಿ ಇನ್ನಷ್ಟು ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ಟಾಟಾ ಗ್ರೂಪ್ ಕಂಪನಿಗಳಾದ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್​ಡ್ ಸಿಸ್ಟಮ್ಸ್ (Tata Advanced Systems) ಒಟ್ಟು 2,300 ಕೋಟಿ ರೂ ಹೂಡಿಕೆ ಮಾಡಲಿವೆ. ಈ ಕಂಪನಿಗಳು ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ (MoU) ಪತ್ರಕ್ಕೆ ಸಹಿಹಾಕಿವೆ. ಒಂದು ಅಂದಾಜು ಪ್ರಕಾರ ಈ ಯೋಜನೆಗಳಿಂದ 1,650 ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ. ಜೊತೆಗೆ ಪರೋಕ್ಷವಾಗಿ ಸಾವಿರಾರು ಮಂದಿಎ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.

ಬೆಂಗಳೂರಲ್ಲಿ ಏರ್ ಇಂಡಿಯಾ ಎಂಆರ್​ಒ ಘಟಕ

ಏರ್ ಇಂಡಿಯಾ ಸಂಸ್ಥೆ ಬೆಂಗಳೂರಿನಲ್ಲಿ 1,300 ಕೋಟಿ ರೂ ಹೂಡಿಕೆಯಲ್ಲಿ ಎಂಆರ್​ಒ ಕೇಂದ್ರವನ್ನು ಸ್ಥಾಪಿಸಿದೆ. ವಿಮಾನ ಮತ್ತು ಅದರ ಬಿಡಿಭಾಗಗಳ ಮೈಂಟೆನೆನ್ಸ್, ದುರಸ್ತಿ ಕಾರ್ಯಗಳು (MRO- Maintenance, Repair and Overhaul) ಈ ಎಂಆರ್​ಒ ಘಟಕದಲ್ಲಿ ಆಗಲಿದೆ. ದಕ್ಷಿಣ ಭಾರತದಲ್ಲಿ ಏರ್ ಇಂಡಿಯಾ ಬೆಂಗಳೂರನ್ನು ತನ್ನ ಎಂಆರ್​ಒ ಕೇಂದ್ರವನ್ನಾಗಿ ಮಾಡಿಕೊಳ್ಳಲು ಉದ್ದೇಶಿಸಿದೆ. ಈ ಘಟಕಕ್ಕೆ 1,300 ಕೋಟಿ ರೂ ಬಂಡವಾಳ ಹಾಕಲಿದ್ದು, ಇದರಲ್ಲಿ 1,200 ಉದ್ಯೋಗಿಗಳು ಕೆಲಸ ಮಾಡಲು ಅವಕಾಶ ಇರಲಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯದ ಆರೋಪ: 16ನೇ ಹಣಕಾಸು ಆಯೋಗದ ಮುಖ್ಯಸ್ಥರು ಹೇಳೋದಿದು

ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಎಂಆರ್​ಒ ಫೆಸಿಲಿಟಿಯಿಂದಾಗಿ ಏರ್ ಇಂಡಿಯಾ ವಿಮಾನಗಳಿಗೆ ವರ್ಷಕ್ಕೆ 80 ಲಕ್ಷದಷ್ಟು ಹೆಚ್ಚು ಪ್ರಯಾಣಿಕರು ಹೊಸದಾಗಿ ಸೇರ್ಪಡೆಯಾಗಬಹುದು ಎಂಬ ಎಣಿಕೆ ಇದೆ.

ಟಾಟಾ ಅಡ್ವಾನ್​ಸ್ಡ್ ಸಿಸ್ಟಮ್ಸ್​ನಿಂದ ಗನ್ ತಯಾರಿಕೆ

ಏರೋಸ್ಪೇಸ್, ಮಿಲಿಟರಿ ಎಂಜಿನಿಯರಿಂಗ್, ಡಿಫೆನ್ಸ್ ಟೆಕ್ನಾಲಜಿ ಕಂಪನಿ ಎನಿಸಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಕರ್ನಾಟಕದಲ್ಲಿ 1,030 ಕೋಟಿ ರೂ ಹೂಡಿಕೆಯಲ್ಲಿ ಮೂರು ಯೋಜನೆಗಳನ್ನು ಕೈಗೊಳ್ಳುತ್ತಿದೆ. 420 ಕೋಟಿ ರೂ ಹೂಡಿಕೆಯಲ್ಲಿ ಏರ್​ಕ್ರಾಫ್ಟ್ ಕನ್ವರ್ಷನ್ ಘಟಕ, 310 ಕೋಟಿ ರೂ ಹೂಡಿಕೆಯಲ್ಲಿ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ ಹೂಡಿಕೆಯಲ್ಲಿ ಏರೋಸ್ಪೇಸ್ ಆರ್ ಅಂಡ್ ಡಿ ಸೆಂಟರ್ ಅನ್ನು ಸ್ಥಾಪಿಸಲಿದೆ.

ಇದನ್ನೂ ಓದಿ: ಭಾರತದ ಕಾರು ಮಾರಾಟ ಕ್ಷೇತ್ರಕ್ಕೆ ಇಳಿದ ಮಿಟ್ಸುಬಿಶಿ; ಭಾರತದ ಟಿವಿಎಸ್ ಮೊಬಿಲಿಟಿಯಲ್ಲಿ ಪಾಲು ಖರೀದಿಸಿದ ಜಪಾನೀ ಕಂಪನಿ

ಏರ್​ಕ್ರಾಫ್ಟ್ ಕನ್ವರ್ಷನ್ ಘಟಕದಲ್ಲಿ ಪ್ಯಾಸಂಜರ್ ವಿಮಾನಗಳನ್ನು ಅಗತ್ಯ ಬಿದ್ದಲ್ಲಿ ಸರಕು ಸಾಗಣೆ ವಿಮಾನಗಳಾಗಿ ಪರಿವರ್ತಿಸುವ ಸೌಲಭ್ಯ ಇರಲಿದೆ.

ಗನ್ ತಯಾರಿಕಾ ಘಟಕದಿಂದ ಕರ್ನಾಟಕದಲ್ಲಿ ವಿವಿಧ ಉದ್ದಿಮೆಗಳಿಗೆ ಅನುಕೂಲವಾಗಲಿದೆ. ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್​ನ ಗನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿಗೆ 13,000 ಬಿಡಿಭಾಗಗಳು ಬೇಕಾಗುತ್ತದೆ. ಇದರಲ್ಲಿ ಶೇ. 50ರಷ್ಟು ಬಿಡಿಭಾಗಗಳಲ್ಲಿ ಕರ್ನಾಟಕದ ವಿವಿಧೆಡೆಯಿಂದಲೇ ಪಡೆಯಲು ಟಾಟಾ ಕಂಪನಿ ನಿರ್ಧರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!