AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಮೀಪ ದೇಶದ ಅತಿದೊಡ್ಡ ಐಫೋನ್ ಘಟಕ; ಹೊಸೂರಿನಲ್ಲಿ ಟಾಟಾ ಯೋಜನೆ; 50,000 ಮಂದಿಗೆ ಉದ್ಯೋಗ

Tata Group To Build iPhone Assembly Unit in Hosur: ದೇಶದ ಅತಿದೊಡ್ಡ ಐಫೋನ್ ಫ್ಯಾಕ್ಟರಿ ತಮಿಳುನಾಡಿನ ಹೊಸೂರಿನಲ್ಲಿ ತಲೆಎತ್ತುತ್ತಿದೆ. ಟಾಟಾ ಗ್ರೂಪ್ ಈ ಘಟಕ ನಿರ್ಮಿಸುತ್ತಿದೆ. ಬೆಂಗಳೂರು ಸಮೀಪದ ತಮಿಳುನಾಡು ಗಡಿಭಾಗದ ಹೊಸೂರಿನಲ್ಲಿ ಟಾಟಾ ಸಂಸ್ಥೆ ಐಫೋನ್ ಕೇಸ್ ತಯಾರಿಕೆಯ ಘಟಕ ಹೊಂದಿದೆ. ಹೊಸೂರಿನ ಐಫೋನ್ ಫ್ಯಾಕ್ಟರಿ ಇನ್ನೆರಡು ವರ್ಷದಲ್ಲಿ ಕಾರ್ಯಾಚರಣೆಗೆ ಸಿದ್ಧವಾಗಲಿದ್ದು, 50 ಸಾವಿರ ಮಂದಿಗೆ ಉದ್ಯೋಗಾವಕಾಶ ಸಿಗುವ ನಿರೀಕ್ಷೆ ಇದೆ.

ಬೆಂಗಳೂರು ಸಮೀಪ ದೇಶದ ಅತಿದೊಡ್ಡ ಐಫೋನ್ ಘಟಕ; ಹೊಸೂರಿನಲ್ಲಿ ಟಾಟಾ ಯೋಜನೆ; 50,000 ಮಂದಿಗೆ ಉದ್ಯೋಗ
ಟಾಟಾ ಗ್ರೂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 08, 2023 | 10:04 AM

Share

ಬೆಂಗಳೂರು, ಡಿಸೆಂಬರ್ 8: ಬೆಂಗಳೂರು ಸಮೀಪದ ತಮಿಳುನಾಡು ಗಡಿಭಾಗದಲ್ಲಿರುವ ಹೊಸೂರಿನಲ್ಲಿ ಟಾಟಾ ಗ್ರೂಪ್ ಹೊಸ ಐಫೋನ್ ಅಸೆಂಬ್ಲಿ ಘಟಕಗಳನ್ನು (iPhone Assembly Unit in Hosur) ಸ್ಥಾಪಿಸಲಿದೆ. ಕೋಲಾರದ ನರಸಾಪುರದಲ್ಲಿಯೂ ಟಾಟಾ ಐಫೋನ್ ಫ್ಯಾಕ್ಟರಿ ಹೊಂದಿದೆ. ಈಗ ಹೊಸೂರಿನಲ್ಲಿ ನಿರ್ಮಾಣವಾಗಲಿರುವುದು ಭಾರತದ ಅತಿದೊಡ್ಡ ಐಫೋನ್ ತಯಾರಿಕಾ ಘಟಕವಾಗಲಿದೆ ಎಂಬ ಮಾಹಿತಿ ಸದ್ಯಕ್ಕೆ ತಿಳಿದುಬರಲಿದೆ. ಭಾರತದಲ್ಲಿ ಐಫೋನ್ ತಯಾರಿಕೆ ಪ್ರಮಾಣ ಹೆಚ್ಚಿಸುವ ಆ್ಯಪಲ್ ಸಂಸ್ಥೆಯ ಪ್ರಯತ್ನದ ಭಾಗವಾಗಿ ಟಾಟಾ ಗ್ರೂಪ್​ನ ಈ ಹೊಸ ಘಟಕಗಳು ತಲೆ ಎತ್ತುತ್ತಿವೆ.

ಬ್ಲೂಮ್​ಬರ್ಗ್ ಸುದ್ದಿಸಂಸ್ಥೆ ಮಾಹಿತಿ ಪ್ರಕಾರ ಹೊಸೂರಿನಲ್ಲಿ ಬರಲಿರುವ ಟಾಟಾ ಐಫೋನ್ ಫ್ಯಾಕ್ಟರಿಯಲ್ಲಿ 20 ಅಸೆಂಬ್ಲಿ ಲೈನ್​ಗಳಿರಲಿವೆ. ಒಂದರಿಂದ ಒಂದೂವರೆ ವರ್ಷದಲ್ಲಿ ಈ ಘಟಕ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆ ಇದೆ. ಎರಡು ವರ್ಷದಲ್ಲಿ 50,000 ಉದ್ಯೋಗಿಗಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವ ಗುರಿ ಇದೆ.

ಇದನ್ನೂ ಓದಿ: ಕಾರ್ಬನ್ ಟ್ಯಾಕ್ಸ್ ಹೇರಿಕೆ ಕ್ರಮ ನೈತಿಕವಲ್ಲ; ಶ್ರೀಮಂತ ದೇಶಗಳ ವಿರುದ್ಧ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿ

ಆ್ಯಪಲ್​ನ ಇತರ ಐಫೋನ್ ತಯಾರಕರಾದ ಫಾಕ್ಸ್​ಕಾನ್ ಮತ್ತು ಪೆಗಾಟ್ರಾನ್ ಕಂಪನಿಗಳೂ ಕೂಡ ತಮಿಳುನಾಡಿನಲ್ಲಿ ಅಸೆಂಬ್ಲಿ ಯೂನಿಟ್​ಗಳನ್ನು ಹೊಂದಿವೆ. ಸದ್ಯಕ್ಕೆ ಫಾಕ್ಸ್​ಕಾನ್ ಸಂಸ್ಥೆಯ ಘಟಕ ದೇಶದಲ್ಲೇ ದೊಡ್ಡ ಐಫೋನ್ ಅಸೆಂಬ್ಲಿ ಯೂನಿಟ್ ಎನಿಸಿದೆ. ಹೊಸೂರಿನಲ್ಲಿ ಟಾಟಾ ಗ್ರೂಪ್ ಈ ದಾಖಲೆ ಮುರಿಯಲಿದೆ. ಕೋಲಾರದಲ್ಲಿರುವ ವಿಸ್ಟ್ರಾನ್ ಐಫೋನ್ ಘಟಕದಲ್ಲಿ ಸುಮಾರು 10,000 ಮಂದಿ ಕೆಲಸ ಮಾಡುತ್ತಾರೆ. ಇತ್ತೀಚೆಗಷ್ಟೇ ಟಾಟಾ ಗ್ರೂಪ್ ಈ ಘಟಕ ಹಾಗೂ ವಿಸ್ಟ್ರಾನ್​ನ ಬಿಸಿನೆಸ್ ಅನ್ನು ಖರೀದಿ ಮಾಡಿತ್ತು.

ಟಾಟಾ ಗ್ರೂಪ್ ಮತ್ತು ಆ್ಯಪಲ್​ನ ನಡುವೆ ಸಹಭಾಗಿತ್ವ ದಿನೇದಿನೇ ಹೆಚ್ಚುತ್ತಲೇ ಇದೆ. ಐಫೋನ್​ನ ಕವಚ ಅಥವಾ ಮೊಬೈಲ್ ಕೇಸ್​ಗಳನ್ನು (iPhone Enclosure) ಟಾಟಾ ಸಂಸ್ಥೆ ತಯಾರಿಸಿಕೊಡುತ್ತಿದೆ. ಈ ಘಟಕ ಕೂಡ ಹೊಸೂರಿನಲ್ಲೇ ಇದೆ. ಈಗ ಪ್ರತ್ಯೇಕವಾಗಿ ಐಫೋನ್ ಅಸೆಂಬ್ಲಿ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಟಾಟಾ ಗ್ರೂಪ್ ದೇಶಾದ್ಯಂತ ಆ್ಯಪಲ್ ಉತ್ಪನ್ನಗಳ ಮಾರಾಟಕ್ಕೆ ರೀಟೇಲ್ ಅಂಗಡಿಗಳನ್ನು ತೆರೆಯಲು ಯೋಜಿಸಿದೆ.

ಇದನ್ನೂ ಓದಿ: Starbucks: ಒಂದು ಟ್ವೀಟ್ ಕಾರಣಕ್ಕೆ ಲಕ್ಷ ಕೋಟಿ ರೂ ನಷ್ಟ ಮಾಡಿಕೊಂಡ ಸ್ಟಾರ್​ಬಕ್ಸ್

ಆ್ಯಪಲ್ ಸಂಸ್ಥೆಯೇ ಖುದ್ದಾಗಿ ಎರಡು ಕಡೆ ಸ್ಟೋರ್​ಗಳನ್ನು ತೆರೆದಿದೆ. ಮುಂಬೈ ಮತ್ತು ದೆಹಲಿಯಲ್ಲಿ ಆ್ಯಪಲ್ ಸ್ಟೋರ್​ಗಳಿವೆ. ಇನ್ನೂ ಮೂರು ಸ್ಟೋರ್​ಗಳನ್ನು ಆರಂಭಿಸುವ ಸಾಧ್ಯತೆ ಇದೆ. ಆದರೆ, ಟಾಟಾ ಗ್ರೂಪ್​ನಿಂದ ನಡೆಸಲಾಗುವುದು ರೀಟೇಲ್ ಔಟ್​ಲೆಟ್​ಗಳು ಮಾತ್ರ. ಅಂದರೆ ಆ್ಯಪಲ್ ಉತ್ಪನ್ನಗಳ ಮಾರಾಟ ಮಾತ್ರ ಆಗುತ್ತವೆ. ಆ್ಯಪಲ್ ಸ್ಟೋರ್​ನಲ್ಲಿ ಎಕ್ಸ್​ಪೀರಿಯೆನ್ಸ್ ಸೆಂಟರ್ ಇತ್ಯಾದಿ ಸಮಗ್ರ ಸೌಲಭ್ಯಗಳು ಇರುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Fri, 8 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ