Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್

ಬೆಂಗಳೂರು ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್
ವಿಸ್ಟ್ರಾನ್‌
Follow us
Ganapathi Sharma
|

Updated on: May 16, 2023 | 6:21 PM

ಬೆಂಗಳೂರು: ನಗರದ ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬಲ್ಲ ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಕಳೆದ ತಿಂಗಳು ಆ್ಯಪಲ್ ಸಿಇಒ ಟಿಮ್ ಕುಕ್ ಮುಂಬೈನಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಕಂಪನಿಯ ಪ್ರಮುಖ ಮಳಿಗೆಗಳನ್ನು ಪ್ರಾರಂಭಿಸುವ ಉದ್ದೇಶದೊಂದಿಗೆ ಕುಕ್ ಭಾರತಕ್ಕೆ ಭೇಟಿ ನೀಡಿದ್ದರು.

ಟಿಮ್ ಕುಕ್ ಮುಂಬೈ ಭೇಟಿ ವೇಳೆ, ಭಾರತದಲ್ಲಿ ಉತ್ಪಾದನೆಗೆ ಸಬಂಧಿಸಿದ ಟಾಟಾ ಗ್ರೂಪ್​ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿತ್ತು. ಇಷ್ಟೇ ಅಲ್ಲದೆ, ಸಾಲ್ಟ್-ಟು-ಕಾರ್ಸ್ ಸಮೂಹದೊಂದಿಗೆ ಸಹಭಾಗಿತ್ವ ಹೊಂದುವ ಬಗ್ಗೆಯೂ ಆ್ಯಪಲ್ ಮುಖ್ಯಸ್ಥರು ಮಾತುಕತೆ ನಡೆಸಿದ್ದರು.

ಇತರ ಉದ್ಯಮ ಅವಕಾಶಗಳನ್ನು ವಿಸ್ತರಿಸುವ ಗುರಿಯೊಂದಿಗೆ ಕಾರ್ಯಾಚರಣೆಗಳನ್ನು ಕಡಿತಗೊಳಿಸಲು ವಿಸ್ಟ್ರಾನ್ ಬಯಸಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಆದರೆ, ಸಂಪೂರ್ಣವಾಗಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯಿಂದ ವಿಸ್ಟ್ರಾನ್ ನಿರ್ಗಮಿಸುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಚಂದ್ರಶೇಖರನ್ ಅವರ ಮೇಲ್ವಿಚಾರಣೆಯಲ್ಲಿ, ಕೆಲವು ಟಾಟಾ ಅಧಿಕಾರಿಗಳು ವಿಸ್ಟ್ರಾನ್ ಘಟಕದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ವಿಸ್ಟ್ರಾನ್ ಮತ್ತು ಆ್ಯಪಲ್ ಸಹ ಸಂಭಾವ್ಯ ಪರಿವರ್ತನೆಯ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್