AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್

ಬೆಂಗಳೂರು ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್
ವಿಸ್ಟ್ರಾನ್‌
ಗಣಪತಿ ಶರ್ಮಾ
|

Updated on: May 16, 2023 | 6:21 PM

Share

ಬೆಂಗಳೂರು: ನಗರದ ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬಲ್ಲ ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಕಳೆದ ತಿಂಗಳು ಆ್ಯಪಲ್ ಸಿಇಒ ಟಿಮ್ ಕುಕ್ ಮುಂಬೈನಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಕಂಪನಿಯ ಪ್ರಮುಖ ಮಳಿಗೆಗಳನ್ನು ಪ್ರಾರಂಭಿಸುವ ಉದ್ದೇಶದೊಂದಿಗೆ ಕುಕ್ ಭಾರತಕ್ಕೆ ಭೇಟಿ ನೀಡಿದ್ದರು.

ಟಿಮ್ ಕುಕ್ ಮುಂಬೈ ಭೇಟಿ ವೇಳೆ, ಭಾರತದಲ್ಲಿ ಉತ್ಪಾದನೆಗೆ ಸಬಂಧಿಸಿದ ಟಾಟಾ ಗ್ರೂಪ್​ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿತ್ತು. ಇಷ್ಟೇ ಅಲ್ಲದೆ, ಸಾಲ್ಟ್-ಟು-ಕಾರ್ಸ್ ಸಮೂಹದೊಂದಿಗೆ ಸಹಭಾಗಿತ್ವ ಹೊಂದುವ ಬಗ್ಗೆಯೂ ಆ್ಯಪಲ್ ಮುಖ್ಯಸ್ಥರು ಮಾತುಕತೆ ನಡೆಸಿದ್ದರು.

ಇತರ ಉದ್ಯಮ ಅವಕಾಶಗಳನ್ನು ವಿಸ್ತರಿಸುವ ಗುರಿಯೊಂದಿಗೆ ಕಾರ್ಯಾಚರಣೆಗಳನ್ನು ಕಡಿತಗೊಳಿಸಲು ವಿಸ್ಟ್ರಾನ್ ಬಯಸಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಆದರೆ, ಸಂಪೂರ್ಣವಾಗಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯಿಂದ ವಿಸ್ಟ್ರಾನ್ ನಿರ್ಗಮಿಸುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಚಂದ್ರಶೇಖರನ್ ಅವರ ಮೇಲ್ವಿಚಾರಣೆಯಲ್ಲಿ, ಕೆಲವು ಟಾಟಾ ಅಧಿಕಾರಿಗಳು ವಿಸ್ಟ್ರಾನ್ ಘಟಕದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ವಿಸ್ಟ್ರಾನ್ ಮತ್ತು ಆ್ಯಪಲ್ ಸಹ ಸಂಭಾವ್ಯ ಪರಿವರ್ತನೆಯ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ