AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್

ಬೆಂಗಳೂರು ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ.

Tata Group: ಬೆಂಗಳೂರಿನಲ್ಲಿ ಐಫೋನ್ ಉತ್ಪಾದನೆ ಆರಂಭಿಸಿದ ಟಾಟಾ ಗ್ರೂಪ್
ವಿಸ್ಟ್ರಾನ್‌
Ganapathi Sharma
|

Updated on: May 16, 2023 | 6:21 PM

Share

ಬೆಂಗಳೂರು: ನಗರದ ಹೊರವಲಯದ ನರಸಾಪುರದಲ್ಲಿರುವ ಆ್ಯಪಲ್ ಐಫೋನ್ ತಯಾರಿಯಲ್ಲಿ ತೊಡಗಿರುವ ವಿಸ್ಟ್ರಾನ್‌ ಕಂಪನಿಯ ಘಟಕವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಪೂರ್ಣಗೊಳಿಸುವ ಮೂಲಕ ಟಾಟಾ ಗ್ರೂಪ್ ದೇಶದಲ್ಲಿ ಸ್ಮಾರ್ಟ್‌ಫೋನ್ ತಯಾರಿಕೆ ಆರಂಭಿಸಿದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ಬಲ್ಲ ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಕಳೆದ ತಿಂಗಳು ಆ್ಯಪಲ್ ಸಿಇಒ ಟಿಮ್ ಕುಕ್ ಮುಂಬೈನಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಕಂಪನಿಯ ಪ್ರಮುಖ ಮಳಿಗೆಗಳನ್ನು ಪ್ರಾರಂಭಿಸುವ ಉದ್ದೇಶದೊಂದಿಗೆ ಕುಕ್ ಭಾರತಕ್ಕೆ ಭೇಟಿ ನೀಡಿದ್ದರು.

ಟಿಮ್ ಕುಕ್ ಮುಂಬೈ ಭೇಟಿ ವೇಳೆ, ಭಾರತದಲ್ಲಿ ಉತ್ಪಾದನೆಗೆ ಸಬಂಧಿಸಿದ ಟಾಟಾ ಗ್ರೂಪ್​ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿತ್ತು. ಇಷ್ಟೇ ಅಲ್ಲದೆ, ಸಾಲ್ಟ್-ಟು-ಕಾರ್ಸ್ ಸಮೂಹದೊಂದಿಗೆ ಸಹಭಾಗಿತ್ವ ಹೊಂದುವ ಬಗ್ಗೆಯೂ ಆ್ಯಪಲ್ ಮುಖ್ಯಸ್ಥರು ಮಾತುಕತೆ ನಡೆಸಿದ್ದರು.

ಇತರ ಉದ್ಯಮ ಅವಕಾಶಗಳನ್ನು ವಿಸ್ತರಿಸುವ ಗುರಿಯೊಂದಿಗೆ ಕಾರ್ಯಾಚರಣೆಗಳನ್ನು ಕಡಿತಗೊಳಿಸಲು ವಿಸ್ಟ್ರಾನ್ ಬಯಸಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. ಆದರೆ, ಸಂಪೂರ್ಣವಾಗಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯಿಂದ ವಿಸ್ಟ್ರಾನ್ ನಿರ್ಗಮಿಸುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಚಂದ್ರಶೇಖರನ್ ಅವರ ಮೇಲ್ವಿಚಾರಣೆಯಲ್ಲಿ, ಕೆಲವು ಟಾಟಾ ಅಧಿಕಾರಿಗಳು ವಿಸ್ಟ್ರಾನ್ ಘಟಕದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ವಿಸ್ಟ್ರಾನ್ ಮತ್ತು ಆ್ಯಪಲ್ ಸಹ ಸಂಭಾವ್ಯ ಪರಿವರ್ತನೆಯ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್