AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Motors: ಏಪ್ರಿಲ್ 23ರಿಂದ ಅನ್ವಯಿಸುವಂತೆ ಟಾಟಾ ಮೋಟಾರ್ಸ್ ಪ್ರಯಾಣಿಕರ ವಾಹನಗಳ ಬೆಲೆ ಹೆಚ್ಚಳ

ಟಾಟಾ ಮೋಟಾರ್ಸ್​ನಿಂದ ಏಪ್ರಿಲ್​ 23ನೇ ತಾರೀಕಿನ ಶನಿವಾರದಿಂದ ಅನ್ವಯ ಆಗುವಂತೆ ಪ್ರಯಾಣಿಕರ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

Tata Motors: ಏಪ್ರಿಲ್ 23ರಿಂದ ಅನ್ವಯಿಸುವಂತೆ ಟಾಟಾ ಮೋಟಾರ್ಸ್ ಪ್ರಯಾಣಿಕರ ವಾಹನಗಳ ಬೆಲೆ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 23, 2022 | 4:12 PM

Share

ಭಾರತದ ಪ್ರಮುಖ ವಾಹನ ತಯಾರಕ ಕಂಪೆನಿಯಾದ ಟಾಟಾ ಮೋಟಾರ್ಸ್​ನಿಂದ (Tata Motors) ಏಪ್ರಿಲ್ 23ನೇ ತಾರೀಕಿನ ಶನಿವಾರದಂದು ತನ್ನ ಪ್ರಯಾಣಿಕ ವಾಹನಗಳಾದ್ಯಂತ ಬೆಲೆ ಹೆಚ್ಚಳವನ್ನು ಘೋಷಣೆ ಮಾಡಲಾಗಿದೆ. ಇನ್​ಪುಟ್ ವೆಚ್ಚದಲ್ಲಿನ ಏರಿಕೆಯನ್ನು ಈಗಿನ ಬೆಲೆ ಹೆಚ್ಚಳವು ಭಾಗಶಃ ಸರಿದೂಗಿಸುತ್ತದೆ. “ಇಂದು (ಏಪ್ರಿಲ್ 23, 2022) ಜಾರಿಗೆ ಬರಲಿದೆ, ವೇರಿಯಂಟ್ ಮತ್ತು ಮಾಡೆಲ್ ಅನ್ನು ಅವಲಂಬಿಸಿ ವೇಯ್ಟೆಡ್ ಸರಾಸರಿ ಹೆಚ್ಚಳವು ಶೇ 1.1ರಷ್ಟು ಆಗಿದೆ,” ಎಂದು ಟಾಟಾ ಮೋಟಾರ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈ ಮೂಲದ ವಾಹನ ತಯಾರಕ ಕಂಪೆನಿಯಾದ ಟಾಟಾದಿಂದ ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಪಂಚ್ ಮತ್ತು ಹ್ಯಾರಿಯರ್‌ನಂತಹ ವಿವಿಧ ಮಾದರಿಗಳನ್ನು ಮಾರಾಟ ಮಾಡಲಾಗುತ್ತದೆ. ಕಳೆದ ಕೆಲವು ಸಮಯದಿಂದ ಉಕ್ಕು ಸೇರಿದಂತೆ ವಿವಿಧ ಲೋಹಗಳ ಬೆಲೆಯಲ್ಲಿ ಏರಿಕೆ ಆಗುತ್ತಾ ಬಂದಿದೆ. ಈ ಕಾರಣಕ್ಕೆ ಕಳೆದ ಒಂದು ವರ್ಷದಲ್ಲಿ ವಿವಿಧ ಕಾರು ತಯಾರಿಸುವ ಕಂಪೆನಿಗಳು ಹಲವು ಬಾರಿ ಬೆಲೆ ಏರಿಕೆಯನ್ನು ಮಾಡಿವೆ. ಇದೀಗ ಟಾಟಾ ಮೋಟಾರ್ಸ್​ನಿಂದ ಕೂಡ ದರ ಹೆಚ್ಚಳವು ಜಾರಿಗೆ ಬಂದಿದೆ.

ಇತ್ತೀಚೆಗೆ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್​ನಿಂದ ಅದರ ಎಲ್ಲ ಶ್ರೇಣಿಯ ಕಾರುಗಳ ಬೆಲೆಯಲ್ಲೂ ಹೆಚ್ಚಳ ಮಾಡಲಾಗಿದೆ. ಈ ಸಂದರ್ಭದಲ್ಲಿ ದೇಶದ ಪ್ರಮುಖ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ನೀಡಿದ ಕಾರಣ ಸಹ ಕಚ್ಚಾ ವಸ್ತುಗಳ ಬೆಲೆ ಏರಿಕೆ ಎಂಬುದೇ ಆಗಿತ್ತು. ಬೆಲೆ ಹೆಚ್ಚಳದ ಹೊರೆಯ ಸ್ವಲ್ಪ ಭಾಗವನ್ನು ಮಾತ್ರ ಗ್ರಾಹಕರಿಗೆ ವರ್ಗಾವಣೆ ಮಾಡಲಾಗುವುದು ಎಂದು ಎಂಎಸ್​ಐ ತಿಳಿಸಿತ್ತು.

ಇದನ್ನೂ ಓದಿ: Tata Passenger Vehicle Loan : ಪ್ರಯಾಣಿಕರ ವಾಹನ ಸಾಲಕ್ಕೆ ಬಂಧನ್ ಬ್ಯಾಂಕ್​ ಜತೆ ಟಾಟಾ ಮೋಟಾರ್ಸ್ ಒಪ್ಪಂದ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ